25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

22 ವರ್ಷ ಭಾರತಮಾತೆಯ ಸೇವೆ ಸಲ್ಲಿಸಿ ನಿವೃತ್ತಿಗೊಂಡ ಲಾಯಿಲದ ಅಶೋಕ್ ಕುಮಾರ್ ರವರಿಗೆ ಬೆಳ್ತಂಗಡಿಯಲ್ಲಿ ಭವ್ಯ ಸ್ವಾಗತ

ಬೆಳ್ತಂಗಡಿ: ‘ಭಾರತಮಾತೆಯ ಸೇವೆಗೆ ತನ್ನನೇ ತಾನು ಸಮರ್ಪಿಸಿ 22 ವರ್ಷದ ನಿಷ್ಠೆ, ನಿಸ್ವಾರ್ಥದ ಸೇವೆಯನ್ನು ನೀಡಿ ನಿವೃತ್ತಿಗೊಂಡು ಹುಟ್ಟೂರಿಗೆ ಆಗಮಿಸಿದ ಲಾಯಿಲ ಗ್ರಾಮದ ವಿವೇಕಾನ೦ದ ನಗರದ ನಿವಾಸಿ ಹೆಮ್ಮೆಯ ಯೋಧರಾದ ಅಶೋಕ್ ಕುಮಾರ್ ರವರನ್ನು ಬೆಳ್ತಂಗಡಿ ಸಂತೆಕಟ್ಟೆಯಲ್ಲಿ ಸ್ವಾಗತಿಸಲಾಯಿತು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ಮೋಹನ್ ಕಲ್ಮಂಜ, ಮಾಜಿ ಸೈನಿಕ ತಂಗಚ್ಚನ್, ಯುವ ವೇದಿಕೆ, ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಅಧ್ಯಕ್ಷ ಚಂದ್ರಕಾಂತ್ ನಿಡ್ಡಾಜೆ ಮತ್ತು ಪದಾಧಿಕಾರಿಗಳು, ಲಾಯಿಲ ಗ್ರಾಮ ಪಂಚಾಯತ್ ಸದಸ್ಯರಾದ ಗಣೇಶ ಲಾಯಿಲ, ಹರಿಕೃಷ್ಣ, ಅರವಿಂದ, ಮಹೇಶ್, ತಾಲೂಕು ಫೋಟೋಗ್ರಾಫರ್ ಅಸೋಸಿಯೇಷನ ಪದಾಧಿಕಾರಿಗಳು, ಅಶೋಕ್ ಕುಮಾರ್ ರವರ ತಂದೆ ಕೃಷ್ಣಪ್ಪ ಗೌಡ, ತಾಯಿ ವಾರಿಜ, ಪತ್ನಿ ಶಶಿಕಲಾ, ಮಕ್ಕಳಾದ ಸಾಕ್ಷಿ, ಸಾತ್ವಿಕ್ ಬಂಧುಮಿತ್ರರು ಉಪಸ್ಥಿತರಿದ್ದರು.

ಇವರು 23-09-2003ರಲ್ಲಿ ಭಾರತೀಯ ಸೇನೆಗೆ ಸೇರ್ಪಡೆಗೊಂಡು ಬೆ೦ಗಳೂರು, ಜಮ್ಮು, ಪಟ್ನಾಕೋಟ್, ಕೊಲ್ಕತ್ತ, ಅಸ್ಸಾಂ, ರಾಜಸ್ತಾನ ಮತ್ತು ಪುಣೆಯಲ್ಲಿ ಒಟ್ಟು 22 ವರ್ಷಗಳ ಕಾಲ ಭಾರತಾಂಬೆಯ ಸೇವೆಯನ್ನು ಸಲ್ಲಿಸಿ ಇದೀಗ ಸೇವಾ ನಿವೃತ್ತಿಯನ್ನು ಹೊಂದಿರುತ್ತಾರೆ.

Related posts

‘ಪ್ರೇರಣಾ – 2026’ ರಾಷ್ಟ್ರ ಮಟ್ಟದ ಸಾಂಸ್ಕೃತಿಕ ಉತ್ಸವ : ಉಜಿರೆಯ ಎಸ್.ಡಿ.ಎಂ ಕಾಲೇಜು ಚಾಂಪಿಯನ್ಸ್

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಗೇರುಕಟ್ಟೆ: ವರ್ಗಾವಣೆ ಹೊಂದಿದ ಶಿಕ್ಷಕಿ ಮಮತಾರಿಗೆ ಸನ್ಮಾನ

Suddi Udaya

ಪ್ರಸಿದ್ಧ ಗುಜರಾತ್ ಉದ್ಯಮಿ ಶಶಿಧ‌ರ್ ಶೆಟ್ಟಿ ನವಶಕ್ತಿ ಯವರಿಗೆ ಮಾತೃ ವಿಯೋಗ

Suddi Udaya

ವಿಧಾನ ಸಭಾ ಚುನಾವಣೆ:241 ಬೂತುಗಳ ಸೆಕ್ಟರ್ ಅಧಿಕಾರಿಗಳು ಹಾಗೂ ಬಿ.ಎಲ್.ಓ.ಗಳ ಸಭೆ

Suddi Udaya

ವೇಣೂರು: ಜಯಶೀಲಾ ಪೈ ನಿಧನ

Suddi Udaya
error: Content is protected !!