25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಿಜಯ ದಶಮಿಯಂದು ಗೆಜ್ಜೆ ಗಿರಿಯಲ್ಲಿ ಒಂಬತ್ತನೇ ಮಹಾಸಭೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ಆಡಳಿತ ಸಮಿತಿಯ ಒಂಬತ್ತನೇ ಮಹಾಸಭೆಯು ವಿಜಯ ದಶಮಿಯಂದು ಕ್ಷೇತ್ರದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಕ್ಷೇತ್ರದ ಅಭಿವೃದ್ಧಿ ಮುಂದಿನ ಯೋಜನೆಗಳ ಬಗ್ಗೆ ಸವಿಸ್ತಾರವಾಗಿ ಚರ್ಚಿಸಲಾಯಿತು. ಕ್ಷೇತ್ರದ ಗೌರವಾಧ್ಯಕ್ಷ ಪೀತಾಂಬರ ಹೆರಾಜೆಯವರು ಪ್ರಸ್ತಾವಿಸಿ ಸ್ವಾಗತಿಸಿದರು. ರವಿ ಪೂಜಾರಿ ಚಿಲಿಂಬಿ ಅಧ್ಯಕ್ಷತೆ ವಹಿಸಿ ನ. 23ರಂದು ಗೆಜ್ಜೆ ಗಿರಿಯಲ್ಲಿ ನಡೆಯುವ ವಸತಿ ಗ್ರಹಗಳ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಸರ್ವರೂ ಭಾಗವಹಿಸಬೇಕೆಂದು ಕರೆ ನೀಡಿದರು.

ವೇದಿಕೆಯಲ್ಲಿ ಗೌರವಾಧ್ಯಕ್ಷ ಜಯಂತ ನಡುಬೈಲು, ಉಪಾಧ್ಯಕ್ಷ ಉಲ್ಲಾಸ್ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿ ಡಾ. ರಾಜಾರಾಮ್ ರವರು ಗತ ವರ್ಷದ ವರದಿಯನ್ನು ಯಾಚಿಸಿದರು. ಜೊತೆ ಕಾರ್ಯದರ್ಶಿಗಳಾದ ಡಾ. ಸಂತೋಷ್ ಬೈರಂಪಲ್ಲಿ ಜೈ ವಿಕ್ರಮ ಕಲ್ಲಾಪು ಹಾಜರಿದ್ದು ಕೋಶಾಧಿಕಾರಿ ಮೋಹನ ದಾಸ್ ಬಂಗೇರ ವಾಮಂಜೂರು ಲೆಕ್ಕಪತ್ರಗಳನ್ನು ಮಂಡಿಸಿದರು.
ಗಣ್ಯರಾದ ದುಬೈಯ ಸತೀಶ್ ಪೂಜಾರಿ ಬೆಳಪು, ಪ್ರಭಾಕರ್ ಕರ್ನಿರೆ , ದಕ್ಷಿಣ ಆಫ್ರಿಕದ ಸೋಮನಾಥ ಪೂಜಾರಿ, ಉಡುಪಿ ಗೋವಾದ ಚಂದ್ರಹಾಸ ಅಮೀನ್, ಶ್ರೀಮತಿ ಸುಜಿತಾ ವಿ ಬಂಗೇರ, ಸಂಜೀವ ಪೂಜಾರಿ ಬಿರುವ ಸೆಂಟರ್, ಪ್ರಾಮಲ್ ಕುಮಾರ್ ಕಾರ್ಕಳ, ಹರಿಶ್ಚಂದ್ರ ಅಮಿನ್ ಕಟಪಾಡಿ, ಶ್ರೀಕುಮಾರ್ ಮೂಡಬಿದ್ರಿ, ನಾರಾಯಣ ಮಚ್ಚಿನ, ನವೀನ್ ಅಮೀನ್ ಉಡುಪಿ, ನವೀನ್ ಸುವರ್ಣ ಸದೀಪ, ನವನೀತ್ ಹಿಂಗಾಣಿ, ನಾಗೇಶ್ ಪೂಜಾರಿ , ಜಯರಾಮ ಬಂಗೇರ, ಜಯ ರಾಮ ಪೂಜಾರಿ ಬೀಳುವಾಯಿ, ನಾಗೇಶ್ ಪೂಜಾರಿ, ಬೈಕಂಪಾಡಿ, ರಾಘವೇಂದ್ರ, ಹಾಜರಿದ್ದರು.

ಉಪಾಧ್ಯಕ್ಷ ದೀಪಕ್ ಕೋಟ್ಯಾನ್ ಧನ್ಯವಾದ ಸಮರ್ಪಿಸಿದರು.

Related posts

ಬೆಳ್ತಂಗಡಿ: ಹುಣ್ಸೆಕಟ್ಟೆ ನಿವಾಸಿ ಶೀಲಾವತಿ ನಿಧನ

Suddi Udaya

ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ ಡಯಾಲಿಸಿಸ್ ಯಂತ್ರ ಕೆಟ್ಟು ಹೋದ ಬಗ್ಗೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಮಾಜಿ ಶಾಸಕ ವಸಂತ ಬಂಗೇರ

Suddi Udaya

ರಾಜ್ಯ ಮಟ್ಟದ ಸೀನಿಯರ್ ಕಬಡ್ಡಿ ಚಾಂಪಿಯನ್‌ ಶಿಪ್: ಜಿಲ್ಲಾ ತಂಡಕ್ಕೆ ದ್ವಿತೀಯ ಬಹುಮಾನ

Suddi Udaya

ನಡ: ಹಿರಿಯ ಮತ್ತು ಕಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ‘ಸೇವಾ ಭಾರತಿ’ ವತಿಯಿಂದ ಪುಸ್ತಕಗಳ ವಿತರಣೆ

Suddi Udaya

ಬಳಂಜ ಬೋಂಟ್ರೊಟ್ಟುಗುತ್ತು ದೈವಸ್ಥಾನಕ್ಕೆ ಭಕ್ತರಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ, ವಿಧಾನಪರಿಷತ್ ಶಾಸಕ ಕೆ.ಪ್ರತಾಪ ಸಿಂಹ ನಾಯಕರಿಂದ ಉಗ್ರಾಣದ ಉದ್ಘಾಟನೆ

Suddi Udaya

ಧರ್ಮಸ್ಥಳ ಮತದಾನ ಕೇಂದ್ರಕ್ಕೆ ದ.ಕ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟ ಭೇಟಿ

Suddi Udaya
error: Content is protected !!