23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಹಾಗೂ ವಿಜಯ ದಶಮಿ ಉತ್ಸವ ಪ್ರಯುಕ್ತ ಸಭಾ ಕಾರ್ಯಕ್ರಮ

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಹಾಗೂ ವಿಜಯ ದಶಮಿ ಉತ್ಸವ ಪ್ರಯುಕ್ತ ಸಭಾ ಕಾರ್ಯಕ್ರಮವನ್ನು ನಡೆಸಲಾಯಿತು.

ಸಭಾಧ್ಯಕ್ಷತೆಯನ್ನು ದೇವಸ್ಥಾನ ದ ಆಡಳಿತ ಮೋಕ್ತೇಸರರಾದ ಯೋಗೀಶ್ ಪೂಜಾರಿ ಕಡ್ತಿಲ ವಹಿಸಿದ್ದರು. ಧಾರ್ಮಿಕ ಉಪನ್ಯಾಸ ಮಾಡಿದಂತಹ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರರಾದ ಡಾ| ರವೀಶ್ ಪಡುಮಲೆ ಇವರು ದೇವಸ್ಥಾನಗಳಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮೌಲ್ಯಯುತ ಧಾರ್ಮಿಕ ಶಿಕ್ಷಣ, ಭಜನೆ, ಸಂಸ್ಕೃತಿ ಇವೆಲ್ಲವನ್ನೂ ಒಗ್ಗೂಡಿಸಿಕೊಂಡು ನಾವೆಲ್ಲಾ ನಡೆಯಬೇಕು. ಕೊರಿಂಜ ಕ್ಷೇತ್ರದಲ್ಲಿ ಬ್ರಹ್ಮಕಲಶೋತ್ಸವ ನಡೆದು ಇದೀಗ ಪಂಚಲಿಂಗೇಶ್ವರನ ಸನ್ನಿಧಿಯಲ್ಲಿ ಮಕ್ಕಳ ಕುಣಿತ ಭಜನಾ ತಂಡವನ್ನು ದೀಪ ಪ್ರಜ್ವಲಿಸುವ ಮೂಲಕ ದೇವಸ್ಥಾನದ ಶಕ್ತಿ ಹಾಗೂ ಭಕ್ತಿ ಬಹಳ ಹೆಚ್ಚಾಗಿದೆ. ಪ್ರತಿ ಮನೆಯಲ್ಲೂ ಸಂಜೆಯ ಸಮಯದಲ್ಲಿ ರಾಮಾಯಣ ಮಹಾಭಾರತ ಕಥೆಯನ್ನು, ಭಜನೆಯನ್ನು, ಮಕ್ಕಳ ಪೋಷಕರು ಕಲಿಸಬೇಕು. ನಮ್ಮಲ್ಲಿ ಧಾರ್ಮಿಕತೆಯನ್ನು ಯಾವೊತ್ತು ಕೂಡ ಕಡಿಮೆ ಮಾಡಬಾರದು ಎಂದು ತಿಳಿಸಿದರು.

ಭಜನ ಗುರುಗಳಾದ ನಾಗೇಶ ನೆರಿಯ ಇವರಿಗೆ ಗುರುವಂದನಾ ಕಾರ್ಯಕ್ರಮವನ್ನು ನಡೆಸಲಾಯಿತು. ವಿದ್ಯಾರ್ಥಿಗಳಿಗೆ ಮಹಾಭಾರತ ಪುಸ್ತಕವನ್ನುವಿತರಿಸಲಾಯಿತು. ವಾರಿಜ ವಿ ಶೆಟ್ಟಿ ಪ್ರಾಸ್ತಾವಿಕ ಮಾತನಾಡಿದರು. ಸೀತಾರಾಮ ಆಳ್ವ ಕೊರಿಂಜ ಕಾರ್ಯಕ್ರಮ ನಿರೂಪಿಸಿ, ರಂಜಿತ್ ಧರ್ಮಾಡಿ ಸ್ವಾಗತಿಸಿ, ವಿಜಯ ಕುಮಾರ್ ಕಲ್ಲಳಿ ಕೆ ಧನ್ಯವಾದವಿತ್ತರು.

Related posts

ವಿಷು ಕಣಿ ಆಚರಣಾ ಸಮಿತಿಯಿಂದ ಕೇರಳ ಸಂಪ್ರಾದಾಯಿಕ ವಿಷು ಕಣಿ ಆಚರಣೆ: ಕೇರಳ ಚೆಂಡೆ ಪ್ರದರ್ಶನ, ಪೂಕಳಂ, ಮನೋರಂಜನಾ ಕಾರ್ಯಕ್ರಮ, 30 ಬಗೆಯ ಉಟೋಪಚಾರ

Suddi Udaya

ಲಾಯಿಲ: ರಸ್ತೆ ಬದಿಗೆ ಬಿದ್ದ ಲಾರಿ

Suddi Udaya

ತಣ್ಣೀರುಪಂತ ಗ್ರಾ.ಪಂ. ವ್ಯಾಪ್ತಿಯಲ್ಲಿ ಕೂಸಿನ ಮನೆ ಶಿಶು ಪಾಲನಾ ಕೇಂದ್ರ ಉದ್ಘಾಟನೆ

Suddi Udaya

“ನಮ್ಮೂರು ನಮ್ಮ ಕೆರೆ” ವಿಶಿಷ್ಟ ಸೇವೆಗಾಗಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ ವಿಜಯವಾಣಿ ವಿಜಯರತ್ನ ಅಂತರಾಷ್ಟ್ರೀಯ ಪ್ರಶಸ್ತಿ

Suddi Udaya

ಕೊಕ್ಕಡ: ಹಾರ ನಿವಾಸಿ ಮೋಹನ ಗೌಡ ನಿಧನ

Suddi Udaya

ಮೂಡುಕೋಡಿ ಕೊಪ್ಪದಬಾಕಿ ಮಾರು ಸತ್ಯ ಸಾರಮಾನಿ ದೈವಸ್ಥಾನದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya
error: Content is protected !!