23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆ ಹಳೆ ವಿದ್ಯಾರ್ಥಿ ಸಂಘ ಅಧ್ಯಕ್ಷರಾಗಿ ವಾಮನ ತಾಮ್ಹ ನ್ ಕರ್ ಆಯ್ಕೆ

ಅರಸಿನಮಕ್ಕಿ : ಸುಮಾರು 57 ವರ್ಷಗಳನ್ನು ಪೂರೈಸಿ ಸಾವಿರಾರು ಮಕ್ಕಳು ವಿದ್ಯಾರ್ಜನೆ ಮಾಡಿರುವ ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆಯ ಸರ್ವಾಂಗೀಣ ಅಭಿವೃದ್ಧಿಗಾಗಿ ಹಳೆ ವಿದ್ಯಾರ್ಥಿ ಸಂಘವನ್ನು ಅ. 4ರಂದು ರಚಿಸಲಾಯಿತು.

ನೂತನ ಅಧ್ಯಕ್ಷರಾಗಿ ಉದ್ಯಮಿ ವಾಮನ ತಾಮ್ಹನ್ ಕರ್ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರುಗಳಾಗಿ ಉದ್ಯಮಿ ಪ್ರಕಾಶ್ ಪಿಲಿಕ್ಕಬೆ, ಶಿವಾನಂದ ಮಯ್ಯ, ಸಂದೀಪ್ ಅಮ್ಮುಡಂಗೆ, ಹರೀಶ್ ಯು., ರಾಜು ಕೆ. ಸಾಲಿಯಾನ್ ಮತ್ತು ವೃಷಾಂಕ್ ಖಾಡಿಲ್ಕರ್ ಅವರನ್ನು ಆಯ್ಕೆ ಮಾಡಲಾಯಿತು.

ಕಾರ್ಯದರ್ಶಿಗಳಾಗಿ ಮುಖ್ಯಶಿಕ್ಷಕಿ ಮಂಜುಳಾ, ಜೊತೆ ಕಾರ್ಯದರ್ಶಿಗಳಾಗಿ ಚೇತನಾ ಕುಮಾರಿ, ಶರತ್ ತುಳುಪುಳೆ ಹಾಗೂ ಸದಸ್ಯರುಗಳಾಗಿ ಶ್ರೀರಂಗ ದಾಮಲೆ, ಸುಧೀರ್ ಕುಮಾರ್ ಎಂ. ಎಸ್., ಕೇಶವ ರಾವ್ ನೆಕ್ಕಿಲು, ಜಯರಾಮ ನೆಲ್ಲಿತ್ತಾಯ ಶಿಶಿಲ, ಶಶಾಂಕ್, ಗಣೇಶ್ ಕೆ. ಹೊಸ್ತೋಟ, ಮುರಳೀಧರ ಶೆಟ್ಟಿಗಾರ್, ಭವ್ಯ, ತೇಜಸ್ವಿನಿ, ರೇಷ್ಮಾ, ಯಮುನಾರವರನ್ನು ಆಯ್ಕೆ ಮಾಡಲಾಯಿತು.

ಸಮಾರಂಭದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಗಣೇಶ್ ಕುಲಾಲ್ ವಹಿಸಿದ್ದರು. ಮುಖ್ಯ ಶಿಕ್ಷಕಿ ಮಂಜುಳಾ ಎಂ. ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು. ವಿಜ್ಞಾನ ಶಿಕ್ಷಕಿ ಶ್ರೀಚೇತನ ಕಾರ್ಯಕ್ರಮ ನಿರೂಪಿಸಿದರು.

Related posts

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಮುಂಡಾಜೆ ಗ್ರಾ.ಪಂ. ಎದುರು ಬಿಜೆಪಿ ಪ್ರತಿಭಟನೆ

Suddi Udaya

ವೇಣೂರು ಐಟಿಐಯಲ್ಲಿ ವಾರ್ಷಿಕ ಕ್ರೀಡೋತ್ಸವ

Suddi Udaya

ಮಡಂತ್ಯಾರು: ಹೆದ್ದಾರಿಯ ರಸ್ತೆ ಕಾಮಗಾರಿ ಕಳಪೆ: ಸಾರ್ವಜನಿಕರ ಆಕ್ರೋಶ

Suddi Udaya

ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಕುವೆಟ್ಟು ಓಡಿಲ್ನಾಳ ಗ್ರಾಮ ಸಮಿತಿ ಆಶ್ರಯದಲ್ಲಿ ಆಟಿಡೊಂಜಿ ಕೂಟ ವಿಶೇಷ ಕಾರ್ಯಕ್ರಮ

Suddi Udaya

ಶಿಶಿಲ: ದಿ. ಧರ್ಣಪ್ಪ ಗೌಡ ರವರ ಸ್ಮರಣಾರ್ಥ ಕೊರಗಪ್ಪ ಗೌಡರಿಂದ ನಂದಗೋಕುಲ ಗೋಶಾಲೆಗೆ ದೇಣಿಗೆ

Suddi Udaya

ಕುವೆಟ್ಟು ಗ್ರಾಮ ಪಂಚಾಯತ್ ಗ್ರಾಮ ಸಭೆಯಲ್ಲಿ ನಿವೃತ್ತ ಆಶಾ ಕಾರ್ಯಕರ್ತೆಯರಿಗೆ ಸನ್ಮಾನ

Suddi Udaya
error: Content is protected !!