July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸರಕಾರಿ ಅರಣ್ಯ ಭೂಮಿಯನ್ನು ಅತಿ ಕ್ರಮಿಸಿ ಕೃಷಿ ಮಾಡಿದ ಪ್ರಕರಣ : ಹೈಕೋರ್ಟ್ ಸೂಚನೆ ಮೇರೆಗೆ ಅರಣ್ಯ ಇಲಾಖೆಯಿಂದ ತೆರವು

ಶಿಬಾಜೆ: ಸರಕಾರಿ ಅರಣ್ಯ ಭೂಮಿಯನ್ನು ಅತಿ ಕ್ರಮಿಸಿ ಕೃಷಿ ಮಾಡಿದ ಪ್ರಕರಣದಲ್ಲಿ ಹೈಕೋರ್ಟ್ ಸೂಚನೆ ಮೇರೆಗೆ ಅರಣ್ಯ ಇಲಾಖೆ ತಂಡ ಸ್ಥಳಕ್ಕೆ ದಾಳಿ ನಡೆಸಿ ಆಕ್ರಮಿತ ಭೂಮಿಯನ್ನು ಸ್ವಾಧೀನಕ್ಕೆ ಪಡೆದಿದೆ.

ಕೊಕ್ಕಡ ಹೋಬಳಿಯ ಶಿಬಾಜೆ ಗ್ರಾಮದ ಅರಣ್ಯದ ವಿಸ್ತರಿತ ಬ್ಲಾಕ್, 1963ರ ಅರಣ್ಯ ಪ್ರದೇಶದ ಅರಂಪಾದೆ ಎಂಬಲ್ಲಿ 1.9 ಎಕರೆ ಸರಕಾರಿ ಭೂಮಿಯಲ್ಲಿ ವ್ಯಕ್ತಿಯೊಬ್ಬರು ಕಟ್ಟಡ ಮತ್ತು ರಬ್ಬರ್ ತೋಟ ನಿರ್ಮಿಸಿದ್ದಾರೆ ಎಂಬ ಆರೋಪದ ಮೇಲೆ ಬೆಳ್ತಂಗಡಿ ತಾಲೂಕು ತೆಂಕಕಾರಂದೂರು ನಿವಾಸಿ ಅಶೋಕ್ ಆಚಾರ್ಯ ಸಾರ್ವಜನಿಕ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ನಲ್ಲಿ ಸಲ್ಲಿಸಿದರು. ಸರಕಾರಿ ಭೂಮಿಯನ್ನು ಅಕ್ರಮ ವಶದಲ್ಲಿ ಇರಿಸಿದ ಬಗ್ಗೆ ಹಲವು ಬಾರಿ ಅಧಿಕಾರಿಗಳಿಗೆ ಮನವಿ ಮಾಡಿದ್ದರೂ ಕ್ರಮ ಕೈಗೊಂಡಿಲ್ಲ ಎಂದು ಅವರು ದೂರಿ ನಲ್ಲಿ ತಿಳಿಸಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೆ.ವಿ.ಅರವಿಂದ ಅವರು, ತಕ್ಷಣ ಅತಿಕ್ರಮಿತ ಜಾಗವನ್ನು ಸ್ವಾಧೀನಕ್ಕೆ ಪಡೆದುಕೊಳ್ಳ ಬೇಕು ಎಂದು ಅರಣ್ಯ ಇಲಾಖೆಗೆ ಸೂಚನೆ ನೀಡಿತ್ತು.

ಹೈಕೋರ್ಟ್ ಸೂಚನೆ ಬೆನ್ನಲ್ಲೇ ಅ.3 ರಂದು ಆಕ್ರಮಿತ ಸರಕಾರಿ ಭೂಮಿಯಲ್ಲಿದ್ದ ರಬ್ಬರ್ ತೋಟವನ್ನು ತೆರವುಗೊಳಿಸಿ ಜಾಗವನ್ನು ಸ್ವಾಧೀನಕ್ಕೆ ಪಡೆಯುವ ಕಾರ್ಯಾಚರಣೆ ನಡೆಯಿತು. ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸುಬ್ಬಯ್ಯ ನಾಯ್ಕ, ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿ ರಾಘವೇಂದ್ರ, ಪುತ್ತೂರು ವಲಯ ಅರಣ್ಯಾಧಿಕಾರಿ ಕಿರಣ್, ಉಪವಲಯ ಅರಣ್ಯಾಧಿಕಾರಿ ರಾಜೇಶ್, ಶಿವಾನಂದ ಆಚಾರ್ಯ, ಅರಣ್ಯ ಪಾಲಕ ಸುನಿಲ್ ನಾಯ್ಕ ಸೇರಿದಂತೆ ಅರಣ್ಯ ಇಲಾಖೆ ಸಿಬ್ಬಂದಿ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿದ್ದಾರೆ.

ಕಾನೂನು ಪಾಲಿಸಿ ಕ್ರಮ ಕೈಗೊಳ್ಳಲಾಗಿದೆ ಎಸಿಎಫ್: ಸುಬ್ಬಯ್ಯ ನಾಯಕ್ ‌ ಎಸಿಎಫ್.

ಕಾನೂನು ಪ್ರಕಾರ ಎಲ್ಲ ಕ್ರಮಗಳನ್ನು ಕೈಗೊಂಡು ಶಿಬಾಜೆ ಗ್ರಾಮದಲ್ಲಿ ಅರಣ್ಯ ಒತ್ತುವರಿಯನ್ನು ತೆರವು ಮಾಡಲಾಗಿದೆ. ಸರ್ವೆ ನಂಬರ್ 184 ರಲ್ಲಿ ಅರಣ್ಯ ಜಾಗದಲ್ಲಿ ಅಕ್ರಮ ಮಾಡಿರುವುದು ಕಂಡು ಬಂದಿದೆ. 1.95 ಎಕ್ರೆ ಅರಣ್ಯ ಭೂಮಿಯ ಅಕ್ರಮಣವಾಗಿದ್ದು ಇದರಲ್ಲಿ 1.36ಎಕ್ರೆ ತೆರವುಗೊಳಿಸಲಾಗಿದೆ. ಉಳಿದ 56 ಸೆನ್ಸ್ ಜಾಗದಲ್ಲಿ ಮನೆ ಸೇರಿದಂತೆ ಕೃಷಿ ಇದೆ ಮುಂದಿನ ದಿನಗಳಲ್ಲಿ ಇದನ್ನು ತೆರವು ಗೊಳಿಸಲಾಗುವುದು.

Related posts

ಬಳಂಜ: ಜನಮಂಗಳ ಕಾರ್ಯಕ್ರದಡಿ ಕಾಮೋಡ್ ಚೇರ್ ವಿತರಣೆ

Suddi Udaya

ಅಭಿವೃದ್ಧಿ ಅಧಿಕಾರಿಗಳಾದ ಸಫಾನ, ಸುಮ ವರ್ಗಾವಣೆ: ಧರ್ಮಸ್ಥಳ ಪಿಡಿಓ ಆಗಿ ನಾಗೇಶ್, ಸುಲ್ಕೇರಿಗೆ ಗೌರಿಶಂಕರ್, ಪಟ್ರಮೆಗೆ ಹೊನ್ನಮ್ಮ, ಮೇಲಂತಬೆಟ್ಟುಗೆ ಜಗದೀಶ್ ನೇಮಕ

Suddi Udaya

ಲಾಯಿಲ: ಶ್ರೀ ಗಾಯತ್ರಿ ವಿಶ್ವಕರ್ಮ ಮಹಿಳಾ ಸಂಘದ ವತಿಯಿಂದ ಶ್ರೀ ಕಾಳಿಕಾಂಬ ಪೂಜೆ ಹಾಗೂ ಶ್ರೀ ವರಮಹಾಲಕ್ಷ್ಮೀ ಪೂಜೆ, ನೂರಾರು ವೃತಧಾರಿಗಳು ಪೂಜೆಯಲ್ಲಿ ಭಾಗಿ

Suddi Udaya

ವೇಣೂರು ಪೊಲೀಸ್ ಠಾಣಾ ಪಿಎಸ್ಐ ಆಗಿ ಅಕ್ಷಯ್ ಡಿ ನೇಮಕ

Suddi Udaya

ಬಿಜೆಪಿ ತಣ್ಣೀರುಪoತ ಶಕ್ತಿಕೇಂದ್ರ ಪ್ರಮುಖ್ ಆಗಿ ಚೇತನ್ ಸುವರ್ಣ ಅಳಕ್ಕೆ ಆಯ್ಕೆ

Suddi Udaya

ಧರ್ಮಸ್ಥಳ: ಹದೆಗೆಟ್ಟ ರಸ್ತೆ ದುರಸ್ತಿಗೆ ಆಗ್ರಹಿಸಿ ಪ್ರತಿಭಟನೆ: ಮತದಾನ ಬಹಿಷ್ಕಾರದ ಎಚ್ಚರಿಕೆ

Suddi Udaya
error: Content is protected !!