July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆ ಹಳೆ ವಿದ್ಯಾರ್ಥಿ ಸಂಘ ಅಧ್ಯಕ್ಷರಾಗಿ ವಾಮನ ತಾಮ್ಹ ನ್ ಕರ್ ಆಯ್ಕೆ

ಅರಸಿನಮಕ್ಕಿ : ಸುಮಾರು 57 ವರ್ಷಗಳನ್ನು ಪೂರೈಸಿ ಸಾವಿರಾರು ಮಕ್ಕಳು ವಿದ್ಯಾರ್ಜನೆ ಮಾಡಿರುವ ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆಯ ಸರ್ವಾಂಗೀಣ ಅಭಿವೃದ್ಧಿಗಾಗಿ ಹಳೆ ವಿದ್ಯಾರ್ಥಿ ಸಂಘವನ್ನು ಅ. 4ರಂದು ರಚಿಸಲಾಯಿತು.

ನೂತನ ಅಧ್ಯಕ್ಷರಾಗಿ ಉದ್ಯಮಿ ವಾಮನ ತಾಮ್ಹನ್ ಕರ್ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರುಗಳಾಗಿ ಉದ್ಯಮಿ ಪ್ರಕಾಶ್ ಪಿಲಿಕ್ಕಬೆ, ಶಿವಾನಂದ ಮಯ್ಯ, ಸಂದೀಪ್ ಅಮ್ಮುಡಂಗೆ, ಹರೀಶ್ ಯು., ರಾಜು ಕೆ. ಸಾಲಿಯಾನ್ ಮತ್ತು ವೃಷಾಂಕ್ ಖಾಡಿಲ್ಕರ್ ಅವರನ್ನು ಆಯ್ಕೆ ಮಾಡಲಾಯಿತು.

ಕಾರ್ಯದರ್ಶಿಗಳಾಗಿ ಮುಖ್ಯಶಿಕ್ಷಕಿ ಮಂಜುಳಾ, ಜೊತೆ ಕಾರ್ಯದರ್ಶಿಗಳಾಗಿ ಚೇತನಾ ಕುಮಾರಿ, ಶರತ್ ತುಳುಪುಳೆ ಹಾಗೂ ಸದಸ್ಯರುಗಳಾಗಿ ಶ್ರೀರಂಗ ದಾಮಲೆ, ಸುಧೀರ್ ಕುಮಾರ್ ಎಂ. ಎಸ್., ಕೇಶವ ರಾವ್ ನೆಕ್ಕಿಲು, ಜಯರಾಮ ನೆಲ್ಲಿತ್ತಾಯ ಶಿಶಿಲ, ಶಶಾಂಕ್, ಗಣೇಶ್ ಕೆ. ಹೊಸ್ತೋಟ, ಮುರಳೀಧರ ಶೆಟ್ಟಿಗಾರ್, ಭವ್ಯ, ತೇಜಸ್ವಿನಿ, ರೇಷ್ಮಾ, ಯಮುನಾರವರನ್ನು ಆಯ್ಕೆ ಮಾಡಲಾಯಿತು.

ಸಮಾರಂಭದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಗಣೇಶ್ ಕುಲಾಲ್ ವಹಿಸಿದ್ದರು. ಮುಖ್ಯ ಶಿಕ್ಷಕಿ ಮಂಜುಳಾ ಎಂ. ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು. ವಿಜ್ಞಾನ ಶಿಕ್ಷಕಿ ಶ್ರೀಚೇತನ ಕಾರ್ಯಕ್ರಮ ನಿರೂಪಿಸಿದರು.

Related posts

ಪೆರಾಡಿಯಲ್ಲಿ ‘ಸರಕಾರದ ನಡೆ ಕಾರ್ಯಕರ್ತರ ಕಡೆ’ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ

Suddi Udaya

ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಉರುವಾಲುವಿನ ಸೀತಾ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಅಶಕ್ತರ ಪಾಲಿನ ಆಶಾಕಿರಣ ದೀಪಕ್ ಜಿ. ಮಂಗಳೂರು ಪ್ರೆಸ್ ಕ್ಲಬ್ ವಾರ್ಷಿಕ ಪ್ರಶಸ್ತಿಗೆ ಆಯ್ಕೆ

Suddi Udaya

ಅಂತರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾಟ: ಉಜಿರೆಯ ಪ್ರತೀಕ್ ಶೆಟ್ಟಿ ರಿಗೆ ಕುಮಿಟೆ ವಿಭಾಗದಲ್ಲಿ ಚಿನ್ನದ ಪದಕ ಹಾಗೂ ಕಟಾ ವಿಭಾಗದಲ್ಲಿ ಕಂಚಿನ ಪದಕ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಶ್ರೀ ಶಾಸ್ತಾರ ದೇವರ ಪುನಃಪ್ರತಿಷ್ಠೆ, ಬ್ರಹ್ಮಕಲಶಾಭಿಷೇಕ

Suddi Udaya

ಕುಂದಾಪುರ : ಚಾಲಕನ ನಿಯಂತ್ರಣ ತಪ್ಪಿ ಭೀಕರ ರಸ್ತೆ ಅಪಘಾತ: ಪಡಂಗಡಿ ನಡಿಬೆಟ್ಟು ನೇಮಿರಾಜ ಶೆಟ್ಟಿಯವರ ಮೊಮ್ಮಗ ಪ್ರದ್ಯೋತ್ ಮೃತ್ಯು

Suddi Udaya
error: Content is protected !!