22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ : ಆರು ಮಂದಿ ಯೂಟ್ಯೂಬರ್ ಗಳಿಗೆ ಎಸ್.ಐ.ಟಿ ಬುಲಾವ್

ಬೆಳ್ತಂಗಡಿ : ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್.ಐ.ಟಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದು. ಎಸ್.ಐ.ಟಿ ಕಚೇರಿಗೆ ಆರು ಮಂದಿ ಯೂಟ್ಯೂಬರ್ ಗಳು ಅ.3 ರಂದು ವಿಚಾರಣೆಗೆ ಹಾಜರಾಗಲು ನೋಟಿಸ್ ಜಾರಿ ಮಾಡಿದ್ದಾರೆ. ಜೊತೆಯಲ್ಲಿ ಹೋರಾಟಗಾರ ಜಯಂತ್.ಟಿ ಮಗ ಜೀವನ್ ಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ‌.

ಯೂಟ್ಯೂಬರ್ ಗಳಾದ ಡಿ ಟಾಸ್ಕ್ ಯೂಟ್ಯೂಬರ್ ದಿನೇಶ್, ದೂತ ಯೂಟ್ಯೂಬರ್ ಸಮೀರ್.ಎಮ್.ಡಿ , ಸಂಚಾರಿ ಸ್ಟೂಡಿಯೋ ಯೂಟ್ಯೂಬರ್ ಸಂತೋಷ್ ಕಡಬ,ಕುಡ್ಲ ರಾಮ್ ಪೇಜ್ ಯೂಟ್ಯೂಬರ್ ಅಜಯ್ ಅಂಚನ್, ಯುನೈಟೆಡ್ ಮೀಡಿಯಾ ಯೂಟ್ಯೂಬರ್ ಅಭಿಷೇಕ್ ಸೇರಿ ಒಟ್ಟು ಆರು ಮಂದಿಗೆ ನೋಟಿಸ್ ಜಾರಿ ಮಾಡಿದ್ದಾರೆ.

ಹೋರಾಟಗಾರ ಜಯಂತ್.ಟಿ ಮಗ ಜೀವನ್ ಬುರುಡೆ ಪ್ರಕರಣದ ಆರೋಪಿ ಚಿನ್ನಯ್ಯನ ವಿಡಿಯೋ ಮಾಡಿದ ಪ್ರಕರಣಕ್ಕೆ ವಿಚಾರಣೆ ಮಾಡಲು ನೋಟಿಸ್ ಜಾರಿ ಮಾಡಿದ್ದಾರೆ ಎನ್ನಲಾಗಿದೆ.

Related posts

ಮಾ.28: ಕನ್ನಡ ಗ್ರಾಮದಲ್ಲಿ ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯೋತ್ಸವ, ಕಾಸರಗೋಡು – ಕರ್ನಾಟಕ ಚುಟುಕು ಕವಿಗೋಷ್ಠಿ

Suddi Udaya

ವಾಣಿ ಆಂ.ಮಾ. ಶಾಲಾ ವಿದ್ಯಾರ್ಥಿ ಶಮಾಳಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ರಾಜ್ಯ ಪುರಸ್ಕಾರ ಪ್ರಶಸ್ತಿ

Suddi Udaya

ಬಜಿರೆಯಲ್ಲಿ ಎರಡು ಕುಟುಂಬಗಳ ನಡುವೆ ಜಾಗದ ಪಾಲಿನ ವಿಷಯದಲ್ಲಿ ಹೊಡೆದಾಟ: ಪರಸ್ಪರ ಆರೋಪಿಸಿ ಪೊಲೀಸರಿಗೆ ದೂರು

Suddi Udaya

ಡಿ.16: ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ‘ಕೋರಿ ಜಾತ್ರೆ’

Suddi Udaya

ಧರ್ಮಸ್ಥಳ ನೇರ್ತನೆಯಲ್ಲಿ ಕಾಡಾನೆ ದಾಳಿ :ಕೃಷಿಗೆ ಹಾನಿ   

Suddi Udaya

ಭರತನಾಟ್ಯದಲ್ಲಿ ಅಂಡಿಂಜೆಯ ಸಾನ್ವಿ ಸಾಲಿಯಾನ್‌ಗೆ ಡಿಸ್ಟಿಂಕ್ಷನ್

Suddi Udaya
error: Content is protected !!