25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಷ್ಟೀಯ ಸ್ವಯಂ ಸೇವಕ ಸಂಘ ಕೊಕ್ಕಡ ಮಂಡಲದಿಂದ ವಿಜಯ ದಶಮಿ ಆಚರಣೆ

ಕೊಕ್ಕಡ : ರಾಷ್ಟ್ರೀಯ ಸ್ವಯಂಸೇವಕ ಸಂಘದ ಕೊಕ್ಕಡ ಮಂಡಲದ ವಿಜಯದಶಮಿ ಉತ್ಸವವು ಕೊಕ್ಕಡ ಶ್ರೀರಾಮ ಸೇವಾ ಮಂದಿರದಲ್ಲಿ ಕೊಕ್ಕಡ ಮತ್ತು ಪಟ್ರಮೆ ಗ್ರಾಮಗಳನ್ನೊಳಗೊಂಡ ಕೊಕ್ಕಡ ಮಂಡಲದ ಸ್ವಯಂಸೇವಕರು ಮತ್ತು ಸಜ್ಜನ ಬಂಧುಗಳು, ಮಾತಾ ಭಗಿನಿಯರು ಪಾಲ್ಗೊಳ್ಳುವುದರ ಮೂಲಕ ನಡೆಯಿತು.

ಕೊಕ್ಕಡ ಮಂಡಲದ ಸ್ವಯಂಸೇವಕರು ಸಂಘದ ಗಣವೇಶವನ್ನು ಧರಿಸಿ ಬಂದು ಸಂಘದ ಉಪವಿಷ್ಟ ವ್ಯಾಯಮದಲ್ಲಿ ತೊಡಗಿಸಿಕೊಂಡರು. ವಿಜಯದಶಮಿ ಉತ್ಸವದ ಅಧ್ಯಕ್ಷತೆಯನ್ನು ನಿವೃತ್ತ ಸೇನಾನಿ ಶ್ರೀಜಿತ್ ಪಡ್ಡಡ್ಕ ವಹಿಸಿದ್ದರು. ಬೌದ್ಧಿಕನ್ನು ಗುರುವಾಯನಕೆರೆಯ ಎಕ್ಸೆಲ್ ಕಾಲೇಜಿನ ಪ್ರಾಂಶುಪಾಲರಾದ ಪ್ರಜ್ವಲ್ ಕಜೆ ಇವರು ನೆರವೇರಿಸಿಕೊಟ್ಟರು. ಮುಖ್ಯ ಶಿಕ್ಷಕ. ಮಹೇಶ್, ಪ್ರಾರ್ಥನೆ ತೇಜಸ್, ಸ್ವಾಗತ ಮತ್ತು ಪರಿಚಯ ಪುರಂದರ ಕಡೀರ, ಹಾಗೂ ಧನ್ಯವಾದವನ್ನು ಹರೀಶ್ ಅಪ್ರೋಡಿ ಇವರುಗಳು ನೆರವೇರಿಸಿದರು. ವೈಯಕ್ತಿಕ ಗೀತೆ ಯನ್ನು ವಿಕ್ರಮ್ ಮರುವಂತಿಲ ಹಾಡಿದರು.
ಅಮೃತವಚನವನ್ನು ಶ್ರೇಯಸ್ ಕಡೀರ ವಾಚಿಸಿದರು. ಮಂಡಲ ಕಾರ್ಯವಾಹ ಸುದರ್ಶನ್ ಹಿತ್ತಿಲು ನಿರೂಪಿಸಿದರು.

Related posts

ನಡ ಸ. ಪ್ರೌ.ಶಾಲೆಯಲ್ಲಿ ತಾಲ್ಲೂಕು ಮಟ್ಟದ ಯೋಗ ಸ್ಪರ್ಧೆ

Suddi Udaya

ಸುನ್ನತ್ ಕೆರೆ ಅಲ್ ಮಸ್ಜಿದುಲ್ ಹುದಾ ಜುಮಾ‌ ಮಸ್ಜಿದ್ ನ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಗುರುವಾಯನಕೆರೆಯಲ್ಲಿ ವಾಹದ ಟಯರೊಂದು ನೀರಿನಲ್ಲಿ ಮುಳುಗಿದ ಸ್ಥಿತಿಯಲ್ಲಿ ಪತ್ತೆ :ಜನರಲ್ಲಿ ಆತಂಕ ಸೃಷ್ಟಿ.

Suddi Udaya

ಪದ್ಮುಂಜ ಹಾಲು ಉತ್ಪಾದಕರ ಸ. ಸಂಘದಿಂದ ರಾಸುಗಳ ಭ್ರೂಣ ವರ್ಗಾವಣೆ ಕಾರ್ಯಕ್ರಮ

Suddi Udaya

ನಡ: ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ: ಧಾರ್ಮಿಕ ಸಭಾ ಉದ್ಘಾಟನಾ ಸಮಾರಂಭ

Suddi Udaya

ಜ.2: ಧರ್ಮಸ್ಥಳ ಶಾಂತಿವನ ಟ್ರಸ್ಟ್ ವತಿಯಿಂದ 31ನೇ ವರ್ಷದ “ಜ್ಞಾನರಥ” ಮತ್ತು “ಜ್ಞಾನಪಥ” ಮೌಲ್ಯಧಾರಿತ ಪುಸ್ತಕಗಳ ರಾಜ್ಯಮಟ್ಟದ ವಿವಿಧ ಸ್ಪರ್ಧೆ ಹಾಗೂ ಪುರಸ್ಕಾರ ಸಮಾರಂಭ

Suddi Udaya
error: Content is protected !!