25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಂ. ಬಿ.ಎಡ್ ಕಾಲೇಜಿನಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀ ಜಯಂತಿ ಆಚರಣೆ

ಉಜಿರೆ: ಗಾಂಧೀಜಿಯವರು ಜಗತ್ತು ಕಂಡ ಶಾಂತಿದೂತ. ಕೇವಲ ಮಾತುಗಳಲ್ಲಿ ಅಲ್ಲದೇ ಕ್ರಿಯೆಯ ಮೂಲಕ ವಿಶ್ವಕ್ಕೆ ಅಹಿಂಸಾ ಹಾಗೂ ಶಾಂತಿಯನ್ನು ಸಾರಿದವರು. ನಾವೆಲ್ಲರೂ ಅವರ ಹಾದಿಯಲ್ಲಿ ನಡೆಯಬೇಕು. ಸತ್ಯವು ಆ ಕ್ಷಣಕ್ಕೆ ಆತಂಕ ತಂದರೂ ಕೊನೆಗೆ ನೆಮ್ಮದಿ ಕೊಡುತ್ತದೆ. ಆದುದರಿಂದ ಕೊನೆವರೆಗೂ ನೆಮ್ಮದಿ ನೀಡದ ಸುಳ್ಳು ಒಳ್ಳೆಯದಲ್ಲ. ಪಾಪವನ್ನು ದ್ವೇಷಿಸಿ, ಪಾಪಿಯನ್ನು ಪ್ರೀತಿಸು ಎನ್ನುವ ರಾಷ್ಟ್ರಪಿತ ಗಾಂಧೀಜಿಯವರ ತತ್ವವನ್ನು ನಾವು ನಮ್ಮ ಜೀವನದಲ್ಲಿ ಅಳವಡಿಸಬೇಕು ಎಂದು ದ್ವಿತೀಯ ಬಿ.ಇಡಿ. ಪ್ರಶಿಕ್ಷಣಾರ್ಥಿ ಮೋಹನ್ ಕುಮಾರ್ ವಿ ಹೇಳಿದರು.


ಇವರು ಶ್ರೀ ಧ. ಮಂ. ಶಿಕ್ಷಣ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ “ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಶಿಕ್ಷಣಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.
ನಂತರ ಸ್ವತಂತ್ರ ಭಾರತದ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರೀ ಯವರ ಕುರಿತು ಪ್ರಥಮ ಬಿ.ಇಡಿ. ಪ್ರಶಿಕ್ಷಣಾರ್ಥಿ ಶ್ರವಣ ಮಹಾಪುರುಷ ಮಾತನಾಡಿ “ ಶಾಸ್ತ್ರಿ ಯವರ ಜೀವನ ಚರಿತ್ರೆ ನಮಗೆಲ್ಲರಿಗೂ ಪ್ರೇರಕ. ದೇಶದ ಅಭಿವೃದ್ಧಿಗೆ ತಮ್ಮ ಜೀವವನ್ನೇ ಮುಡಿಪಾಗಿಟ್ಟ ವ್ಯಕ್ತಿ ಇವರಾಗಿದ್ದರು. ಇವರಿಂದ ಸ್ವಾಭಿಮಾನ ಹಾಗೂ ನೈಜ ಸ್ವಾತಂತ್ರ್ಯದ ಅರ್ಥವನ್ನು ನಾವು ತಿಳಿಯಬಹುದು. ಆಕರದಲ್ಲಿ ವಾಮನನಾಗಿ, ಆಡಳಿತದಲ್ಲಿ ತ್ರಿವಿಕ್ರಮನಾಗಿ ಕಂಡವರು. ಭಾರತ ಕಂಡ ಆಚಾರ ಸಂಪನ್ನ, ವಿಚಾರದಲ್ಲಿ ಚೊಕ್ಕ ಚಿನ್ನರಾದ ಇವರು ನಮಗೆಲ್ಲರಿಗೂ ಆದರ್ಶ” ಎಂದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ವಿದ್ಯಾರ್ಥಿ ನಾಯಕಿ ವೀಕ್ಷಾದೀಪ ಮಾತನಾಡುತ್ತಾ “ ವಿದ್ಯಾರ್ಥಿಗಳು ಗಾಂಧೀಜಿ ಹಾಗೂ ಶಾಸ್ತ್ರೀಜಿಯವರ ತತ್ವಗಳನ್ನು ಮೈಗೂಡಿಸಿಕೊಂಡಾಗ ಮಾತ್ರ ಈ ಆಚರಣೆಗಳು ಪೂರ್ಣವಾಗಲು ಸಾಧ್ಯ. ಜೀವನದಲ್ಲಿ ಪ್ರೀತಿ ಹಂಚುತ್ತಾ ಬಾಳಿ, ಮಾನವ ಜನ್ಮವನ್ನು ಸಾರ್ಥಕಗೊಳಿಸಿ” ಎಂದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಉಪನ್ಯಾಸಕರಾದ ವಿದ್ಯಾಶ್ರೀ ಪಿ, ಆಧ್ಯ ಯು, ವೀಕ್ಷಿತಾ ಎನ್ ಹಾಗೂ ಪ್ರಥಮ ಮತ್ತು ದ್ವಿತೀಯ ಬಿ.ಇಡಿ. ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು.
ಪ್ರಶಿಕ್ಷಣಾರ್ಥಿ ಪ್ರೀತಿ ಮರಿಯಾ ಸ್ವಾಗತಿಸಿ, ಮಹಾಂತೇಶ್ ರಾಥೋಡ್ ವಂದಿಸಿ, ವಿಶ್ವನಾಥ್ ಹಾಗೂ ಗಾಯತ್ರಿ ಅತಿಥಿ ಪರಿಚಯಿಸಿ, ಸುಪ್ರೀತ್ ಜೈನ್ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಪಾಲೇದು: ಅಗರಿ ರಾಜಮ್ಮ ನಾಯ್ಕ್ ರವರ ಮನೆಗೆ ಮರ ಬಿದ್ದು ಹಾನಿ

Suddi Udaya

ಬೆಳ್ತಂಗಡಿ ಪಾರಸ್‌ ಪೃಥ್ವಿ ಜುವೆಲ್ಸ್ ನಲ್ಲಿ “ಭರ್ಜರಿ ಆಷಾಢ ಸೇಲ್ಸ್”

Suddi Udaya

ವೇಣೂರು: ಬ್ರಾಹ್ಮಿ ಜೈನ ಮಹಿಳಾ ಸಮಾಜದ ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya

ರಾಜ್ಯಮಟ್ಟದ ಜಿನ ಭಜನಾ ಸ್ಪರ್ಧೆ: ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳು ತೃತೀಯ ಸ್ಥಾನ

Suddi Udaya

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿ ನಿರ್ದೇಶಕ ಜಯರಾಮ ಶೆಟ್ಟಿ ಮುಂಡಾಡಿಗುತ್ತುರವರಿಗೆ ವಿಶ್ವೇಶ್ವರಯ್ಯ ಅಂತರರಾಷ್ಟ್ರೀಯ ಪ್ರಶಸ್ತಿ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಗೀತಾ ಗಾಯನ ಸ್ಪರ್ಧೆ

Suddi Udaya
error: Content is protected !!