March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಕ್ರೈಸ್ಟ್ ಅಕಾಡೆಮಿಯಲ್ಲಿ ಆರೋಗ್ಯ ತಪಾಸಣೆ ಮತ್ತು ಪ್ರಥಮ ಚಿಕಿತ್ಸಾ ತರಬೇತಿ ಶಿಬಿರ

ಬೆಳ್ತಂಗಡಿ: ಮುಂಡಾಜೆಯ ಕ್ರೈಸ್ಟ್ ಅಕಾಡೆಮಿಯಲ್ಲಿ ಆರೋಗ್ಯ ತಪಾಸಣೆ ಮತ್ತು ಪ್ರಥಮ ಚಿಕಿತ್ಸಾ ತರಬೇತಿ ಶಿಬಿರ ಅ.5 ರಂದು ಜರಗಿತು.


ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಪ್ರಕಾಶ್ ಪ್ರಭು ಶಿಬಿರ ಉದ್ಘಾಟಿಸಿದರು.
ಕ್ರೈಸ್ಟ್ ಅಕಾಡೆಮಿಯ ಪ್ರಿನ್ಸಿಪಾಲ್ ಫಾ. ಜಾರ್ಜ್ ಸಿ.ಎಂ.ಐ., ಮುಂಡಾಜೆ ರೋಟರಿ ಸಮುದಾಯ ದಳದ ಅಧ್ಯಕ್ಷ ಪಿ.ಸಿ. ಸೆಬಾಸ್ಟಿಯನ್, ಕಾರ್ಯದರ್ಶಿ ರಾಕೇಶ್, ಬೆನಕ ಆಸ್ಪತ್ರೆಯ ಜನರಲ್ ಮ್ಯಾನೇಜರ್ ದೇವಸ್ಯ, ಪಿಆರ್ ಒ ಎಸ್.ಜಿ.ಭಟ್, ರೋಟರಿ ಕ್ಲಬ್ ಬೆಳ್ತಂಗಡಿ ಮಾಜಿ ಅಧ್ಯಕ್ಷ ಅನಂತ ಭಟ್ ಮಚ್ಚಿಮಲೆ, ಮೇ.ಜ. ಎಂ.ವಿ.ಭಟ್, ವೆಂಕಟೇಶ್ವರ ಭಟ್ ಕಜೆ ಮತ್ತಿತರರು ಉಪಸ್ಥಿತರಿದ್ದರು.

ಉಚಿತ ಮಧುಮೇಹ ತಪಾಸಣೆ, ರಕ್ತದೊತ್ತಡ, ಇಸಿಜಿ, ಸ್ತ್ರೀ ರೋಗ ಮತ್ತು ಪ್ರಸೂತಿ ಪರೀಕ್ಷೆ, ಮಕ್ಕಳ ಆರೋಗ್ಯ ತಪಾಸಣೆ ಸೇರಿದಂತೆ ಸಾಮಾನ್ಯ ಆರೋಗ್ಯ ತಪಾಸಣೆ ನಡೆಯಿತು. ಸುಮಾರು 110 ಮಂದಿ ಶಿಬಿರದಲ್ಲಿ ಪಾಲ್ಗೊಂಡರು.
ರೋಟರಿ ಸಮುದಾಯದ ಮುಂಡಾಜೆ ನೇತೃತ್ವದಲ್ಲಿ ಕ್ರೈಸ್ಟ್ ಅಕಾಡೆಮಿ ಮುಂಡಾಜೆ ಸಹಭಾಗಿತ್ವದಲ್ಲಿ ಉಜಿರೆ ಬೆನಕ ಚಾರಿಟೇಬಲ್ ಟ್ರಸ್ಟ್ ಹಾಗೂ ಬೆನಕ ಹೆಲ್ತ್ ಸೆಂಟರ್ ವತಿಯಿಂದ ಕಾರ್ಯಕ್ರಮ ನಡೆಯಿತು.

Related posts

ಪಡಂಗಡಿ: ಮುನಿಶ್ರೀ 108 ದಿವ್ಯಸಾಗರ ಮಹಾರಾಜರ ಭವ್ಯ ಚಾತುರ್ಮಾಸ

Suddi Udaya

ಸೋಮಂತ್ತಡ್ಕದಲ್ಲಿ ಶ್ರೀಮತಿ ಪುಷ್ಪ ಮತ್ತು ಪುರುಷೋತ್ತಮ ಆಚಾರ್ಯ ಮಾಲಕತ್ವದ ಶ್ರೀ ದುರ್ಗಾ ಎಲೆಕ್ಟ್ರಾನಿಕ್ಸ್-ಫರ್ನಿಚರ್ಸ್ ಪ್ರಾರಂಭೋತ್ಸವ, ಅದೃಷ್ಟ ಯೋಜನೆ ಪ್ರಾರಂಭ

Suddi Udaya

ಉಜರೆ: ರತ್ನಮ್ಮ ನಾಯಕ್ ನಿಧನ

Suddi Udaya

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಸಹಾಯಕ ಇಂಜಿನಿಯರ್ ಗಂಗಾಧರ ಬಳಂಜರವರಿಗೆ ಸೇವಾ ನಿವೃತ್ತಿ

Suddi Udaya

ತೆಕ್ಕಾರು ಸರಳಿಕಟ್ಟೆ ಎಸ್.ವೈ.ಎಸ್. ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಭೀಕರ ಮಳೆಗೆ: ನಾವೂರು ನಿoರ್ದಿ ಬಳಿ ಗುಡ್ಡ ಕುಸಿತ

Suddi Udaya
error: Content is protected !!