July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಹಾಗೂ ವಿಜಯ ದಶಮಿ ಉತ್ಸವ ಪ್ರಯುಕ್ತ ಸಭಾ ಕಾರ್ಯಕ್ರಮ

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಹಾಗೂ ವಿಜಯ ದಶಮಿ ಉತ್ಸವ ಪ್ರಯುಕ್ತ ಸಭಾ ಕಾರ್ಯಕ್ರಮವನ್ನು ನಡೆಸಲಾಯಿತು.

ಸಭಾಧ್ಯಕ್ಷತೆಯನ್ನು ದೇವಸ್ಥಾನ ದ ಆಡಳಿತ ಮೋಕ್ತೇಸರರಾದ ಯೋಗೀಶ್ ಪೂಜಾರಿ ಕಡ್ತಿಲ ವಹಿಸಿದ್ದರು. ಧಾರ್ಮಿಕ ಉಪನ್ಯಾಸ ಮಾಡಿದಂತಹ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರರಾದ ಡಾ| ರವೀಶ್ ಪಡುಮಲೆ ಇವರು ದೇವಸ್ಥಾನಗಳಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮೌಲ್ಯಯುತ ಧಾರ್ಮಿಕ ಶಿಕ್ಷಣ, ಭಜನೆ, ಸಂಸ್ಕೃತಿ ಇವೆಲ್ಲವನ್ನೂ ಒಗ್ಗೂಡಿಸಿಕೊಂಡು ನಾವೆಲ್ಲಾ ನಡೆಯಬೇಕು. ಕೊರಿಂಜ ಕ್ಷೇತ್ರದಲ್ಲಿ ಬ್ರಹ್ಮಕಲಶೋತ್ಸವ ನಡೆದು ಇದೀಗ ಪಂಚಲಿಂಗೇಶ್ವರನ ಸನ್ನಿಧಿಯಲ್ಲಿ ಮಕ್ಕಳ ಕುಣಿತ ಭಜನಾ ತಂಡವನ್ನು ದೀಪ ಪ್ರಜ್ವಲಿಸುವ ಮೂಲಕ ದೇವಸ್ಥಾನದ ಶಕ್ತಿ ಹಾಗೂ ಭಕ್ತಿ ಬಹಳ ಹೆಚ್ಚಾಗಿದೆ. ಪ್ರತಿ ಮನೆಯಲ್ಲೂ ಸಂಜೆಯ ಸಮಯದಲ್ಲಿ ರಾಮಾಯಣ ಮಹಾಭಾರತ ಕಥೆಯನ್ನು, ಭಜನೆಯನ್ನು, ಮಕ್ಕಳ ಪೋಷಕರು ಕಲಿಸಬೇಕು. ನಮ್ಮಲ್ಲಿ ಧಾರ್ಮಿಕತೆಯನ್ನು ಯಾವೊತ್ತು ಕೂಡ ಕಡಿಮೆ ಮಾಡಬಾರದು ಎಂದು ತಿಳಿಸಿದರು.

ಭಜನ ಗುರುಗಳಾದ ನಾಗೇಶ ನೆರಿಯ ಇವರಿಗೆ ಗುರುವಂದನಾ ಕಾರ್ಯಕ್ರಮವನ್ನು ನಡೆಸಲಾಯಿತು. ವಿದ್ಯಾರ್ಥಿಗಳಿಗೆ ಮಹಾಭಾರತ ಪುಸ್ತಕವನ್ನುವಿತರಿಸಲಾಯಿತು. ವಾರಿಜ ವಿ ಶೆಟ್ಟಿ ಪ್ರಾಸ್ತಾವಿಕ ಮಾತನಾಡಿದರು. ಸೀತಾರಾಮ ಆಳ್ವ ಕೊರಿಂಜ ಕಾರ್ಯಕ್ರಮ ನಿರೂಪಿಸಿ, ರಂಜಿತ್ ಧರ್ಮಾಡಿ ಸ್ವಾಗತಿಸಿ, ವಿಜಯ ಕುಮಾರ್ ಕಲ್ಲಳಿ ಕೆ ಧನ್ಯವಾದವಿತ್ತರು.

Related posts

ಬಜಿರೆ ಪಿ.ಎಂ. ಶ್ರೀ ಸ. ಉ. ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಸೆ.30 : ಪೊಲೀಸ್ ವೃತ್ತ ನಿರೀಕ್ಷಕ ನಾಗೇಶ್ ಕದ್ರಿ ಸೇವಾ ನಿವೃತ್ತಿ

Suddi Udaya

ಬೆಳ್ತಂಗಡಿ ಸಂತ ತೆರೇಸಾ ಪ್ರೌಢ ಶಾಲೆಗೆ ಶೇ.88.60 ಫಲಿತಾಂಶ

Suddi Udaya

ಎಕ್ಸಲೆ೦ಟ್ ಮೂಡುಬಿದಿರೆ: ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಪ೦ದ್ಯಾಟ ಉದ್ಘಾಟನೆ

Suddi Udaya

ಶಿಶಿಲ: ನಿಷೇಧಿತ ಪ್ರದೇಶದಲ್ಲಿ ರಾತ್ರಿ ಮೀನು ಹಿಡಿಯಲು ಬಂದವರನ್ನು ಪತ್ತೆ ಹಚ್ಚಿದ ಸ್ಥಳೀಯರು

Suddi Udaya

ಕೊಕ್ಕಡ ಗ್ರಾಮ ಪಂಚಾಯತ್ ನ ಗ್ರಾಮ ಸಭೆ

Suddi Udaya
error: Content is protected !!