September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಷ್ಟೀಯ ಸ್ವಯಂ ಸೇವಕ ಸಂಘ ಕೊಕ್ಕಡ ಮಂಡಲದಿಂದ ವಿಜಯ ದಶಮಿ ಆಚರಣೆ

ಕೊಕ್ಕಡ : ರಾಷ್ಟ್ರೀಯ ಸ್ವಯಂಸೇವಕ ಸಂಘದ ಕೊಕ್ಕಡ ಮಂಡಲದ ವಿಜಯದಶಮಿ ಉತ್ಸವವು ಕೊಕ್ಕಡ ಶ್ರೀರಾಮ ಸೇವಾ ಮಂದಿರದಲ್ಲಿ ಕೊಕ್ಕಡ ಮತ್ತು ಪಟ್ರಮೆ ಗ್ರಾಮಗಳನ್ನೊಳಗೊಂಡ ಕೊಕ್ಕಡ ಮಂಡಲದ ಸ್ವಯಂಸೇವಕರು ಮತ್ತು ಸಜ್ಜನ ಬಂಧುಗಳು, ಮಾತಾ ಭಗಿನಿಯರು ಪಾಲ್ಗೊಳ್ಳುವುದರ ಮೂಲಕ ನಡೆಯಿತು.

ಕೊಕ್ಕಡ ಮಂಡಲದ ಸ್ವಯಂಸೇವಕರು ಸಂಘದ ಗಣವೇಶವನ್ನು ಧರಿಸಿ ಬಂದು ಸಂಘದ ಉಪವಿಷ್ಟ ವ್ಯಾಯಮದಲ್ಲಿ ತೊಡಗಿಸಿಕೊಂಡರು. ವಿಜಯದಶಮಿ ಉತ್ಸವದ ಅಧ್ಯಕ್ಷತೆಯನ್ನು ನಿವೃತ್ತ ಸೇನಾನಿ ಶ್ರೀಜಿತ್ ಪಡ್ಡಡ್ಕ ವಹಿಸಿದ್ದರು. ಬೌದ್ಧಿಕನ್ನು ಗುರುವಾಯನಕೆರೆಯ ಎಕ್ಸೆಲ್ ಕಾಲೇಜಿನ ಪ್ರಾಂಶುಪಾಲರಾದ ಪ್ರಜ್ವಲ್ ಕಜೆ ಇವರು ನೆರವೇರಿಸಿಕೊಟ್ಟರು. ಮುಖ್ಯ ಶಿಕ್ಷಕ. ಮಹೇಶ್, ಪ್ರಾರ್ಥನೆ ತೇಜಸ್, ಸ್ವಾಗತ ಮತ್ತು ಪರಿಚಯ ಪುರಂದರ ಕಡೀರ, ಹಾಗೂ ಧನ್ಯವಾದವನ್ನು ಹರೀಶ್ ಅಪ್ರೋಡಿ ಇವರುಗಳು ನೆರವೇರಿಸಿದರು. ವೈಯಕ್ತಿಕ ಗೀತೆ ಯನ್ನು ವಿಕ್ರಮ್ ಮರುವಂತಿಲ ಹಾಡಿದರು.
ಅಮೃತವಚನವನ್ನು ಶ್ರೇಯಸ್ ಕಡೀರ ವಾಚಿಸಿದರು. ಮಂಡಲ ಕಾರ್ಯವಾಹ ಸುದರ್ಶನ್ ಹಿತ್ತಿಲು ನಿರೂಪಿಸಿದರು.

Related posts

ಗೆಜ್ಜೆಗಿರಿ ಕ್ಷೇತ್ರದ ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ವಿ.ಪ. ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪರವಾಗಿ ಬಂದಾರು ಪಂಚಾಯತ್ ವ್ಯಾಪ್ತಿಯಲ್ಲಿ ಶಾಸಕ ಹರೀಶ್ ಪೂಂಜರಿಂದ ಮತಪ್ರಚಾರ

Suddi Udaya

ಭೂಸೇನೆಯಲ್ಲಿ 20ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಬಾರ್ಯ ಪಿಲಿಗೂಡು ನಿವಾಸಿ ಹವಾಲ್ದಾರ್ ಜಯಾನಂದ ಪೂಜಾರಿ ಮಾ.31 ರಂದು ಸೇವಾ ನಿವೃತ್ತಿ

Suddi Udaya

ಬರೆಂಗಾಯ ಶ್ರೀ ವನದುರ್ಗಾ ಮಾತೃ ಮಂಡಳಿ ವತಿಯಿಂದ ವರಮಹಾಲಕ್ಷ್ಮಿ ಪೂಜೆ

Suddi Udaya

ಉಜಿರೆ: ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಪ್ರೊ. ಎಸ್. ಪ್ರಭಾಕರ್ ರವರ ಪತ್ನಿ ಶ್ರೀಮತಿ ಬಿ. ಸರೋಜಿನಿ ದೇವಿ ನಿಧನ

Suddi Udaya

ಮಾ.8 ರಿಂದ 11 ರವರೆಗೆ 10ನೇ ತರಗತಿ ವಿದ್ಯಾರ್ಥಿಗಳಿಗಾಗಿ ವಿದ್ವತ್ ಕಾಲೇಜಿನಿಂದ ಪ್ರತಿಭಾನ್ವೇಷಣೆ ಪರೀಕ್ಷೆ– 2026

Suddi Udaya
error: Content is protected !!