September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಲ್ಮಂಜ : ಸಿದ್ದಬೈಲು ಪರಾರಿ ಅಂಗನವಾಡಿಯಲ್ಲಿ ಪೋಷಣ್ ಮಾಸಾಚರಣೆ

ಕಲ್ಮಂಜ : ಸಿದ್ದಬೈಲು ಪರಾರಿ ಅಂಗನವಾಡಿಯಲ್ಲಿ ಅ. 3 ರಂದು ಮಹಿಳಾ‌ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ರೋಟರಿ ಸಮುದಾಯ ದಳ ಕಲ್ಮಂಜ ಜಂಟಿಯಾಗಿ ಪೋಷಣ್ ಮಾಸಾಚರಣೆ ಕಾರ್ಯಕ್ರಮವನ್ನು ಆಚರಿಸಲಾಯಿತು.

ಆರೋಗ್ಯ ಶಿಕ್ಷಣಾಧಿಕಾರಿಯಾದ ಅಮ್ಮಿ ಮೇಡಂ ಇವರು ಪೌಷ್ಟಿಕ ಆಹಾರದ ಬಗ್ಗೆ ಮಾಹಿತಿ ನೀಡಿದರು.
ವಿಮುಕ್ತಿ ಸಂಸ್ಥೆಯ ಮೇಲ್ವಿಚಾರಕಿಯಾದ ಶ್ರೀಮತಿ ರೋಹಿನಿ ಇವರು ಪೌಷ್ಟಿಕ ಆಹಾರದ ಉಪಯೋಗಗಳು ಹಾಗೂ ಬೆಳ್ತಂಗಡಿ ರೋಟರಿ ಕ್ಲಬ್ ನ ಅಧ್ಯಕ್ಷ ಪ್ರಕಾಶ್ ಪ್ರಭು ರವರು ಯಾವ ರೀತಿಯ ಪೌಷ್ಟಿಕ ಆಹಾರ ಸೇವಿಸಬಹುದು ಎಂಬುದರ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಉತ್ತಮ ಆಹಾರ ತಯಾರಿಸಿದ ತಾಯಂದಿರಿಗೆ ಬಹುಮಾನ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಆರೋಗ್ಯ ಶಿಕ್ಷಣಾಧಿಕಾರಿ ಅಮ್ಮಿ, ಬಾಲ‌ ವಿಕಾಸ ಸಮಿತಿಯ ಅಧ್ಯಕ್ಷೆ ಶ್ರೀಮತಿ ಸವಿತಾ, ವಿಮುಕ್ತಿ ಸಂಸ್ಥೆಯ ‌ಮೇಲ್ವಿಚಾರಕಿ ರೋಹಿಣಿ, ಬೆಳ್ತಂಗಡಿ ರೋಟರಿ ಕ್ಲಬ್ ನ‌ ಅಧ್ಯಕ್ಷ ಪ್ರಕಾಶ್ ಪ್ರಭು, ಕಲ್ಮಂಜ ರೋಟರಿ ಸಮುದಾಯ ದಳದ ಕೋಶಾಧಿಕಾರಿ ಡಿ ಜಯಂತ್ ರಾವ್ ಕಲ್ಮಂಜ, ಸದಸ್ಯರಾದ ರಾಘವ್ ಕಲ್ಮಂಜ, ಸತೀಶ್ ಭಟ್ ತಂಟ್ಯ, ಸುಂದರ ಆಚಾರ್ಯ, ಪಂಚಾಯತ್ ಸದಸ್ಯರಾದ ಶ್ರೀಮತಿ ಶೋಭಾ, ಎಸ್.ಡಿ.ಎಮ್.ಸಿ ಅಧ್ಯಕ್ಷ ದಿನೇಶ್ ಗೌಡ , ಆಶಾ ಕಾರ್ಯಕರ್ತೆ, ಮಕ್ಕಳ ತಾಯಂದಿರು ಮತ್ತು ಸ್ತ್ರೀ ಶಕ್ತಿ ಸದಸ್ಯರು ಉಪಸ್ಥಿತರಿದ್ದರು.


ಸರೋಜಿನಿ ಸ್ವಾಗತಿಸಿ, ವಸಂತಿ ಕಾರ್ಯಕ್ರಮ ನಿರೂಪಿಸಿ, ಧನ್ಯವಾದವಿತ್ತರು.

Related posts

ದ.ಕ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ, ನಿಕಟಪೂರ್ವ ಮಂಡಲಾಧ್ಯಕ್ಷ ಜಯಂತ್ ಕೋಟ್ಯಾನ್ ಆಯ್ಕೆ

Suddi Udaya

ಎರಡು ವರ್ಷದ ಕತ್ತಲೆಗೆ ಅಂತ್ಯ ಹಾಡಿದ ಶಾಸಕ ಹರೀಶ್ ಪೂಂಜ: ಮಂದಹಾಸ ಮೂಡಿಸಿದ ವಿದ್ಯುತ್ ಸಂಪರ್ಕ

Suddi Udaya

ಕುಂಟಿನಿ ಅಲ್ ಬುಖಾರಿ ಜುಮ್ಮಾ ಮಸ್ಜಿದ್ ನಲ್ಲಿ ರಂಝಾನ್ ಆಚರಣೆ

Suddi Udaya

ಧರ್ಮಸ್ಥಳ: ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಅಡಿಗಾಸ್ ಯಾತ್ರಾದ ಪ್ರವಾಸ ದರ್ಶನದ ಮಾಹಿತಿ ಕೈಪಿಡಿಯ ಅನಾವರಣ

Suddi Udaya

ಮುಂಡಾಜೆ ಕೀರ್ತನಾ ಕಲಾ ತಂಡದ ವತಿಯಿಂದ ನಿವೃತ್ತ ಚಂದ್ರಕಾಂತ ಪ್ರಭು ರಿಗೆ ಅಭಿನಂದನೆ ಕಾರ್ಯಕ್ರಮ

Suddi Udaya

ಮಾಜಿ ಅಧ್ಯಕ್ಷ ಹಾಲಿ ಗ್ರಾ.ಪಂ ಸದಸ್ಯ ಅಬ್ದುಲ್ ರಝಾಕ್ ಸತತ ಹೋರಾಟದಿಂದ ತೆಕ್ಕಾರು ಗ್ರಾಮಕ್ಕೆ ಉಪ ಆರೋಗ್ಯ ಕೇಂದ್ರ ಮಂಜೂರು ಕಟ್ಟಡ ನಿರ್ಮಿಸಲು ಅನುದಾನ ಮಂಜೂರುಗೊಳಿಸುವಂತೆ ಆರೋಗ್ಯ ಸಚಿವರಿಗೆ ಮತ್ತೊಂದು ಮನವಿ

Suddi Udaya
error: Content is protected !!