September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲಾಯಿಲ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಕಂಡೊದ ಕಲೊಟ್ಟು ಬಿರುವೆರೆ ಗೊಬ್ಬು

ಲಾಯಿಲ : ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಲಾಯಿಲ ಮಹಿಳಾ ಬಿಲ್ಲವ ವೇದಿಕೆ ಲಾಯಿಲ ಮತ್ತು ಯುವ ಬಿಲ್ಲವ ವೇದಿಕೆ ಲಾಯಿಲ ಇವರ ಸಂಯುಕ್ತ ಆಶ್ರಯದಲ್ಲಿ ಕಂಡೊದ ಕಲೊಟ್ಟು ಬಿರುವೆರೆ ಗೊಬ್ಬು ಎಂಬ ಕೆಸರಿನ ಕ್ರೀಡಾಕೂಟವು ಇತ್ತೀಚೆಗೆ ಲಾಯಿಲ ಗ್ರಾಮದ ಹಂದೆವೂರು ಬೊಟ್ಟು ಎಂಬಲ್ಲಿ ನಡೆಯಿತು.

ಬೆಳಿಗ್ಗೆ ಕೈಪ್ಲೋಡಿಯ ಕೃಷ್ಣಪ್ಪ ಪೂಜಾರಿಯವರು ದೀಪ ಬೆಳಗಿಸಿ ಕ್ರೀಡಾಕೂಟವನ್ನು ಉದ್ಘಾಟಿಸಿದರು. ನಂತರ ಕಂಬಳದ ಕೋಣಗಳನ್ನು ಬ್ಯಾಂಡ್ ವಾಲಗದ ಮೂಲಕ ಗದ್ದೆಗೆ ಇಳಿಸಿ, ಉಳುಮೆ ಮಾಡಿ, ಕೋಳಿ ಅಂಕದ ಪ್ರಾತಕ್ಷಿಕೆ ನಡೆಸಲಾಯಿತು. ಹಿರಿಯರಾದ ದರ್ಖಾಸು ಸಂಜೀವ ಪೂಜಾರಿಯವರು ಗದ್ದೆಗೆ ಹಾಲು, ತುಪ್ಪ, ಎಳನೀರನ್ನು ಎರೆಯುವ ಮೂಲಕ ಕೆಸರಿನ ಸ್ಪರ್ಧೆಗಳಿಗೆ ಚಾಲನೆ ನೀಡಿದರು.

ಮಧ್ಯಾಹ್ನ ಬಿ ಲಕ್ಷ್ಮಣ ಪೂಜಾರಿಯವರ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಬೆಳ್ತಂಗಡಿ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಇದರ ಅಧ್ಯಕ್ಷ ಜಯವಿಕ್ರಮ ಕಲ್ಲಾಪು, ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಭಗೀರಥ ಜಿ., ಸುವರ್ಣ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಸುವರ್ಣ, ಶ್ರೀಮತಿ ಸುಮತಿ ಪ್ರಮೋದ್, ಎಂ. ಕೆ. ಪ್ರಸಾದ್, ಗುರುರಾಜ್ ಗುರಿಪಳ್ಳ ಹಾಗೂ ಸಂಘದ ನಿರ್ದೇಶಕರು ಮತ್ತು ಗ್ರಾಮ ಪಂಚಾಯತ್ ಪ್ರತಿನಿಧಿಗಳು ಭಾಗವಹಿಸಿದ್ದರು.

ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ವಸಂತ್ ಸುವರ್ಣ ಲಾಯಿಲ, ಬಹುಮಾನ ವಿತರಕರಾಗಿ ಶೈಲೇಶ್ ಆರ್. ಜೆ. ಭಾಗವಹಿಸಿದ್ದರು. ಕಾರ್ಯದರ್ಶಿ ಸೌಮ್ಯ ಲಾಯಿಲ ಸ್ವಾಗತಿಸಿ, ಸ್ನೇಕ್ ಅಶೋಕ್ ವಂದಿಸಿದರು. ಜಯಾನಂದ ಅಂಕಾಜೆಯವರು ನಿರೂಪಿಸಿದರು.

Related posts

ಬೆಳಾಲು: ಅನಂತೇಶ್ವರ ಫ್ರೆಂಡ್ಸ್ ಅನಂತೋಡಿ ಆಶ್ರಯದಲ್ಲಿ ಕೆಸರುಗದ್ದೆ ಕ್ರೀಡಾಕೂಟ; ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮದ್ದಡ್ಕ ದಿನಸಿ ಅಂಗಡಿ ವ್ಯಾಪಾರಿ ವಿಶ್ವನಾಥ್ ಶೆಣೈ ನಿಧನ

Suddi Udaya

ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ಗ್ರಾಮೀಣ ಘಟಕದ ವತಿಯಿಂದ ಕೊಕ್ಕಡ ಎಂಡೊಸಲ್ಪಾನ್ ಕೇಂದ್ರದಲ್ಲಿ ಇಂದಿರಾ ಗಾಂಧಿ ಜನ್ಮದಿನ ಆಚರಣೆ

Suddi Udaya

ಮೇಲಂತಬೆಟ್ಟು : ಮೇಯಲು ಬಿಟ್ಟ ರೂ.10 ಸಾವಿರ ಮೌಲ್ಯದ ಹಸು ಕಳವು: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

Suddi Udaya

ಪಡ್ಲಾಡಿ ಸ.ಹಿ.ಪ್ರಾ. ಶಾಲೆಯಲ್ಲಿ ಪರಿಸರ ಮಾಹಿತಿ ಮತ್ತು ಗಿಡನಾಟಿ ಕಾರ್ಯಕ್ರಮ

Suddi Udaya

ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಶಿಕ್ಷಕ ರಕ್ಷಕ ಸಂಘ ರಚನೆ, ಪೋಷಕರ ಸಭೆ

Suddi Udaya
error: Content is protected !!