September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಹಾಗೂ ವಿಜಯ ದಶಮಿ ಉತ್ಸವ ಪ್ರಯುಕ್ತ ಸಭಾ ಕಾರ್ಯಕ್ರಮ

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಹಾಗೂ ವಿಜಯ ದಶಮಿ ಉತ್ಸವ ಪ್ರಯುಕ್ತ ಸಭಾ ಕಾರ್ಯಕ್ರಮವನ್ನು ನಡೆಸಲಾಯಿತು.

ಸಭಾಧ್ಯಕ್ಷತೆಯನ್ನು ದೇವಸ್ಥಾನ ದ ಆಡಳಿತ ಮೋಕ್ತೇಸರರಾದ ಯೋಗೀಶ್ ಪೂಜಾರಿ ಕಡ್ತಿಲ ವಹಿಸಿದ್ದರು. ಧಾರ್ಮಿಕ ಉಪನ್ಯಾಸ ಮಾಡಿದಂತಹ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರರಾದ ಡಾ| ರವೀಶ್ ಪಡುಮಲೆ ಇವರು ದೇವಸ್ಥಾನಗಳಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮೌಲ್ಯಯುತ ಧಾರ್ಮಿಕ ಶಿಕ್ಷಣ, ಭಜನೆ, ಸಂಸ್ಕೃತಿ ಇವೆಲ್ಲವನ್ನೂ ಒಗ್ಗೂಡಿಸಿಕೊಂಡು ನಾವೆಲ್ಲಾ ನಡೆಯಬೇಕು. ಕೊರಿಂಜ ಕ್ಷೇತ್ರದಲ್ಲಿ ಬ್ರಹ್ಮಕಲಶೋತ್ಸವ ನಡೆದು ಇದೀಗ ಪಂಚಲಿಂಗೇಶ್ವರನ ಸನ್ನಿಧಿಯಲ್ಲಿ ಮಕ್ಕಳ ಕುಣಿತ ಭಜನಾ ತಂಡವನ್ನು ದೀಪ ಪ್ರಜ್ವಲಿಸುವ ಮೂಲಕ ದೇವಸ್ಥಾನದ ಶಕ್ತಿ ಹಾಗೂ ಭಕ್ತಿ ಬಹಳ ಹೆಚ್ಚಾಗಿದೆ. ಪ್ರತಿ ಮನೆಯಲ್ಲೂ ಸಂಜೆಯ ಸಮಯದಲ್ಲಿ ರಾಮಾಯಣ ಮಹಾಭಾರತ ಕಥೆಯನ್ನು, ಭಜನೆಯನ್ನು, ಮಕ್ಕಳ ಪೋಷಕರು ಕಲಿಸಬೇಕು. ನಮ್ಮಲ್ಲಿ ಧಾರ್ಮಿಕತೆಯನ್ನು ಯಾವೊತ್ತು ಕೂಡ ಕಡಿಮೆ ಮಾಡಬಾರದು ಎಂದು ತಿಳಿಸಿದರು.

ಭಜನ ಗುರುಗಳಾದ ನಾಗೇಶ ನೆರಿಯ ಇವರಿಗೆ ಗುರುವಂದನಾ ಕಾರ್ಯಕ್ರಮವನ್ನು ನಡೆಸಲಾಯಿತು. ವಿದ್ಯಾರ್ಥಿಗಳಿಗೆ ಮಹಾಭಾರತ ಪುಸ್ತಕವನ್ನುವಿತರಿಸಲಾಯಿತು. ವಾರಿಜ ವಿ ಶೆಟ್ಟಿ ಪ್ರಾಸ್ತಾವಿಕ ಮಾತನಾಡಿದರು. ಸೀತಾರಾಮ ಆಳ್ವ ಕೊರಿಂಜ ಕಾರ್ಯಕ್ರಮ ನಿರೂಪಿಸಿ, ರಂಜಿತ್ ಧರ್ಮಾಡಿ ಸ್ವಾಗತಿಸಿ, ವಿಜಯ ಕುಮಾರ್ ಕಲ್ಲಳಿ ಕೆ ಧನ್ಯವಾದವಿತ್ತರು.

Related posts

ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ-ಪರಿಸರ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿ: ಸುಮಿತ್ರಾ

Suddi Udaya

ಕೊಯ್ಯೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿಯ ಮಹಾಸಭೆ ಹಾಗೂ ಪದಾಧಿಕಾರಿಗಳ ಆಯ್ಕೆ

Suddi Udaya

ರಾಜ ಕೇಸರಿ ಸಂಘಟನೆಯ ಸಂಸ್ಥಾಪಕರಾದ ದೀಪಕ್ ಜಿ ಬೆಳ್ತಂಗಡಿ ಇವರ ನೇತೃತ್ವದಲ್ಲಿ 548ನೇಯ ಯೋಜನೆ ಅಂಗವಾಗಿ ಬೃಹತ್ ರಕ್ತದಾನ ಶಿಬಿರ:ಶಾಲಾ ಮಕ್ಕಳಿಗೆ ಊಟದ ಬಟ್ಟಲು, ಲೋಟ ಮತ್ತು ತಟ್ಟೆ ಹಸ್ತಾಂತರ ಕಾರ್ಯಕ್ರಮ ನಡೆಯಿತು

Suddi Udaya

ಉಜಿರೆ ಎಸ್.ಡಿ.ಎಮ್. “SAP-Software ಮೂಲಕ ಹಣಕಾಸು ಲೆಕ್ಕಪತ್ರ ನಿರ್ವಹಣೆ ಮತ್ತು ನಿಯಂತ್ರಣ” ಕುರಿತು ವಿಶೇಷ ತರಬೇತಿ ಕಾರ್ಯಾಗಾರ

Suddi Udaya

ಉಜಿರೆ ಬೃಹತ್ ಹಿಂದೂ ಸಂಗಮ ಆಯೋಜನಾ ಸಮಿತಿ ರಚನೆ

Suddi Udaya

ಆಗಸ್ಟ್ ತಿಂಗಳಿನಲ್ಲಿ ನಡೆಯಲಿರುವ NET-2024 ಮರು ಪರೀಕ್ಷೆಗೆ ವಿದ್ಯಾಮಾತಾ ಅಕಾಡೆಮಿಯಿಂದ ಕ್ರ್ಯಾಶ್ ಕೋರ್ಸ್: ಜು.10 ರಿಂದ ಆನ್ಲೈನ್ ತರಗತಿಗಳು ಪ್ರಾರಂಭ

Suddi Udaya
error: Content is protected !!