September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಿಜಯ ದಶಮಿಯಂದು ಗೆಜ್ಜೆ ಗಿರಿಯಲ್ಲಿ ಒಂಬತ್ತನೇ ಮಹಾಸಭೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ಆಡಳಿತ ಸಮಿತಿಯ ಒಂಬತ್ತನೇ ಮಹಾಸಭೆಯು ವಿಜಯ ದಶಮಿಯಂದು ಕ್ಷೇತ್ರದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಕ್ಷೇತ್ರದ ಅಭಿವೃದ್ಧಿ ಮುಂದಿನ ಯೋಜನೆಗಳ ಬಗ್ಗೆ ಸವಿಸ್ತಾರವಾಗಿ ಚರ್ಚಿಸಲಾಯಿತು. ಕ್ಷೇತ್ರದ ಗೌರವಾಧ್ಯಕ್ಷ ಪೀತಾಂಬರ ಹೆರಾಜೆಯವರು ಪ್ರಸ್ತಾವಿಸಿ ಸ್ವಾಗತಿಸಿದರು. ರವಿ ಪೂಜಾರಿ ಚಿಲಿಂಬಿ ಅಧ್ಯಕ್ಷತೆ ವಹಿಸಿ ನ. 23ರಂದು ಗೆಜ್ಜೆ ಗಿರಿಯಲ್ಲಿ ನಡೆಯುವ ವಸತಿ ಗ್ರಹಗಳ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಸರ್ವರೂ ಭಾಗವಹಿಸಬೇಕೆಂದು ಕರೆ ನೀಡಿದರು.

ವೇದಿಕೆಯಲ್ಲಿ ಗೌರವಾಧ್ಯಕ್ಷ ಜಯಂತ ನಡುಬೈಲು, ಉಪಾಧ್ಯಕ್ಷ ಉಲ್ಲಾಸ್ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿ ಡಾ. ರಾಜಾರಾಮ್ ರವರು ಗತ ವರ್ಷದ ವರದಿಯನ್ನು ಯಾಚಿಸಿದರು. ಜೊತೆ ಕಾರ್ಯದರ್ಶಿಗಳಾದ ಡಾ. ಸಂತೋಷ್ ಬೈರಂಪಲ್ಲಿ ಜೈ ವಿಕ್ರಮ ಕಲ್ಲಾಪು ಹಾಜರಿದ್ದು ಕೋಶಾಧಿಕಾರಿ ಮೋಹನ ದಾಸ್ ಬಂಗೇರ ವಾಮಂಜೂರು ಲೆಕ್ಕಪತ್ರಗಳನ್ನು ಮಂಡಿಸಿದರು.
ಗಣ್ಯರಾದ ದುಬೈಯ ಸತೀಶ್ ಪೂಜಾರಿ ಬೆಳಪು, ಪ್ರಭಾಕರ್ ಕರ್ನಿರೆ , ದಕ್ಷಿಣ ಆಫ್ರಿಕದ ಸೋಮನಾಥ ಪೂಜಾರಿ, ಉಡುಪಿ ಗೋವಾದ ಚಂದ್ರಹಾಸ ಅಮೀನ್, ಶ್ರೀಮತಿ ಸುಜಿತಾ ವಿ ಬಂಗೇರ, ಸಂಜೀವ ಪೂಜಾರಿ ಬಿರುವ ಸೆಂಟರ್, ಪ್ರಾಮಲ್ ಕುಮಾರ್ ಕಾರ್ಕಳ, ಹರಿಶ್ಚಂದ್ರ ಅಮಿನ್ ಕಟಪಾಡಿ, ಶ್ರೀಕುಮಾರ್ ಮೂಡಬಿದ್ರಿ, ನಾರಾಯಣ ಮಚ್ಚಿನ, ನವೀನ್ ಅಮೀನ್ ಉಡುಪಿ, ನವೀನ್ ಸುವರ್ಣ ಸದೀಪ, ನವನೀತ್ ಹಿಂಗಾಣಿ, ನಾಗೇಶ್ ಪೂಜಾರಿ , ಜಯರಾಮ ಬಂಗೇರ, ಜಯ ರಾಮ ಪೂಜಾರಿ ಬೀಳುವಾಯಿ, ನಾಗೇಶ್ ಪೂಜಾರಿ, ಬೈಕಂಪಾಡಿ, ರಾಘವೇಂದ್ರ, ಹಾಜರಿದ್ದರು.

ಉಪಾಧ್ಯಕ್ಷ ದೀಪಕ್ ಕೋಟ್ಯಾನ್ ಧನ್ಯವಾದ ಸಮರ್ಪಿಸಿದರು.

Related posts

ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧದ ಜೀವ ಬೆದರಿಕೆ ಆರೋಪದ ತನಿಖೆಗೆ ಹೈಕೋರ್ಟ್‌ ಆದೇಶ; ಸುಳ್ಳು ಸಾಕ್ಷ್ಯ ಒತ್ತಾಯ ಆರೋಪಕ್ಕೆ ತಡೆ

Suddi Udaya

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ವತಿಯಿಂದ “CBK CUP” ಕ್ರೀಡಾಕೂಟದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ಗ್ರಾಮೀಣ ಘಟಕದ ವತಿಯಿಂದ ಕೊಕ್ಕಡ ಎಂಡೊಸಲ್ಪಾನ್ ಕೇಂದ್ರದಲ್ಲಿ ಇಂದಿರಾ ಗಾಂಧಿ ಜನ್ಮದಿನ ಆಚರಣೆ

Suddi Udaya

ಕುತ್ಲೂರು ಶಿವಶಕ್ತಿ ಫ್ರೆಂಡ್ಸ್ ಕ್ಲಬ್ ನಿಂದ ನಾರಾವಿ ವಾಲ್ಮೀಕಿ ಆಶ್ರಮ ಶಾಲಾ ಮಕ್ಕಳಿಗೆ ಕ್ರೀಡಾ ಸಮವಸ್ತ್ರ ವಿತರಣೆ

Suddi Udaya

ಮಾತೃ ವೇದಿಕೆ ಉದನೆ ವಲಯ ಸಾಂಸ್ಕೃತಿಕ ಮತ್ತು ಕ್ರೀಡಾ ಕೂಟ: ನೆಲ್ಯಾಡಿ ಸಂತ ಅಲ್ಫೋನ್ಸ ಚರ್ಚ್ ಗೆ ಸಮಗ್ರ ಪ್ರಶಸ್ತಿ

Suddi Udaya

ಟೀಮ್ ದೇವರಗುಡ್ಡೆ ವತಿಯಿಂದ ಪ್ರಾಥಮಿಕ ಆರೋಗ್ಯ ಮತ್ತು ಕ್ಷೇಮ ಕೇಂದ್ರದಲ್ಲಿ ಕೈತೋಟ ರಚನೆ

Suddi Udaya
error: Content is protected !!