March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಲೋಬೊ ಟಿವಿಎಸ್ ಮೋಟಾರ್ಸ್ ಮಳಿಗೆಯಲ್ಲಿ ಆಯುಧ ಪೂಜೆ

ಬೆಳ್ತಂಗಡಿ: ಕಳೆದ ಹಲವಾರು ವರ್ಷಗಳಿಂದ ಗ್ರಾಹಕರಿಗೆ ಉತ್ತಮ ಸೇವೆ ಸಲ್ಲಿಸುತ್ತಾ ಬರುತ್ತಿರುವ ರೋನಾಲ್ಡ್ ಲೋಬೋ ಇವರ ಮಾಲೀಕತ್ವದ ಬೆಳ್ತಂಗಡಿಯ ಪ್ರಸಿದ್ಧ ಟಿವಿಎಸ್ ಮೋಟರ್ಸ್ ನಲ್ಲಿ ಆಯುಧ ಪೂಜೆಯನ್ನು ಅ. 2 ರಂದು ಆಚರಿಸಲಾಯಿತು.

ಬೆಳ್ತಂಗಡಿ ವಿಮುಕ್ತಿ ಚಾರಿಟೇಬಲ್ ಸಂಸ್ಥೆಯ ಪ್ರದಾನ ಗುರುಗಳಾದ ಫಾ.ವಿನೋದ್ ಮಸ್ಕರೇನಸ್ ರವರು ಪ್ರಾರ್ಥನೆ ಮಾಡಿ ಸಂಸ್ಥೆಯ ಮಾಲಕರಿಗೆ, ಗ್ರಾಹಕರಿಗೆ ಹಾಗೂ ಸಿಬ್ಬಂದಿ ವರ್ಗದವರಿಗೆ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಹೋಲಿ ರೆಡಿಮರ್ ಚರ್ಚ್ ನ ಪಾಲನ ಪರಿಷದ್ ನ ಉಪಾಧ್ಯಕ್ಷ ರಾದ ವಾಲ್ಟರ್ ಮೋನಿಸ್, ಆಯೋಗದ ಸಂಚಾಲಕಿ ಪೌಲಿನ್ ರೇಗೋ, ವಾರ್ಡಿನ ಗುರಿಕಾರಾದ ಹಾಗೂ ನಿವೃತ್ತ ಶಿಕ್ಷಕಿ ಜೂಲಿಯಾನ ಡಿಸೋಜಾ, ಸಂಸ್ಥೆಯ ಮಾಲಕರ ಪತ್ನಿ ರೋಶಿನಿ ಲೋಬೊ, ಹಿರಿಯ ವಕೀಲ ಅಲೋಶಿಯಸ್ ಲೋಬೊ, ಅಕ್ಕಂದಿರಾದ ವೇರೋನಿಕಾ ಲೋಬೊ, ಜೆನೆವಿವ್ ಲೋಬೊ, ಪ್ರೇರಣಾ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಹಾಗೂ ವರ್ತಕರ ಸಂಘದ ಕಾರ್ಯದರ್ಶಿ ಲಾನ್ಸಿ ಪಿರೇರ, ಭಾರತೀಯ ಜೀವ ವಿಮಾ ವಿನ್ಸೆಂಟ್ ಡಿಸೋಜಾ, ಶಿಕ್ಷಕಿ ಥಿಯೋಫಿಲ್ಲ ಡಿಸೋಜಾ, ಸಿವಿಸಿ ಹಾಲ್ ನ ಮಾಲಕರಾದ ಜೇಮ್ಸ್ ಡಿಸೋಜಾ ,ಸಂಸ್ಥೆಯ ಮ್ಯಾನೇಜರ್ ಅಶೋಕ್ ಮೋನಿಸ್, ಸಿಬ್ಬಂದಿ ವರ್ಗದವರು, ಗ್ರಾಹಕರು ಹಾಗೂ ಇತರರು ಉಪಸ್ಥಿತರಿದ್ದರು.

ಸಂಸ್ಥೆಯ ಮಾಲಕ ರೊನಾಲ್ಡ್ ಲೋಬೋ ಆಗಮಿಸಿದ ಅತಿಥಿ ಗಣ್ಯರ ಸ್ವಾಗತಿಸಿ, ಸತ್ಕರಿಸಿದರು.

Related posts

ಧರ್ಮಸ್ಥಳ ಗ್ರಾಮ ಪಂಚಾಯತ್ ನಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರ

Suddi Udaya

ಬೆಳಾಲು ಗ್ರಾ.ಪಂ. ವತಿಯಿಂದ ಬೆಳಾಲು ಸಿ ಎ ಬ್ಯಾಂಕ್ ನ ಉಪಾಧ್ಯಕ್ಷರು ಹಾಗೂ ನಿರ್ದೇಶಕರಾಗಿ ಆಯ್ಕೆಯಾದ ಪಂಚಾಯತ್ ಸದಸ್ಯರುಗಳಿಗೆ ಗೌರವಾರ್ಪಣೆ

Suddi Udaya

ಗುರುವಾಯನಕೆರೆ ಎಕ್ಸೆಲ್ ನಲ್ಲಿ ಶ್ರೀ ಶಾರದಾ ಪೂಜೆ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ನಲ್ಲಿ ಶಕ್ತಿ ವಂದನಾ ಕಾರ್ಯಕ್ರಮ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಶ್ರೀ ಶಾಸ್ತಾರ ದೇವರ ಪುನಃಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವ: ಬ್ರಹ್ಮಕಲಶೋತ್ಸವ ಸಮಿತಿಯ ಗೌರವಾಧ್ಯಕ್ಷ ಹರ್ಷೇಂದ್ರ ಕುಮಾರ್ ಧರ್ಮಸ್ಥಳ ಭೇಟಿ,

Suddi Udaya

ಕಾಶಿಪಟ್ಣ ಗ್ರಾ.ಪಂ. ಗೆ ಗಾಂಧೀ ಗ್ರಾಮ ಪುರಸ್ಕಾರ ಪ್ರಶಸ್ತಿ ಪ್ರದಾನ: ಸತೀಶ್. ಕೆ ಕಾಶಿಪಟ್ಣ ಮತ್ತು ಪಂ.ಅ.ಅ. ರಾಘವೇಂದ್ರ ಪಟೇಲ್ ರಿಂದ ಪ್ರಶಸ್ತಿ ಸ್ವೀಕಾರ

Suddi Udaya
error: Content is protected !!