July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ: ಗ್ರಾ.ಪಂ ಮಾಜಿ ಸದಸ್ಯ ಮುಹಮ್ಮದ್‌ ಕುಂಞಿ ನಿಧನ

ಉಜಿರೆ : ಕುಂಟಿನಿ‌ ನಿವಾಸಿ ನಿವೃತ್ತ ವಿದೇಶಿ ಉದ್ಯೋಗಿ ಕತಾರ್ ಮುಹಮ್ಮದ್ ಕುಂಞಿ (67ವ) ಅವರು ಅ.3 ರಂದು ಕುಂಟಿನಿ ಮಸ್ಜಿದ್ ನಲ್ಲೇ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಅವರು ನಮಾಝ್ ಗಾಗಿ ಮಸ್ಜಿದ್ ಗೆ ತೆರಳಿದ್ದವರು ಅಲ್ಲಿಯ ಹಠಾತ್ತನೇ ಹೃದಯಾಘಾತವಾಗಿ ಕೊನೆಯುಸಿರೆಳೆದರು. ತಕ್ಷಣ ಅವರನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ಕರೆತರಲಾಯಿತಾದರೂ ವೈದ್ಯರು ಸಾವನ್ನಪ್ಪಿರುವ ಬಗ್ಗೆ ಖಚಿತಪಡಿಸಿದರು.

ವಿದೇಶದ ಕತಾರ್ ಕ್ರೀಡಾ ಘಟಕವಾದ ಫಿಫಾ ಅಸೋಸಿಯೇಷನ್ ನಲ್ಲಿ ಸುದೀರ್ಘ 30 ವರ್ಷ ಸೇವೆ ಸಲ್ಲಿಸಿ ಕೆಲ ವರ್ಷಗಳ ಹಿಂದೆ ಊರಿಗೆ ಮರಳಿದ್ದರು. ಲಾಯಿಲ ಗ್ರಾ.ಪಂ ಮಾಜಿ ಸದಸ್ಯರಾಗಿದ್ದ ಅವರು ಕಾಂಗ್ರೆಸ್ ಪಕ್ಷದ ತಾಲೂಕು ಅಲ್ಪ ಸಂಖ್ಯಾತ ಘಟಕದ ಉಪಾಧ್ಯಕ್ಷರಾಗಿ ಸೇವೆಯಲ್ಲಿದ್ದರು. ಕುಂಟಿನಿ ಅಲ್ ಬುಖಾರಿ ಜುಮ್ಮಾ ಮಸ್ಜಿದ್ ಇದರ ನಿರ್ಮಾಣ ಕಾರ್ಯದಲ್ಲಿ ಪ್ರಮುಖ ಪಾತ್ರವಹಿಸಿದ್ದ‌ ಅವರು ಆಡಳಿತ ಮಂಡಳಿಯ ಮಾಜಿ ಅಧ್ಯಕ್ಷರೂ ಆಗಿದ್ದಾರೆ. ಸಮಾಜ ಸೇವಕರಾಗಿದ್ದ ಅವರು ಕತಾರ್ ಮುಸ್ಲಿಂ ಅಸೋಸಿಯೇಷನ್ ಸಂಘಟನೆಯ ಹೆಸರಿನಲ್ಲಿ ಬೆಳ್ತಂಗಡಿ ಸರಕಾರಿ ಸಾರ್ವಜನಿಕ ಆಸ್ಪತ್ರೆಗೆ ಡಯಾಲಿಸಿಸ್ ಯಂತ್ರ ಕೊಡುಗೆಯಾಗಿ ನೀಡುವಲ್ಲಿ ಪ್ರಮುಖ ಕಾರಣಕರ್ತರಾಗಿದ್ದರು.

ಮೃತರು ಪತ್ನಿ ಖತೀಜಮ್ಮ, ಏಳು ಪುತ್ರರು, ಓರ್ವೆ ಹೆಣ್ಣು ಹಾಗೂ ಬಂಧು ವರ್ಗದವರನ್ನು ಅಗಲಿದ್ದಾರೆ.

Related posts

ಗೇರುಕಟ್ಟೆ : ಕಳಿಯ ಗ್ರಾಮ ಪಂಚಾಯತ್ ನಲ್ಲಿ ಸ್ವಚ್ಛತಾ ಜಾಗೃತಿ ಅಭಿಯಾನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಪ್ರೇರಣಾ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಸದಸ್ಯರಿಗೆ ಶೇ.13 ಡಿವಿಡೆಂಡ್

Suddi Udaya

ಶಿಶಿಲೇಶ್ವರ ದೇವಸ್ಥಾನದಲ್ಲಿ ಊರವರಿಂದ ಶ್ರಮದಾನ

Suddi Udaya

ಮೈರೋಳ್ತಡ್ಕ ಸ.ಉ. ಶಾಲೆಗೆ ಅಂಡೆಕೇರಿ ಬದ್ರಿಯಾ ಜುಮಾ ಮಸೀದಿ ವತಿಯಿಂದ ಶುದ್ಧ ನೀರಿನ ಘಟಕ ಕೊಡುಗೆ

Suddi Udaya

ಎಸ್. ಡಿ.ಎಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಪೌರತ್ವ ತರಬೇತಿ ಶಿಬಿರ ಉದ್ಘಾಟನಾ ಸಮಾರಂಭ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ‘ತರಗತಿ ಕೋಣೆ ನಿರ್ವಹಣೆ’ ಕಾರ್ಯಾಗಾರ

Suddi Udaya
error: Content is protected !!