ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನೆರಿಯ: ಮನೆಗೆ ಆಕಸ್ಮಿಕ ಬೆಂಕಿ ತಗುಲಿ ಮನೆ ಸಂಪೂರ್ಣ ಹಾನಿ

ಬೆಳ್ತಂಗಡಿ : ನೆರಿಯ ಗ್ರಾಮದ ಕಡ್ಡಿಬಾಗಿಲು ನಿವಾಸಿ ಹರೀಶ್.ವಿ ಎಂಬವರ ಮನೆಯಲ್ಲಿ ಬೆಂಕಿ ಅನಾಹುತ ಉಂಟಾಗಿ ಮನೆ ಸಂಪೂರ್ಣ ಸುಟ್ಟು ಹೋದ ಘಟನೆ ಅ.6 ರಂದು ರಾತ್ರಿ ನಡೆದಿದೆ.

ಘಟನೆಯ ವೇಳೆ ಮನೆಯಲ್ಲಿ ಯಾರು ಇಲ್ಲದ ಕಾರಣ ಯಾವುದೇ ಸಾವು ನೋವು ಉಂಟಾಗಿಲ್ಲ. ಹರೀಶ್ ಅವರು ಭಜನೆ ಗುರುಗಳಾಗಿದ್ದು ಅವರು ತಮ್ಮ ತಂಡದೊಂದಿಗೆ ಬೇರೆಡೆ ತೆರಳಿದ್ದರು. ಪತ್ನಿ ಹಾಗೂ ಒಬ್ಬಳು ಮಗಳು ತವರು ಮನೆಗೆ ಹೋಗಿದ್ದರು. ಇನ್ನಿಬ್ಬರು ಮಕ್ಕಳು ಮನೆಯಲ್ಲಿ ಇದ್ದರು. ಅವರು ಸಂಜೆಯ ವೇಳೆ ಪಕ್ಕದ ಮನೆಗೆ ಹೋಗಿದ್ದರು. ಬಳಿಕ ರಾತ್ರಿ ಬೆಂಕಿ ಅನಾಹುತ ಉಂಟಾಗಿದೆ ಎಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.

ಮನೆಗೆ ಬೆಂಕಿ ಹೇಗೆ ತಗುಲಿದೆ ಎಂಬುದು ಇನ್ನಷ್ಟೆ ತಿಳಿದು ಬರಬೇಕಾಗಿದೆ. ಬೆಂಕಿಯ ಕೆನ್ನಲಿಗೆ ಮನೆಯಲ್ಲಿದ್ದ ವಸ್ತುಗಳೆಲ್ಲ ಸಂಪೂರ್ಣ ಆಹುತಿಯಾಗಿರುವುದಾಗಿ ಸ್ಥಳೀಯರು ಮಾಹಿತಿ ನೀಡಿದ್ದಾರೆ.

Related posts

ಶಿಶಿಲ: ಬರ್ಗುಳದಲ್ಲಿ ಮರ ಬಿದ್ದು ಎರಡು ವಿದ್ಯುತ್ ಕಂಬಗಳು ಧರಾಶಾಹಿ: ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ತೆರವು ಕಾರ್ಯ

Suddi Udaya

ಬೆಳಾಲಿನಲ್ಲಿ ನಿವೃತ್ತ ಶಿಕ್ಷಕನ ಕೊಲೆ

Suddi Udaya

ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಶ್ರೀಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವದ ಅಂಗವಾಗಿ ಡಿ.8 (ನಾಳೆ) 11ನೇ ವರ್ಷದ ಪಾದಯಾತ್ರೆ: ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಮಧ್ಯಾಹ್ನ 3 ಕ್ಕೆ ಪಾದಯಾತ್ರೆಗೆ ಚಾಲನೆ

Suddi Udaya

ಬಂದಾರು: ಬಟ್ಲಡ್ಕ ಜುಮಾ ಮಸೀದಿಯ ಜಮಾಅತ್ ಮಹಾಸಭೆ: ನೂತನ ಸಮಿತಿ ರಚನೆ

Suddi Udaya

ಮದ್ದಡ್ಕ ಮೊದಲೆಯಲ್ಲಿ ರಸ್ತೆ ಸಂಪರ್ಕ ಕಡಿತ ನಾಗರಿಕರ ಆಕ್ರೋಶ

Suddi Udaya
error: Content is protected !!