July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಅಶಕ್ತ ಕುಟುಂಬಗಳಿಗೆ ರೂ.46 ಸಾವಿರ ಆರ್ಥಿಕ ನರೆವು

ಬಳಂಜ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ಒಟ್ಟುಗೂಡಿಸಿ ಎರಡು ಕುಟುಂಬಗಳಿಗೆ ರೂ 46 ಸಾವಿರ ಆರ್ಥಿಕ ನೆರವು ನೀಡಲಾಯಿತು.

ಬಳಂಜ ಗ್ರಾಮದ ಬಿರ್ಮನೊಟ್ಟು ನಿವಾಸಿ ಶಿವಾನಂದ ಅವರು ಬ್ರೈನ್ ಎಮರೇಜ್ ನಿಂದ ನಿಧನರಾಗಿದ್ದು ಆರ್ಥಿಕವಾಗಿ ತೀರಾ ಹಿಂದುಳಿದಿದ್ದು ಅವರ ಕುಟುಂಬಕ್ಕೆ ರೂ 30 ಸಾವಿರ ಹಾಗೂ ಕಾಪಿನಡ್ಕ ಗಾಂಧೀನಗರ ನಿವಾಸಿ ಮೀನಾಕ್ಷಿಯವರು ಕ್ಯಾನ್ಸರ್ ನಿಂದ ಬಳಲುತ್ತಿದ್ದು ಅವರ ವೈದ್ಯಕೀಯ ಚಿಕಿತ್ಸೆಗೆ ರೂ 16 ಸಾವಿರವನ್ನು ಸಂಘದ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಸಂಘದ ಪದಾಧಿಕಾರಿಗಳಾದ ಪ್ರವೀಣ್ ಕುಮಾರ್ ಹೆಚ್ ಎಸ್,ಸಂತೋಷ್ ಕುಮಾರ್ ಕಾಪಿನಡ್ಕ, ರಂಜಿತ್ ಪೂಜಾರಿ ಮಜಲಡ್ಡ, ಕೃಷ್ಣಪ್ಪ ಪೂಜಾರಿ ಬೊಂಟ್ರೋಟ್ಟು, ಶರತ್ ಅಂಚನ್ ಬಾಕ್ಯರಡ್ಡ,ಜಗದೀಶ್ ಪೂಜಾರಿ ಬಳ್ಳಿದಡ್ಡ,ಯೋಗೀಶ್ ಪೂಜಾರಿ ಕೊಂಗುಳ,ಪ್ರವೀಣ್ ಡಿ ಕೋಟ್ಯಾನ್, ಸಂಪತ್ ಪಿ ಕೋಟ್ಯಾನ್, ಮುತ್ತಪ್ಪ ಪೂಜಾರಿ ಗಾಂಧಿನಗರ ಉಪಸ್ಥಿತರಿದ್ದರು.

Related posts

ಕೊಯಮತ್ತೂರಿನ ರಾಷ್ಟ್ರೀಯ ಹೊರೆಕಾ ಸಮ್ಮೇಳನದಲ್ಲಿ ನಿಡ್ಲೆಯ ಅಗ್ರಿಲೀಫ್ ಸಂಸ್ಥೆ: ಸಮ್ಮೇಳನದಲ್ಲಿ ಅಗ್ರಿಲೀಫ್ ಸಂಸ್ಥೆಯ ಜೈವಿಕ ವಿಘಟನೀಯ ಮತ್ತು ಅಡಿಕೆ ಹಾಳೆತಟ್ಟೆಗಳ ಪ್ರದರ್ಶನ

Suddi Udaya

ಪಟ್ರಮೆ: ಪಾದೆಯಲ್ಲಿ ಮನೆಯ ಹಿಂಭಾಗ ಸಂಪೂರ್ಣ ಹಾನಿಯಾಗಿದ್ದು ಬಿಜೆಪಿ ಬೆಳ್ತಂಗಡಿ ಮಂಡಲ ವತಿಯಿಂದ ಭೇಟಿ, ಪರಿಶೀಲನೆ

Suddi Udaya

ಕನ್ಯಾಡಿ || : ಹಿಂದೂ ಧಾರ್ಮಿಕ ಸೇವಾ ಸಮಿತಿ ವತಿಯಿಂದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಮಿತಿ ರಚನೆ

Suddi Udaya

ಶಿರ್ಲಾಲು : ಮಜಲಪಲ್ಕೆ ನಿವಾಸಿ ಹರಿಶ್ಚಂದ್ರ ಪೂಜಾರಿ ರವರಿಗೆ ಬಿಜೆಪಿ ಗ್ರಾಮ ಸಮಿತಿಯ ಸದಸ್ಯರಿಂದ ಆರ್ಥಿಕ ನೆರವು

Suddi Udaya

ಮಡಂತ್ಯಾರು ಮೆಸ್ಕಾಂ ಕಛೇರಿಯಲ್ಲಿ ಕಂದಾಯ ಅದಾಲತ್‌ ಕಾರ್ಯಕ್ರಮ: ವಿದ್ಯುತ್ ಪರಿವರ್ತಕದ ಬೇಡಿಕೆಗೆ ಮನವಿ

Suddi Udaya

ಬೆಳ್ತಂಗಡಿ ಗ್ರಾಹಕರ ವಿವಿಧೋದ್ದೇಶ ಸಹಕಾರ ಸಂಘದ ವಾರ್ಷಿಕ ಮಹಾಸಭೆ:

Suddi Udaya
error: Content is protected !!