25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೈಲಂಗಡಿ ಶ್ರೀ ಸೋಮನಾಥೇಶ್ವರ ಭಜನಾ ತಂಡದಿಂದ ಧಾರ್ಮಿಕ ಕ್ಷೇತ್ರಗಳ ಪ್ರವಾಸ

ತೋಟತ್ತಾಡಿ :ಶ್ರೀ ಸೋಮನಾಥೇಶ್ವರ ಭಜನಾ ತಂಡ ಬೈಲಂಗಡಿ, ತೋಟತ್ತಾಡಿ ಇದರ ವತಿಯಿಂದ ಮೂರನೇ ಬಾರಿ ಧಾರ್ಮಿಕ ಕ್ಷೇತ್ರಗಳ ಪ್ರವಾಸವನ್ನು ಹಮ್ಮಿಕೊಳ್ಳಳಾಯಿತು. ಹಾಸನ ಜಿಲ್ಲೆಯ ಸಖರಾಯನ ಪಟ್ಟಣ ಅಯ್ಯನಕೆರೆ ವೀಕ್ಷಿಸಿ, ಹಳೆಬೀಡು ಹೊಯ್ಸಳೇಶ್ವರ ದೇವಸ್ಥಾನ , ಹೇಮಾವತಿ ಡ್ಯಾಮ್, ನಂತರ ಬೇಲೂರು ಚೆನ್ನಕೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರವಾಸ ಸಂಪನ್ನಗೊಂಡಿತು.

ಪ್ರವಾಸದಲ್ಲಿ ಭಜನಾ ತಂಡದ ಸದಸ್ಯರು, ಬೈಲಂಗಡಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ದಿವಾಕರ ಪೂಜಾರಿ ಕಳೆಂಜೊಟ್ಟು, ಸದಸ್ಯರುಗಳಾದ ಸನತ್ ಕುಮಾರ್ ಮೂರ್ಜೆ, ದಿನೇಶ್ ನಾಯ್ಕ್ ಕೋಟೆ, ವಿಜಯ ಗೌಡ ಅಗರಿ, ಶ್ರೀಮತಿ ಚಂದ್ರಾವತಿ ಗೌಡ ಪರಾರಿ ಭಜನಾ ಮಂಡಳಿ ಅಧ್ಯಕ್ಷ ಕುಶಾಲಪ್ಪ ಗೌಡ ಅಗರಿ, ಉಪಾಧ್ಯಕ್ಷ ಶ್ರೀನಿವಾಸ ಗೌಡ ಕಲ್ಲರಿಗೆ, ಪ್ರವೀಣ್ ಗೌಡ ಬಾರೆ, ಜಾತ್ರೋತ್ಸವ ಸಮಿತಿಯ ಕಾರ್ಯದರ್ಶಿ ಶಶಿಧರ ಗೌಡ ಪಿತ್ತಿಲು, ಉಪಾಧ್ಯಕ್ಷ ಜಯಂತ ಗೌಡ ಪರಾರಿ, ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ಅಧ್ಯಕ್ಷೆ ಶ್ರೀಮತಿ ಶೋಭಾ ಗೌಡ ಬಳ್ಳಿ, ಜತೆ ಕಾರ್ಯದರ್ಶಿ ಶ್ರೀಮತಿ ದಿವ್ಯ ಗೌಡ ಅಗರಿ ಸದಸ್ಯರುಗಳಾದ ಶ್ರೀಮತಿ ಶೋಭಾ ಬರಮೇಲು, ಶ್ರೀಮತಿ ಪ್ರೇಮ ಬರಮೇಲು ಮತ್ತು ಭಜನಾ ತಂಡದ ಸದಸ್ಯರ ಹೆತ್ತವರು ಭಾಗವಹಿಸಿದರು.

Related posts

ತೆಕ್ಕಾರು ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಿಂದ ಸಾಧನಾ ಪ್ರಶಸ್ತಿ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಬಂಡೆಕಲ್ಲಿಗೆ ಡಿಕ್ಕಿಯೊಡೆದ ಕಾರು

Suddi Udaya

ನಾರಾವಿ: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು

Suddi Udaya

ನಾಲ್ಕೂರು: ರಸ್ತೆ ಬದಿಯ ಕಳೆಗಿಡಗಂಟಿಗಳನ್ನು ತೆರವುಗೊಳಿಸಿ ಮಾದರಿಯಾದ ಜಗದೀಶ್ ಬಳ್ಳಿದಡ್ಡ

Suddi Udaya

ಚಿನ್ನಯ್ಯನಿಗೆ ಸೂಕ್ತ ಪೊಲೀಸ್ ರಕ್ಷಣೆ ನೀಡುವಂತೆ ಸಿ.ಎಂ ಮತ್ತು ಡಿಜಿಪಿಗೆ ಮನವಿ ನೀಡಿದ ಜಯಂತ್ ಟಿ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವರಿಗೆ ಸಹಸ್ರ ಸೀಯಾಳಾಭಿಷೇಕ

Suddi Udaya
error: Content is protected !!