July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಪಿ.ಎಂ. ಶ್ರೀ ಸ.ಮಾ.ಹಿ.ಪ್ರಾ. ಶಾಲೆಯಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹುದ್ದೂರ್ ಶಾಸ್ತ್ರಿ ಜನ್ಮದಿನಾಚರಣೆ

ಬೆಳ್ತಂಗಡಿ : ಗಾಂಧೀಜಿಯವರ ಸತ್ಯ ಅಹಿಂಸೆ ಮುಂತಾದ ಆದರ್ಶಗಳು ಮತ್ತು ಲಾಲ್ ಬಹುದ್ದೂರ್ ಶಾಸ್ತ್ರಿಯವರ ದೇಶ ಪ್ರೇಮ ನಮಗೆ ದಾರಿದೀಪವಾಗಿದ್ದು ಅದನ್ನು ನಮ್ಮ ಜೀವನದಲ್ಲಿ ಅನುಸರಿಸಿಕೊಂಡು ನಡೆಯಬೇಕೆಂದು ಶಾಲೆಯ ಹಿರಿಯ ಶಿಕ್ಷಕರಾದ ದಿನಕರ ಇವರು ಗಾಂಧಿ ಜಯಂತಿ ಮತ್ತು ಲಾಲ್ ಬಹುದ್ದೂರ್ ಶಾಸ್ತ್ರಿ ಅವರ ಜನ್ಮದಿನಾಚರಣೆಯ ಮಹತ್ವವನ್ನು ತಿಳಿಸಿದರು.

ಕಾರ್ಯಕ್ರಮವು ಶಾಲೆಯ ಪ್ರಾರ್ಥನೆಯೊಂದಿಗೆ ಆರಂಭಗೊಂಡಿತು. ನಂತರ ಗಾಂಧೀಜಿಯವರ ಭಾವಚಿತ್ರಕ್ಕೆ ಹಿರಿಯ ಶಿಕ್ಷಕ ದಿನಾಕರ ಮತ್ತು ಎಸ್ ಡಿ ಎಂ ಸಿ ಸದಸ್ಯರಾದ ವಿಘ್ನೇಶ ಆಚಾರ್ಯ , ಲಕ್ಷ್ಮೀಶ ದೇವಾಡಿಗ ಮತ್ತು ಅಕ್ಷರ ದಾಸೋಹ ಅಡುಗೆಯ ಸಹಾಯಕರು ಶ್ರೀಮತಿ ಮೀನಾಕ್ಷಿ, ಶ್ರೀಮತಿ ನಲಿನಿ, ಶಾಲೆಯ ವಿದ್ಯಾರ್ಥಿನಿ ಪ್ರಿಯಾ ಆಚಾರ್ಯ ವಿದ್ಯಾರ್ಥಿ ಪ್ಯಾರಿಸ್ ಅಲಿ ಮತ್ತು ಹಳೆ ವಿದ್ಯಾರ್ಥಿ ಫೈರೋಜ್ ಪುಷ್ಪಾರ್ಚನೆ ಸಲ್ಲಿಸಿದರು.

Related posts

ಬೆಳ್ತಂಗಡಿ ಆದಿ ದ್ರಾವಿಡ ಸಮಾಜ ಸೇವಾ ಸಂಘದ ಸಾಮಾನ್ಯ ಸಭೆ: ಪದಾಧಿಕಾರಿಗಳ ಆಯ್ಕೆ

Suddi Udaya

ವಿದ್ವತ್ ಪಿ.ಯು. ಕಾಲೇಜಿನಲ್ಲಿ ಗಾಂಧಿಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರೀ ಜನ್ಮದಿನಾಚರಣೆ

Suddi Udaya

ಡಿ.16-30: ಧರ್ಮಸ್ಥಳದಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ

Suddi Udaya

ಮಡಂತ್ಯಾರು ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿಯ 35ನೇ ವರ್ಷದ ಮೊಸರು ಕುಡಿಕೆ ಉತ್ಸವದ ಗೌರವಾಧ್ಯಕ್ಷರಾಗಿ ಪದ್ಮನಾಭ ಸುವರ್ಣ ಬಳ್ಳಮಂಜ, ಅಧ್ಯಕ್ಷರಾಗಿ ಪ್ರಶಾಂತ್ ಎಂ. ಪಾರೆಂಕಿ ಆಯ್ಕೆ

Suddi Udaya

ಗುರುವಾಯನಕೆರೆ: ಜ್ಞಾನ ವಿಕಾಸ ಕೇಂದ್ರಗಳ ಸದಸ್ಯರ ಅಧ್ಯಯನ ಪ್ರವಾಸ

Suddi Udaya

ಉಳ್ತೂರಿನಲ್ಲಿ ಸಂಭ್ರಮದ ಈದ್ ಆಚರಣೆ

Suddi Udaya
error: Content is protected !!