July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಲ್ಮಂಜ : ಸಿದ್ದಬೈಲು ಪರಾರಿ ಅಂಗನವಾಡಿಯಲ್ಲಿ ಪೋಷಣ್ ಮಾಸಾಚರಣೆ

ಕಲ್ಮಂಜ : ಸಿದ್ದಬೈಲು ಪರಾರಿ ಅಂಗನವಾಡಿಯಲ್ಲಿ ಅ. 3 ರಂದು ಮಹಿಳಾ‌ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ರೋಟರಿ ಸಮುದಾಯ ದಳ ಕಲ್ಮಂಜ ಜಂಟಿಯಾಗಿ ಪೋಷಣ್ ಮಾಸಾಚರಣೆ ಕಾರ್ಯಕ್ರಮವನ್ನು ಆಚರಿಸಲಾಯಿತು.

ಆರೋಗ್ಯ ಶಿಕ್ಷಣಾಧಿಕಾರಿಯಾದ ಅಮ್ಮಿ ಮೇಡಂ ಇವರು ಪೌಷ್ಟಿಕ ಆಹಾರದ ಬಗ್ಗೆ ಮಾಹಿತಿ ನೀಡಿದರು.
ವಿಮುಕ್ತಿ ಸಂಸ್ಥೆಯ ಮೇಲ್ವಿಚಾರಕಿಯಾದ ಶ್ರೀಮತಿ ರೋಹಿನಿ ಇವರು ಪೌಷ್ಟಿಕ ಆಹಾರದ ಉಪಯೋಗಗಳು ಹಾಗೂ ಬೆಳ್ತಂಗಡಿ ರೋಟರಿ ಕ್ಲಬ್ ನ ಅಧ್ಯಕ್ಷ ಪ್ರಕಾಶ್ ಪ್ರಭು ರವರು ಯಾವ ರೀತಿಯ ಪೌಷ್ಟಿಕ ಆಹಾರ ಸೇವಿಸಬಹುದು ಎಂಬುದರ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಉತ್ತಮ ಆಹಾರ ತಯಾರಿಸಿದ ತಾಯಂದಿರಿಗೆ ಬಹುಮಾನ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಆರೋಗ್ಯ ಶಿಕ್ಷಣಾಧಿಕಾರಿ ಅಮ್ಮಿ, ಬಾಲ‌ ವಿಕಾಸ ಸಮಿತಿಯ ಅಧ್ಯಕ್ಷೆ ಶ್ರೀಮತಿ ಸವಿತಾ, ವಿಮುಕ್ತಿ ಸಂಸ್ಥೆಯ ‌ಮೇಲ್ವಿಚಾರಕಿ ರೋಹಿಣಿ, ಬೆಳ್ತಂಗಡಿ ರೋಟರಿ ಕ್ಲಬ್ ನ‌ ಅಧ್ಯಕ್ಷ ಪ್ರಕಾಶ್ ಪ್ರಭು, ಕಲ್ಮಂಜ ರೋಟರಿ ಸಮುದಾಯ ದಳದ ಕೋಶಾಧಿಕಾರಿ ಡಿ ಜಯಂತ್ ರಾವ್ ಕಲ್ಮಂಜ, ಸದಸ್ಯರಾದ ರಾಘವ್ ಕಲ್ಮಂಜ, ಸತೀಶ್ ಭಟ್ ತಂಟ್ಯ, ಸುಂದರ ಆಚಾರ್ಯ, ಪಂಚಾಯತ್ ಸದಸ್ಯರಾದ ಶ್ರೀಮತಿ ಶೋಭಾ, ಎಸ್.ಡಿ.ಎಮ್.ಸಿ ಅಧ್ಯಕ್ಷ ದಿನೇಶ್ ಗೌಡ , ಆಶಾ ಕಾರ್ಯಕರ್ತೆ, ಮಕ್ಕಳ ತಾಯಂದಿರು ಮತ್ತು ಸ್ತ್ರೀ ಶಕ್ತಿ ಸದಸ್ಯರು ಉಪಸ್ಥಿತರಿದ್ದರು.


ಸರೋಜಿನಿ ಸ್ವಾಗತಿಸಿ, ವಸಂತಿ ಕಾರ್ಯಕ್ರಮ ನಿರೂಪಿಸಿ, ಧನ್ಯವಾದವಿತ್ತರು.

Related posts

ಮಹೇಶ್‌ ಶೆಟ್ಟಿ ತಿಮರೋಡಿ ವಿರುದ್ಧ ಕೇಸ್‌ ದಾಖಲು

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷರಾಗಿ ಹರೀಶ್ ಸಾಲ್ಯಾನ್, ಉಪಾಧ್ಯಕ್ಷರಾಗಿ ಆನಂದ ಗೌಡ ಬಿ ಆಯ್ಕೆ

Suddi Udaya

ಸುಲ್ಕೇರಿಮೊಗ್ರು ಸ.ಹಿ.ಪ್ರಾ. ಶಾಲಾ ಮಂತ್ರಿ ಮಂಡಲದ ರಚನೆ ಹಾಗೂ ಮೇಲುಸ್ತುವಾರಿ ಸಮಿತಿಯ ರಚನೆ

Suddi Udaya

ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ ಶ್ರೀ ಧ.ಮಂ.ಆಂ.ಮಾ. ಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಸ್ವಯಂಸೇವಕರಾಗಿ ಭಾಗಿ

Suddi Udaya

ಕಳಿಯ ಗ್ರಾ.ಪಂ. ನಲ್ಲಿ ಹುಚ್ಚು ನಾಯಿ ಉಚಿತ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya

ಸಿಬಿಎಸ್ಸಿ ಎಸ್.ಎಸ್.ಎಲ್.ಸಿ ಫಲಿತಾಂಶ: ಶ್ರೀ ವಿದ್ಯಾಸಾಗರ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya
error: Content is protected !!