23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಹಾಗೂ ವಿಜಯ ದಶಮಿ ಉತ್ಸವ ಪ್ರಯುಕ್ತ ಸಭಾ ಕಾರ್ಯಕ್ರಮ

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಹಾಗೂ ವಿಜಯ ದಶಮಿ ಉತ್ಸವ ಪ್ರಯುಕ್ತ ಸಭಾ ಕಾರ್ಯಕ್ರಮವನ್ನು ನಡೆಸಲಾಯಿತು.

ಸಭಾಧ್ಯಕ್ಷತೆಯನ್ನು ದೇವಸ್ಥಾನ ದ ಆಡಳಿತ ಮೋಕ್ತೇಸರರಾದ ಯೋಗೀಶ್ ಪೂಜಾರಿ ಕಡ್ತಿಲ ವಹಿಸಿದ್ದರು. ಧಾರ್ಮಿಕ ಉಪನ್ಯಾಸ ಮಾಡಿದಂತಹ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರರಾದ ಡಾ| ರವೀಶ್ ಪಡುಮಲೆ ಇವರು ದೇವಸ್ಥಾನಗಳಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮೌಲ್ಯಯುತ ಧಾರ್ಮಿಕ ಶಿಕ್ಷಣ, ಭಜನೆ, ಸಂಸ್ಕೃತಿ ಇವೆಲ್ಲವನ್ನೂ ಒಗ್ಗೂಡಿಸಿಕೊಂಡು ನಾವೆಲ್ಲಾ ನಡೆಯಬೇಕು. ಕೊರಿಂಜ ಕ್ಷೇತ್ರದಲ್ಲಿ ಬ್ರಹ್ಮಕಲಶೋತ್ಸವ ನಡೆದು ಇದೀಗ ಪಂಚಲಿಂಗೇಶ್ವರನ ಸನ್ನಿಧಿಯಲ್ಲಿ ಮಕ್ಕಳ ಕುಣಿತ ಭಜನಾ ತಂಡವನ್ನು ದೀಪ ಪ್ರಜ್ವಲಿಸುವ ಮೂಲಕ ದೇವಸ್ಥಾನದ ಶಕ್ತಿ ಹಾಗೂ ಭಕ್ತಿ ಬಹಳ ಹೆಚ್ಚಾಗಿದೆ. ಪ್ರತಿ ಮನೆಯಲ್ಲೂ ಸಂಜೆಯ ಸಮಯದಲ್ಲಿ ರಾಮಾಯಣ ಮಹಾಭಾರತ ಕಥೆಯನ್ನು, ಭಜನೆಯನ್ನು, ಮಕ್ಕಳ ಪೋಷಕರು ಕಲಿಸಬೇಕು. ನಮ್ಮಲ್ಲಿ ಧಾರ್ಮಿಕತೆಯನ್ನು ಯಾವೊತ್ತು ಕೂಡ ಕಡಿಮೆ ಮಾಡಬಾರದು ಎಂದು ತಿಳಿಸಿದರು.

ಭಜನ ಗುರುಗಳಾದ ನಾಗೇಶ ನೆರಿಯ ಇವರಿಗೆ ಗುರುವಂದನಾ ಕಾರ್ಯಕ್ರಮವನ್ನು ನಡೆಸಲಾಯಿತು. ವಿದ್ಯಾರ್ಥಿಗಳಿಗೆ ಮಹಾಭಾರತ ಪುಸ್ತಕವನ್ನುವಿತರಿಸಲಾಯಿತು. ವಾರಿಜ ವಿ ಶೆಟ್ಟಿ ಪ್ರಾಸ್ತಾವಿಕ ಮಾತನಾಡಿದರು. ಸೀತಾರಾಮ ಆಳ್ವ ಕೊರಿಂಜ ಕಾರ್ಯಕ್ರಮ ನಿರೂಪಿಸಿ, ರಂಜಿತ್ ಧರ್ಮಾಡಿ ಸ್ವಾಗತಿಸಿ, ವಿಜಯ ಕುಮಾರ್ ಕಲ್ಲಳಿ ಕೆ ಧನ್ಯವಾದವಿತ್ತರು.

Related posts

ನಾರಾವಿ ಸಂತ ಅಂತೋಣಿ ಪ.ಪೂ ಕಾಲೇಜು ಶೇ.98 ಫಲಿತಾಂಶ

Suddi Udaya

ಮಚ್ಚಿನ: ತಾರೆಮಾರು ಸೇತುವೆಯ ಬಳಿ ವಾಮಾಚಾರಕ್ಕೆ ಬಳಸಿದ ವಸ್ತುಗಳನ್ನು ಎಸೆಯುವ ಬಗ್ಗೆ ಸ್ಥಳೀಯರ ಅಕ್ರೋಶ

Suddi Udaya

ಹೃದಯ ಸಮಸ್ಯೆಯಿಂದ ಮೃತಪಟ್ಟ ಬಾಲಕ ಅಶ್ವಿನ್ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ನ್ಯಾಯ್ಯತರ್ಪು: ಮನೆಗಳಿಗೆ ಸಿಡಿಲು ಬಡಿದು ಹಾನಿ: ಸ್ಥಳಕ್ಕೆ ರಕ್ಷಿತ್ ಶಿವರಾಂ ಭೇಟಿ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ಮಿತ್ತಬಾಗಿಲು ಜನಾರ್ದನ ಗೌಡ ರವರಿಗೆವೀಲ್ ಚೆಯರ್ ಹಸ್ತಾಂತರ

Suddi Udaya

ಉಜಿರೆ ವಲಯ ವಾಲಿಬಾಲ್ ಪಂದ್ಯಾಟ: ಬೆಂದ್ರಾಳ ಸೈಂಟ್ ಸಾವಿಯೋ ಆಂ.ಮಾ. ಶಾಲೆ ಬಾಲಕ- ಬಾಲಕಿಯರ ವಿಭಾಗ ಪ್ರಥಮ

Suddi Udaya
error: Content is protected !!