ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಧ. ಮಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜಿನಲ್ಲಿ ಪರಸ್ಪರ ಪರಿಚಯ ಕಾರ್ಯಕ್ರಮ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ಮಹಾವಿದ್ಯಾಲಯದ ಈ ವರ್ಷದ ನೂತನ ವಿದ್ಯಾರ್ಥಿಗಳು ಮತ್ತು ಅವರ ಪೋಷಕರಿಗಾಗಿ ಪರಸ್ಪರ ಪರಿಚಯ ಕಾರ್ಯಕ್ರಮವನ್ನು ಅ. 3 ರಂದು ಕಾಲೇಜಿನಲ್ಲಿ ಆಯೋಜಿಸಲಾಯಿತು.

ಕಾರ್ಯಕ್ರಮವನ್ನು ಡಾ. ಜಿ. ಅರುಣ್ ಮಯ್ಯ, ಪ್ರಾಧ್ಯಾಪಕರು ಮತ್ತು ಡೀನ್, ಕಸ್ತೂರಬಾ ವೈದ್ಯಕೀಯ ಕಾಲೇಜು, ಮಣಿಪಾಲ ಇವರು ಇತರೇ ಗಣ್ಯರ ಸಮ್ಮುಖದಲ್ಲಿ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಪ್ರಶಾಂತ್ ಶೆಟ್ಟಿ ಅವರು ಮಾತನಾಡಿ, ನ್ಯಾಚುರೋಪತಿ ಶಿಕ್ಷಣದ ಮಹತ್ವ ಮತ್ತು ಅದರ ವಿಶಾಲವಾದ ಅವಕಾಶಗಳ ಕುರಿತು ವಿವರಿಸಿದರು. ಉಪಪ್ರಾಂಶುಪಾಲರಾದ ಡಾ. ಸುಜಾತಾ ಕೆ ಜೆ, ಹೊಸ ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಸ್ವಾಗತ ಕೋರಿದರು.


ಕಾರ್ಯಕ್ರಮದಲ್ಲಿ ಡಾ. ಎಚ್. ಬಿ. ಶಶಿಧರ್, ಪ್ರಾಧ್ಯಾಪಕರು, ರೋಗಶಾಸ್ತ್ರ ವಿಭಾಗ, ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ, ಮೈಸೂರು; ಡಾ. ಎಚ್. ಎನ್. ದಿನೇಶ್, ಪ್ರಾಧ್ಯಾಪಕರು/ಡೀನ್ ಮತ್ತು ನಿರ್ದೇಶಕರು, ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ, ಮೈಸೂರು; ಹಾಗೂ ನಮ್ಮ ಕಾಲೇಜಿನ ಹಳೆ ವಿದ್ಯಾರ್ಥಿ ಡಾ. ಮನೋಜ್ ಕುಟ್ಟೇರಿ, ವೈದ್ಯಕೀಯ ನಿರ್ದೇಶಕರು ಮತ್ತು CEO, ಆತ್ಮನಾಥನ್ ವೆಲ್‌ನೆಸ್ ಸೆಂಟರ್, ಪುಣೆ ಇವರುಗಳು ಉಪಸ್ಥಿತರಿದ್ದರು. ಇವರು ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನದ ವ್ಯಾಪಕ ಅವಕಾಶಗಳ ಕುರಿತು ಹಾಗೂ ತಮ್ಮ ವೃತ್ತಿಜೀವನದ ಅನುಭವಗಳನ್ನು ಹಂಚಿಕೊಂಡರು.


ಡಾ. ಬಿಂದು, ಡೀನ್, ಅವರು ಸಂಸ್ಥೆಯ ಬಗೆಗಿನ ಸವಿಸ್ತಾರ ಮಾಹಿತಿ, ಕಾಲೇಜಿನ ಬೋಧಕ ವರ್ಗ ಮತ್ತು ಸಿಬ್ಬಂದಿ ವರ್ಗದವರನ್ನು ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಪರಿಚಯಿಸಿದರು.

ಕಾರ್ಯಕ್ರಮದಲ್ಲಿ ಶ್ರೀ ಧ.ಮ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿಗಳಾದ ಡಾ. ಶಿವಪ್ರಸಾದ ಶೆಟ್ಟಿ ಉಪಸ್ಥಿತರಿದ್ದರು. ಡಾ. ಗೀತಾ ಬಿ. ಶೆಟ್ಟಿ, ಪ್ರಾಧ್ಯಾಪಕರು ಮತ್ತು ನ್ಯೂಟ್ರಿಷನ್ ವಿಭಾಗದ ಡೀನ್ ಧನ್ಯವಾದವಿತ್ತರು.

Related posts

ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೆ

Suddi Udaya

ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದ ಪ್ರಾಂಶುಪಾಲರು ಡಾ. ಪ್ರಶಾಂತ್ ಶೆಟ್ಟಿ ರವರಿಗೆ ‘ಆಯುಷ್ ಭೂಷಣ’ ಪುರಸ್ಕಾರ

Suddi Udaya

ದ.ಕ. ಜಿಲ್ಲಾ ನೂತನ ಎಸ್ಪಿಯಾಗಿ ಡಾ. ಅರುಣ್ ಕೆ. ಅಧಿಕಾರ ಸ್ವೀಕಾರ

Suddi Udaya

ಧರ್ಮಸ್ಥಳ: ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಅಡಿಗಾಸ್ ಯಾತ್ರಾದ ಪ್ರವಾಸ ದರ್ಶನದ ಮಾಹಿತಿ ಕೈಪಿಡಿಯ ಅನಾವರಣ

Suddi Udaya

ತಣ್ಣೀರುಪಂತ : ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ : ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ತೆಕ್ಕಾರು : ಸರಳಿಕಟ್ಟೆ ನದಿ ಬಳಿ ಕಾಡಾನೆ ಪ್ರತ್ಯಕ್ಷ

Suddi Udaya
error: Content is protected !!