September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಲೋಬೊ ಟಿವಿಎಸ್ ಮೋಟಾರ್ಸ್ ಮಳಿಗೆಯಲ್ಲಿ ಆಯುಧ ಪೂಜೆ

ಬೆಳ್ತಂಗಡಿ: ಕಳೆದ ಹಲವಾರು ವರ್ಷಗಳಿಂದ ಗ್ರಾಹಕರಿಗೆ ಉತ್ತಮ ಸೇವೆ ಸಲ್ಲಿಸುತ್ತಾ ಬರುತ್ತಿರುವ ರೋನಾಲ್ಡ್ ಲೋಬೋ ಇವರ ಮಾಲೀಕತ್ವದ ಬೆಳ್ತಂಗಡಿಯ ಪ್ರಸಿದ್ಧ ಟಿವಿಎಸ್ ಮೋಟರ್ಸ್ ನಲ್ಲಿ ಆಯುಧ ಪೂಜೆಯನ್ನು ಅ. 2 ರಂದು ಆಚರಿಸಲಾಯಿತು.

ಬೆಳ್ತಂಗಡಿ ವಿಮುಕ್ತಿ ಚಾರಿಟೇಬಲ್ ಸಂಸ್ಥೆಯ ಪ್ರದಾನ ಗುರುಗಳಾದ ಫಾ.ವಿನೋದ್ ಮಸ್ಕರೇನಸ್ ರವರು ಪ್ರಾರ್ಥನೆ ಮಾಡಿ ಸಂಸ್ಥೆಯ ಮಾಲಕರಿಗೆ, ಗ್ರಾಹಕರಿಗೆ ಹಾಗೂ ಸಿಬ್ಬಂದಿ ವರ್ಗದವರಿಗೆ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಹೋಲಿ ರೆಡಿಮರ್ ಚರ್ಚ್ ನ ಪಾಲನ ಪರಿಷದ್ ನ ಉಪಾಧ್ಯಕ್ಷ ರಾದ ವಾಲ್ಟರ್ ಮೋನಿಸ್, ಆಯೋಗದ ಸಂಚಾಲಕಿ ಪೌಲಿನ್ ರೇಗೋ, ವಾರ್ಡಿನ ಗುರಿಕಾರಾದ ಹಾಗೂ ನಿವೃತ್ತ ಶಿಕ್ಷಕಿ ಜೂಲಿಯಾನ ಡಿಸೋಜಾ, ಸಂಸ್ಥೆಯ ಮಾಲಕರ ಪತ್ನಿ ರೋಶಿನಿ ಲೋಬೊ, ಹಿರಿಯ ವಕೀಲ ಅಲೋಶಿಯಸ್ ಲೋಬೊ, ಅಕ್ಕಂದಿರಾದ ವೇರೋನಿಕಾ ಲೋಬೊ, ಜೆನೆವಿವ್ ಲೋಬೊ, ಪ್ರೇರಣಾ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಹಾಗೂ ವರ್ತಕರ ಸಂಘದ ಕಾರ್ಯದರ್ಶಿ ಲಾನ್ಸಿ ಪಿರೇರ, ಭಾರತೀಯ ಜೀವ ವಿಮಾ ವಿನ್ಸೆಂಟ್ ಡಿಸೋಜಾ, ಶಿಕ್ಷಕಿ ಥಿಯೋಫಿಲ್ಲ ಡಿಸೋಜಾ, ಸಿವಿಸಿ ಹಾಲ್ ನ ಮಾಲಕರಾದ ಜೇಮ್ಸ್ ಡಿಸೋಜಾ ,ಸಂಸ್ಥೆಯ ಮ್ಯಾನೇಜರ್ ಅಶೋಕ್ ಮೋನಿಸ್, ಸಿಬ್ಬಂದಿ ವರ್ಗದವರು, ಗ್ರಾಹಕರು ಹಾಗೂ ಇತರರು ಉಪಸ್ಥಿತರಿದ್ದರು.

ಸಂಸ್ಥೆಯ ಮಾಲಕ ರೊನಾಲ್ಡ್ ಲೋಬೋ ಆಗಮಿಸಿದ ಅತಿಥಿ ಗಣ್ಯರ ಸ್ವಾಗತಿಸಿ, ಸತ್ಕರಿಸಿದರು.

Related posts

ದ.ಕ. ಜಿಲ್ಲೆಯ ಹೆಚ್ಚಿನ ರೈತರಿಗೆ ಬೆಳೆ ಸಾಲ ಯೋಜನೆಯ ಸೌಲಭ್ಯ ತಲುಪುವಲ್ಲಿ ವಿಫಲ:ಅಗತ್ಯವಿರುವ ನಿಧಿಯನ್ನು ತಕ್ಷಣ ಬಿಡುಗಡೆಗೊಳಿಸಬೇಕೆಂದು ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಹಕಾರ ಮಂತ್ರಿ ಕೆ.ಎನ್.ರಾಜಣ್ಣ ಅವರಿಗೆ ಆಗ್ರಹ

Suddi Udaya

ಪಣಕಜೆ ಕೃಷ್ಣನಗರ ನಿವಾಸಿ ಅಪ್ಪಿ ಶೆಟ್ಟಿ ನಿಧನ

Suddi Udaya

ಸಾವ್ಯ ಬೆಸ್ಟ್ ಫೌಂಡೇಶನ್ ವತಿಯಿಂದ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ

Suddi Udaya

ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ರಕ್ಷಕ-ಶಿಕ್ಷಕ ಸಂಘದ ಮಹಾಸಭೆ

Suddi Udaya

ಬಂದಾರು: ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಸೇವಾ ಟ್ರಸ್ಟ್ ಮತ್ತು ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ ಪೆಲತ್ತಿಮಾರು ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ, ಭಜನೆ ಹಾಗೂ ವಿವಿಧ ಆಟೋಟ ಸ್ಪರ್ಧೆ

Suddi Udaya

ಬಳಂಜ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಸಿ.ಎಸ್.ಸಿ ಕೇಂದ್ರ ಸ್ಥಳಾಂತರಗೊಂಡು ಉದ್ಘಾಟನೆ

Suddi Udaya
error: Content is protected !!