23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

22 ವರ್ಷ ಭಾರತಮಾತೆಯ ಸೇವೆ ಸಲ್ಲಿಸಿ ನಿವೃತ್ತಿಗೊಂಡ ಲಾಯಿಲದ ಅಶೋಕ್ ಕುಮಾರ್ ರವರಿಗೆ ಬೆಳ್ತಂಗಡಿಯಲ್ಲಿ ಭವ್ಯ ಸ್ವಾಗತ

ಬೆಳ್ತಂಗಡಿ: ‘ಭಾರತಮಾತೆಯ ಸೇವೆಗೆ ತನ್ನನೇ ತಾನು ಸಮರ್ಪಿಸಿ 22 ವರ್ಷದ ನಿಷ್ಠೆ, ನಿಸ್ವಾರ್ಥದ ಸೇವೆಯನ್ನು ನೀಡಿ ನಿವೃತ್ತಿಗೊಂಡು ಹುಟ್ಟೂರಿಗೆ ಆಗಮಿಸಿದ ಲಾಯಿಲ ಗ್ರಾಮದ ವಿವೇಕಾನ೦ದ ನಗರದ ನಿವಾಸಿ ಹೆಮ್ಮೆಯ ಯೋಧರಾದ ಅಶೋಕ್ ಕುಮಾರ್ ರವರನ್ನು ಬೆಳ್ತಂಗಡಿ ಸಂತೆಕಟ್ಟೆಯಲ್ಲಿ ಸ್ವಾಗತಿಸಲಾಯಿತು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ಮೋಹನ್ ಕಲ್ಮಂಜ, ಮಾಜಿ ಸೈನಿಕ ತಂಗಚ್ಚನ್, ಯುವ ವೇದಿಕೆ, ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಅಧ್ಯಕ್ಷ ಚಂದ್ರಕಾಂತ್ ನಿಡ್ಡಾಜೆ ಮತ್ತು ಪದಾಧಿಕಾರಿಗಳು, ಲಾಯಿಲ ಗ್ರಾಮ ಪಂಚಾಯತ್ ಸದಸ್ಯರಾದ ಗಣೇಶ ಲಾಯಿಲ, ಹರಿಕೃಷ್ಣ, ಅರವಿಂದ, ಮಹೇಶ್, ತಾಲೂಕು ಫೋಟೋಗ್ರಾಫರ್ ಅಸೋಸಿಯೇಷನ ಪದಾಧಿಕಾರಿಗಳು, ಅಶೋಕ್ ಕುಮಾರ್ ರವರ ತಂದೆ ಕೃಷ್ಣಪ್ಪ ಗೌಡ, ತಾಯಿ ವಾರಿಜ, ಪತ್ನಿ ಶಶಿಕಲಾ, ಮಕ್ಕಳಾದ ಸಾಕ್ಷಿ, ಸಾತ್ವಿಕ್ ಬಂಧುಮಿತ್ರರು ಉಪಸ್ಥಿತರಿದ್ದರು.

ಇವರು 23-09-2003ರಲ್ಲಿ ಭಾರತೀಯ ಸೇನೆಗೆ ಸೇರ್ಪಡೆಗೊಂಡು ಬೆ೦ಗಳೂರು, ಜಮ್ಮು, ಪಟ್ನಾಕೋಟ್, ಕೊಲ್ಕತ್ತ, ಅಸ್ಸಾಂ, ರಾಜಸ್ತಾನ ಮತ್ತು ಪುಣೆಯಲ್ಲಿ ಒಟ್ಟು 22 ವರ್ಷಗಳ ಕಾಲ ಭಾರತಾಂಬೆಯ ಸೇವೆಯನ್ನು ಸಲ್ಲಿಸಿ ಇದೀಗ ಸೇವಾ ನಿವೃತ್ತಿಯನ್ನು ಹೊಂದಿರುತ್ತಾರೆ.

Related posts

ಬೆಳ್ತಂಗಡಿ : ರಸ್ತೆಯಲ್ಲಿ ಧೂಳೋ ಧೂಳ್ ಪ್ರಯಾಣಿಕರಿಗೆ ಸಂಕಟ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಧರ್ಮಸ್ಥಳ ಸಮುದಾಯದ ಅಭಿವೃದ್ಧಿ ವಿಭಾಗ ಆಶ್ರಯದಲ್ಲಿ 418 ಶಾಲೆಗಳಿಗೆ ರೂ.2.50 ಕೋಟಿ ಮೊತ್ತದ 3472 ಜೊತೆ ಪೀಠೋಪಕರಣ ವಿತರಣೆಗೆ ಡಾ.ಹೆಗ್ಗಡೆ ಚಾಲನೆ

Suddi Udaya

ಪೆರಾಜೆ ಕಿಂಡಿ ಅಣೆಕಟ್ಟುವಿನಲ್ಲಿ ಶೇಖರಣೆಗೊಂಡ ಮರದ ದಿಮ್ಮಿಗಳು ಬಳಂಜ ಗ್ರಾಮ ಪಂಚಾಯತ್ ನಿಂದ ತೆರವು ಕಾರ್ಯ

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯ ರಜತ ಸಂಭ್ರಮ: ಸಂಸದ ನಳಿನ್ ಕುಮಾರ್ ಕಟೀಲ್ ಗೆ ಆಮಂತ್ರಣ

Suddi Udaya

ವೇಣೂರು ಐಟಿಐಯಲ್ಲಿ ವಾರ್ಷಿಕ ಕ್ರೀಡೋತ್ಸವ

Suddi Udaya

ಅರಣ್ಯದ ನಡುವೆ ಬಿಟ್ಟು ಹೋದ ಮಾರುತಿ ಕಾರು-ವಾರುಸುದಾರರ ಸುಳಿವಿಲ್ಲ

Suddi Udaya
error: Content is protected !!