September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ: ಗ್ರಾ.ಪಂ ಮಾಜಿ ಸದಸ್ಯ ಮುಹಮ್ಮದ್‌ ಕುಂಞಿ ನಿಧನ

ಉಜಿರೆ : ಕುಂಟಿನಿ‌ ನಿವಾಸಿ ನಿವೃತ್ತ ವಿದೇಶಿ ಉದ್ಯೋಗಿ ಕತಾರ್ ಮುಹಮ್ಮದ್ ಕುಂಞಿ (67ವ) ಅವರು ಅ.3 ರಂದು ಕುಂಟಿನಿ ಮಸ್ಜಿದ್ ನಲ್ಲೇ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಅವರು ನಮಾಝ್ ಗಾಗಿ ಮಸ್ಜಿದ್ ಗೆ ತೆರಳಿದ್ದವರು ಅಲ್ಲಿಯ ಹಠಾತ್ತನೇ ಹೃದಯಾಘಾತವಾಗಿ ಕೊನೆಯುಸಿರೆಳೆದರು. ತಕ್ಷಣ ಅವರನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ಕರೆತರಲಾಯಿತಾದರೂ ವೈದ್ಯರು ಸಾವನ್ನಪ್ಪಿರುವ ಬಗ್ಗೆ ಖಚಿತಪಡಿಸಿದರು.

ವಿದೇಶದ ಕತಾರ್ ಕ್ರೀಡಾ ಘಟಕವಾದ ಫಿಫಾ ಅಸೋಸಿಯೇಷನ್ ನಲ್ಲಿ ಸುದೀರ್ಘ 30 ವರ್ಷ ಸೇವೆ ಸಲ್ಲಿಸಿ ಕೆಲ ವರ್ಷಗಳ ಹಿಂದೆ ಊರಿಗೆ ಮರಳಿದ್ದರು. ಲಾಯಿಲ ಗ್ರಾ.ಪಂ ಮಾಜಿ ಸದಸ್ಯರಾಗಿದ್ದ ಅವರು ಕಾಂಗ್ರೆಸ್ ಪಕ್ಷದ ತಾಲೂಕು ಅಲ್ಪ ಸಂಖ್ಯಾತ ಘಟಕದ ಉಪಾಧ್ಯಕ್ಷರಾಗಿ ಸೇವೆಯಲ್ಲಿದ್ದರು. ಕುಂಟಿನಿ ಅಲ್ ಬುಖಾರಿ ಜುಮ್ಮಾ ಮಸ್ಜಿದ್ ಇದರ ನಿರ್ಮಾಣ ಕಾರ್ಯದಲ್ಲಿ ಪ್ರಮುಖ ಪಾತ್ರವಹಿಸಿದ್ದ‌ ಅವರು ಆಡಳಿತ ಮಂಡಳಿಯ ಮಾಜಿ ಅಧ್ಯಕ್ಷರೂ ಆಗಿದ್ದಾರೆ. ಸಮಾಜ ಸೇವಕರಾಗಿದ್ದ ಅವರು ಕತಾರ್ ಮುಸ್ಲಿಂ ಅಸೋಸಿಯೇಷನ್ ಸಂಘಟನೆಯ ಹೆಸರಿನಲ್ಲಿ ಬೆಳ್ತಂಗಡಿ ಸರಕಾರಿ ಸಾರ್ವಜನಿಕ ಆಸ್ಪತ್ರೆಗೆ ಡಯಾಲಿಸಿಸ್ ಯಂತ್ರ ಕೊಡುಗೆಯಾಗಿ ನೀಡುವಲ್ಲಿ ಪ್ರಮುಖ ಕಾರಣಕರ್ತರಾಗಿದ್ದರು.

ಮೃತರು ಪತ್ನಿ ಖತೀಜಮ್ಮ, ಏಳು ಪುತ್ರರು, ಓರ್ವೆ ಹೆಣ್ಣು ಹಾಗೂ ಬಂಧು ವರ್ಗದವರನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ : ಆಭರಣ ಜ್ಯುವೆಲರಿಗೆ ಐಟಿ ದಾಳಿ ಪ್ರಕರಣ: ಬೆಳ್ತಂಗಡಿ ಆಭರಣ ಶಾಪ್ ನ ಐಟಿ ದಾಳಿ ಮುಕ್ತಾಯ

Suddi Udaya

ಉಜಿರೆ: ವರ್ತಕರ ಸಂಘದ ನೂತನ ಅಧ್ಯಕ್ಷ ಪ್ರಸಾದ್ ಬಿಎಸ್ ಮತ್ತು ತಂಡದ ಪದಪ್ರದಾನ ಹಾಗೂ ಕುಟುಂಬ ಮಿಲನ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ‘ಕಾಮರ್ಸ್ ಕ್ಯಾಂಪಸ್’ ಅಸೋಸಿಯೇಷನ್ ಪದಗ್ರಹಣ ಸಮಾರಂಭ

Suddi Udaya

‘ಪ್ರೇರಣಾ – 2026’ ರಾಷ್ಟ್ರ ಮಟ್ಟದ ಸಾಂಸ್ಕೃತಿಕ ಉತ್ಸವ : ಉಜಿರೆಯ ಎಸ್.ಡಿ.ಎಂ ಕಾಲೇಜು ಚಾಂಪಿಯನ್ಸ್

Suddi Udaya

ಆ.1 ರಿಂದ 15ರ ವರೆಗೆ ಶ್ರೀ ದುರ್ಗಾ ಟೆಕ್ಸ್ ಟೈಲ್ಸ್ ನಲ್ಲಿ ಸಾರಿಮೇಳ: ಗ್ರಾಹಕರಿಗೆಂದೇ ಆಯ್ದು ತಂದ ವಿವಿಧ ಉಡುಪುಗಳ ಮೇಲೆ ಡಿಸ್ಕೌಂಟ್ ಸೇಲ್

Suddi Udaya

ಗುರುವಾಯನಕೆರೆ ಸ.ಪ್ರೌ. ಶಾಲೆಯ ಚಿತ್ರಕಲಾ ಶಿಕ್ಷಕ ವಿ.ಕೆ ವಿಟ್ಲ ರವರಿಗೆ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

Suddi Udaya
error: Content is protected !!