25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಂಡಾಜೆ: ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ

ಮುಂಡಾಜೆ: “ವಿದ್ಯಾರ್ಥಿಗಳು ಸಮಾಜಮುಖಿ ಕೆಲಸಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು. ಪರೋಪಕಾರ ಮನೋಭಾವವನ್ನು ಬೆಳೆಸಿಕೊಂಡು ಸತ್ಕಾರ್ಯವನ್ನು ಮಾಡಿದಾಗ ಜೀವನದಲ್ಲಿ ಯಶಸ್ಸನ್ನು ಗಳಿಸಲು ಸಾಧ್ಯ. ಎನ್ಎಸ್ಎಸ್ ವಿದ್ಯಾರ್ಥಿಗಳಿಗೆ ಜೀವನ ಪಾಠವನ್ನು ತಿಳಿಸಿ ಕೊಡುತ್ತದೆ” ಎಂದು ಜೋಸ್ ಇ. ಎಂ. ಕಿಲ್ಲೂರು, ನಿವೃತ್ತ ಪ್ರಾಂಶುಪಾಲರು, ಸರಕಾರಿ ಪಾಲಿಟೆಕ್ನಿಕ್ ಕಾಲೇಜು, ಬಳ್ಳಾರಿ ಇವರು ಅಭಿಪ್ರಾಯ ಪಟ್ಟರು.

ಇವರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಿತ್ತಬಾಗಿಲು ಇಲ್ಲಿ ನಡೆದ ಮುಂಡಾಜೆ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಭಾಷಣ ಮಾಡಿದರು.


ಶಿಬಿರಾಧಿಕಾರಿ ಶ್ರೀಮತಿ ನಮಿತಾ ಕೆ ಆರ್ ಶಿಬಿರದ ವರದಿಯನ್ನು ವಾಚಿಸಿದರು. ಊರವರ ಪರವಾಗಿ ಶಿಬಿರ ನಿರ್ವಹಣಾ ಸಮಿತಿಯ ಅಧ್ಯಕ್ಷ ಹೈದರಾಲಿ ಅನಿಸಿಕೆಯನ್ನು ವ್ಯಕ್ತಪಡಿಸಿದರು. ಶಿಬಿರಾರ್ಥಿಗಳಾದ ಕುಶಾಲಪ್ಪ, ಜನಾರ್ಧನ ಮತ್ತು ಕುಮಾರಿ ಅಮೃತ ತಮ್ಮ ಅನುಭವಗಳನ್ನು ಹಂಚಿಕೊಂಡರು. ವಿಶೇಷ ಶಿಬಿರದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರವನ್ನು ಮತ್ತು ಸ್ಮರಣಕೆ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀಮತಿ ಗೀತಾ, ಪ್ರಾಂಶುಪಾಲರು ಮುಂಡಾಜೆ ಪದವಿ ಪೂರ್ವ ಕಾಲೇಜು ಇವರು ವಹಿಸಿದ್ದರು. ಮಿತ್ತಬಾಗಿಲು ಗ್ರಾಮ ಪಂಚಾಯಿತಿ ಅಧ್ಯಕ್ಷ ವಿನಯಚಂದ್ರ ಸೇನರೆಬೆಟ್ಟು, ಶಿಬಿರಾರ್ಥಿಗಳಿಗೆ ಶುಭ ಹಾರೈಸಿದರು.

ವೇದಿಕೆಯಲ್ಲಿ ಮೋಹನ್ ಬಂಗೇರ, ಪಂಚಾಯತಿ ಅಭಿವೃದ್ಧಿ ಅಧಿಕಾರಿ, ಮಿತ್ತಬಾಗಿಲು, ಶ್ರೀಮತಿ ಇಂದಿರಾ ಕುಮಾರಿ, ಮುಖ್ಯ ಶಿಕ್ಷಕರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮಿತ್ತಬಾಗಿಲು, ಕಬಿರ್, ಅಧ್ಯಕ್ಷರು ಶಾಲಾಭಿವೃದ್ಧಿ ಸಮಿತಿ, ಮಿತ್ತಬಾಗಿಲು, ಹೈದರಾಲಿ, ಅಧ್ಯಕ್ಷರು ಶಿಬಿರ ನಿರ್ವಹಣಾ ಸಮಿತಿ, ಅಬ್ದುಲ್ ಅಜೀಜ್, ಸಂಶುದ್ದೀನ್, ಶಿಬಿರಾಧಿಕಾರಿ ಶ್ರೀಮತಿ ನಮಿತಾ ಕೆ ಆರ್ ಉಪಸ್ಥಿತರಿದ್ದರು.

ಉಪನ್ಯಾಸಕಿ ಶ್ರೀಮತಿ ವಿದ್ಯಾ ರಾವ್ ಕಾರ್ಯಕ್ರಮದ ನಿರೂಪಣೆಯನ್ನು ಮಾಡಿದರು. ಪುರುಷೋತ್ತಮ ಶೆಟ್ಟಿ ಸ್ವಾಗತಿಸಿ, ಪದ್ಮನಾಭ ಬಿ ಕೆ ವಂದಿಸಿದರು. ಏಳು ದಿನಗಳ ಕಾಲ ನಡೆದ ವಾರ್ಷಿಕ ವಿಶೇಷ ಶಿಬಿರದಲ್ಲಿ ಸ್ವಚ್ಛತಾ ಆಂದೋಲನ, ನಶಾ ಮುಕ್ತ ಅಭಿಯಾನ, ತೆಂಗಿನ ಗಿಡಗಳ ನಾಟಿ, ರಸ್ತೆ ರಿಪೇರಿ ಮುಂತಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.

Related posts

ಸುಹಾಸ್ ಶೆಟ್ಟಿ ಹತ್ಯೆ ನಡೆಸಿದ ಜಿಹಾದಿಗಳನ್ನು ಹೆಡೆಮುರಿ ಕಟ್ಟಲು ತನಿಖೆ ರಾಷ್ಟ್ರೀಯ ತನಿಖಾದಳಕ್ಕೆ- ಹರೀಶ್ ಪೂಂಜ

Suddi Udaya

ಜ.16: ಬೆಳ್ತಂಗಡಿ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಅನುಗ್ರಹ ಪದವಿಪೂರ್ವ ಕಾಲೇಜಿಗೆ ಶೇ.94 ಫಲಿತಾಂಶ

Suddi Udaya

ನೆಲ್ಯಾಡಿ-ಕೌಕ್ರಾಡಿ ವರ್ತಕ ಹಾಗೂ ಕೈಗಾರಿಕಾ ಸಂಘದ ವತಿಯಿಂದ ಸೌತಡ್ಕ ಸೇವಾಧಾಮ ಪುನಶ್ವೇತನ ಕೇಂದ್ರಕ್ಕೆ ಹಣ್ಣು ಹಂಪಲು ವಿತರಣೆ

Suddi Udaya

ಸರಕಾರಿ ಪದವಿಪೂರ್ವ ಕಾಲೇಜು, ಕೊಯ್ಯೂರು :ವಾರ್ಷಿಕ ಪ್ರತಿಭಾ ಪುರಸ್ಕಾರ ಸಮಾರಂಭ

Suddi Udaya

ಬೆಳ್ತಂಗಡಿ ಸರಕಾರಿ ನೌಕರರ ಸಂಘದ ಕ್ಯಾಲೆಂಡರ್ ಬಿಡುಗಡೆ

Suddi Udaya
error: Content is protected !!