30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಲೋಬೊ ಟಿವಿಎಸ್ ಮೋಟಾರ್ಸ್ ಮಳಿಗೆಯಲ್ಲಿ ಆಯುಧ ಪೂಜೆ

ಬೆಳ್ತಂಗಡಿ: ಕಳೆದ ಹಲವಾರು ವರ್ಷಗಳಿಂದ ಗ್ರಾಹಕರಿಗೆ ಉತ್ತಮ ಸೇವೆ ಸಲ್ಲಿಸುತ್ತಾ ಬರುತ್ತಿರುವ ರೋನಾಲ್ಡ್ ಲೋಬೋ ಇವರ ಮಾಲೀಕತ್ವದ ಬೆಳ್ತಂಗಡಿಯ ಪ್ರಸಿದ್ಧ ಟಿವಿಎಸ್ ಮೋಟರ್ಸ್ ನಲ್ಲಿ ಆಯುಧ ಪೂಜೆಯನ್ನು ಅ. 2 ರಂದು ಆಚರಿಸಲಾಯಿತು.

ಬೆಳ್ತಂಗಡಿ ವಿಮುಕ್ತಿ ಚಾರಿಟೇಬಲ್ ಸಂಸ್ಥೆಯ ಪ್ರದಾನ ಗುರುಗಳಾದ ಫಾ.ವಿನೋದ್ ಮಸ್ಕರೇನಸ್ ರವರು ಪ್ರಾರ್ಥನೆ ಮಾಡಿ ಸಂಸ್ಥೆಯ ಮಾಲಕರಿಗೆ, ಗ್ರಾಹಕರಿಗೆ ಹಾಗೂ ಸಿಬ್ಬಂದಿ ವರ್ಗದವರಿಗೆ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಹೋಲಿ ರೆಡಿಮರ್ ಚರ್ಚ್ ನ ಪಾಲನ ಪರಿಷದ್ ನ ಉಪಾಧ್ಯಕ್ಷ ರಾದ ವಾಲ್ಟರ್ ಮೋನಿಸ್, ಆಯೋಗದ ಸಂಚಾಲಕಿ ಪೌಲಿನ್ ರೇಗೋ, ವಾರ್ಡಿನ ಗುರಿಕಾರಾದ ಹಾಗೂ ನಿವೃತ್ತ ಶಿಕ್ಷಕಿ ಜೂಲಿಯಾನ ಡಿಸೋಜಾ, ಸಂಸ್ಥೆಯ ಮಾಲಕರ ಪತ್ನಿ ರೋಶಿನಿ ಲೋಬೊ, ಹಿರಿಯ ವಕೀಲ ಅಲೋಶಿಯಸ್ ಲೋಬೊ, ಅಕ್ಕಂದಿರಾದ ವೇರೋನಿಕಾ ಲೋಬೊ, ಜೆನೆವಿವ್ ಲೋಬೊ, ಪ್ರೇರಣಾ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಹಾಗೂ ವರ್ತಕರ ಸಂಘದ ಕಾರ್ಯದರ್ಶಿ ಲಾನ್ಸಿ ಪಿರೇರ, ಭಾರತೀಯ ಜೀವ ವಿಮಾ ವಿನ್ಸೆಂಟ್ ಡಿಸೋಜಾ, ಶಿಕ್ಷಕಿ ಥಿಯೋಫಿಲ್ಲ ಡಿಸೋಜಾ, ಸಿವಿಸಿ ಹಾಲ್ ನ ಮಾಲಕರಾದ ಜೇಮ್ಸ್ ಡಿಸೋಜಾ ,ಸಂಸ್ಥೆಯ ಮ್ಯಾನೇಜರ್ ಅಶೋಕ್ ಮೋನಿಸ್, ಸಿಬ್ಬಂದಿ ವರ್ಗದವರು, ಗ್ರಾಹಕರು ಹಾಗೂ ಇತರರು ಉಪಸ್ಥಿತರಿದ್ದರು.

ಸಂಸ್ಥೆಯ ಮಾಲಕ ರೊನಾಲ್ಡ್ ಲೋಬೋ ಆಗಮಿಸಿದ ಅತಿಥಿ ಗಣ್ಯರ ಸ್ವಾಗತಿಸಿ, ಸತ್ಕರಿಸಿದರು.

Related posts

ಕೋಲ್ಕತ್ತಾದಲ್ಲಿ ಮೆಡಿಕಲ್ ವಿದ್ಯಾರ್ಥಿನಿಯ ಹತ್ಯೆ ಖಂಡಿಸಿ ಉಜಿರೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಮೌನ ಆಚರಣೆ ಹಾಗೂ ಶ್ರದ್ಧಾಂಜಲಿ ಸಭೆ

Suddi Udaya

ಸೌತಡ್ಕ ಪಾರ್ಕಿಂಗ್ ಸ್ಥಳದಲ್ಲಿ ನೆಟ್ಟ ಗಿಡಗಳ ಬೇಲಿ ತೆರವು: ಸಂರಕ್ಷಿಸಲಾಗಿದ್ದ ಗಿಡಗಳನ್ನು ಸಾಕು ಪ್ರಾಣಿಗಳು ತಿಂದು ನಾಶ

Suddi Udaya

ನಡ: ಜಮಲಾಬಾದ್ ಇದ್ಗ ಮೈದಾನ ನಲ್ಲಿ ಸಂಭ್ರಮದ ಈದ್ ಉಲ್ ಫಿತರ್ ಆಚರಣೆ

Suddi Udaya

ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವ: ‘ಕೇರಿಂಜ ಯಾತ್ರೆ’

Suddi Udaya

ಉಜಿರೆಯಲ್ಲಿ ಅಜಾಗರೂಕತೆಯಿಂದ ಕಾರು ಚಾಲನೆ; ಸ್ಕೂಟರ್ ಗೆ ಡಿಕ್ಕಿ, ಯುವತಿಗೆ ಗಾಯ, ಆಸ್ಪತ್ರೆಗೆ ದಾಖಲು

Suddi Udaya

ನೆರಿಯದ ಯುವತಿ ಮಂಗಳೂರಿನಲ್ಲಿ ಆತ್ಮಹತ್ಯೆ

Suddi Udaya
error: Content is protected !!