25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಲ್ಮಂಜ : ಸಿದ್ದಬೈಲು ಪರಾರಿ ಅಂಗನವಾಡಿಯಲ್ಲಿ ಪೋಷಣ್ ಮಾಸಾಚರಣೆ

ಕಲ್ಮಂಜ : ಸಿದ್ದಬೈಲು ಪರಾರಿ ಅಂಗನವಾಡಿಯಲ್ಲಿ ಅ. 3 ರಂದು ಮಹಿಳಾ‌ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ರೋಟರಿ ಸಮುದಾಯ ದಳ ಕಲ್ಮಂಜ ಜಂಟಿಯಾಗಿ ಪೋಷಣ್ ಮಾಸಾಚರಣೆ ಕಾರ್ಯಕ್ರಮವನ್ನು ಆಚರಿಸಲಾಯಿತು.

ಆರೋಗ್ಯ ಶಿಕ್ಷಣಾಧಿಕಾರಿಯಾದ ಅಮ್ಮಿ ಮೇಡಂ ಇವರು ಪೌಷ್ಟಿಕ ಆಹಾರದ ಬಗ್ಗೆ ಮಾಹಿತಿ ನೀಡಿದರು.
ವಿಮುಕ್ತಿ ಸಂಸ್ಥೆಯ ಮೇಲ್ವಿಚಾರಕಿಯಾದ ಶ್ರೀಮತಿ ರೋಹಿನಿ ಇವರು ಪೌಷ್ಟಿಕ ಆಹಾರದ ಉಪಯೋಗಗಳು ಹಾಗೂ ಬೆಳ್ತಂಗಡಿ ರೋಟರಿ ಕ್ಲಬ್ ನ ಅಧ್ಯಕ್ಷ ಪ್ರಕಾಶ್ ಪ್ರಭು ರವರು ಯಾವ ರೀತಿಯ ಪೌಷ್ಟಿಕ ಆಹಾರ ಸೇವಿಸಬಹುದು ಎಂಬುದರ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಉತ್ತಮ ಆಹಾರ ತಯಾರಿಸಿದ ತಾಯಂದಿರಿಗೆ ಬಹುಮಾನ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಆರೋಗ್ಯ ಶಿಕ್ಷಣಾಧಿಕಾರಿ ಅಮ್ಮಿ, ಬಾಲ‌ ವಿಕಾಸ ಸಮಿತಿಯ ಅಧ್ಯಕ್ಷೆ ಶ್ರೀಮತಿ ಸವಿತಾ, ವಿಮುಕ್ತಿ ಸಂಸ್ಥೆಯ ‌ಮೇಲ್ವಿಚಾರಕಿ ರೋಹಿಣಿ, ಬೆಳ್ತಂಗಡಿ ರೋಟರಿ ಕ್ಲಬ್ ನ‌ ಅಧ್ಯಕ್ಷ ಪ್ರಕಾಶ್ ಪ್ರಭು, ಕಲ್ಮಂಜ ರೋಟರಿ ಸಮುದಾಯ ದಳದ ಕೋಶಾಧಿಕಾರಿ ಡಿ ಜಯಂತ್ ರಾವ್ ಕಲ್ಮಂಜ, ಸದಸ್ಯರಾದ ರಾಘವ್ ಕಲ್ಮಂಜ, ಸತೀಶ್ ಭಟ್ ತಂಟ್ಯ, ಸುಂದರ ಆಚಾರ್ಯ, ಪಂಚಾಯತ್ ಸದಸ್ಯರಾದ ಶ್ರೀಮತಿ ಶೋಭಾ, ಎಸ್.ಡಿ.ಎಮ್.ಸಿ ಅಧ್ಯಕ್ಷ ದಿನೇಶ್ ಗೌಡ , ಆಶಾ ಕಾರ್ಯಕರ್ತೆ, ಮಕ್ಕಳ ತಾಯಂದಿರು ಮತ್ತು ಸ್ತ್ರೀ ಶಕ್ತಿ ಸದಸ್ಯರು ಉಪಸ್ಥಿತರಿದ್ದರು.


ಸರೋಜಿನಿ ಸ್ವಾಗತಿಸಿ, ವಸಂತಿ ಕಾರ್ಯಕ್ರಮ ನಿರೂಪಿಸಿ, ಧನ್ಯವಾದವಿತ್ತರು.

Related posts

ಬೆಳ್ತಂಗಡಿ ಬಿಜೆಪಿ ಪಕ್ಷದ ಕಚೇರಿಗೆ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಭೇಟಿ

Suddi Udaya

ವಲಯ ಮಟ್ಟದ ಬಾಲಕರ ವಾಲಿಬಾಲ್ ಪಂದ್ಯಾಟ: ಬಳಂಜ ಪ್ರೌಢ ಶಾಲೆ ಪ್ರಥಮ

Suddi Udaya

ಉಜಿರೆ: ಆಳ್ವಾಸ್ ನುಡಿಸಿರಿ ವಿರಾಸತ್ ಬೆಳ್ತಂಗಡಿ ಘಟಕದ ವತಿಯಿಂದ 500ಕ್ಕೂ ಅಧಿಕ ವಿದ್ಯಾರ್ಥಿಗಳಿಂದ “ಆಳ್ವಾಸ್ ಸಾಂಸ್ಕೃತಿಕ ವೈಭವ

Suddi Udaya

ತೆಕ್ಕಾರು: ಸರಳಿಕಟ್ಟೆ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ಮಹಮ್ಮದ್ ಫಯಾಜ್ ರವರಿಂದ ಲ್ಯಾಪ್ ಟಾಪ್ ಕೊಡುಗೆ

Suddi Udaya

ಮನೆಯಲ್ಲಿ ಜಗಳವಾಡಿ ಧರ್ಮಸ್ಥಳಕ್ಕೆ ಆತ್ಮಹತ್ಯೆ ಮಾಡಲು ಬಂದ ಮಹಿಳೆ: ಧರ್ಮಸ್ಥಳ ಪಿಎಸ್ಐ ಕಿಶೋರ್ ಕುಮಾರ್ ರಿಂದ ಮಹಿಳೆಯ ರಕ್ಷಣೆ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತಿಟ್ಟ ಪ್ರಕರಣ: 13ನೇ ಗುರುತಿನ ಸ್ಥಳದಲ್ಲಿ ಜಿಪಿಆರ್ ಯಂತ್ರ ಬಳಸಿ ಪರಿಶೀಲನೆಗೆ ಮುಂದಾದ ಎಸ್.ಐ.ಟಿ

Suddi Udaya
error: Content is protected !!