July 23, 2026
ಅಭಿನಂದನೆತಾಲೂಕು ಸುದ್ದಿವರದಿ

ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ ಗಫೂರ್ ಅವರನ್ನು ಅಭಿನಂದಿಸಿದ ಜಿಲ್ಲಾ ಅಲ್ಪ ಸಂಖ್ಯಾತ ಘಟಕದ ಉಪಾಧ್ಯಕ್ಷ ಯು.ಕೆ ಮುಹಮ್ಮದ್ ಹನೀಫ್

ಬೆಳ್ತಂಗಡಿ; ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾಗಿ ಎಂ.ಎ. ಗಫೂರ್ ಅವರು ಸೋಮವಾರ ಕುದ್ಮುಲ್ ರಂಗರಾವ್ ಮಿನಿ ಪುರಭವನದಲ್ಲಿ ಅಧಿಕಾರ ಸ್ವೀಕರಿಸಿದರು.

ಈ ಸಂದರ್ಭ ದ.ಕ ಜಿಲ್ಲಾ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷ, ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಇದರ ಸಂಕ್ರೀಯ ಸಂಘಟಕ ಹಾಗೂ ದ.ಕ ವಕ್ಫ್ ಸಲಹಾ ಸಮಿತಿ ಮಾಜಿ ಸದಸ್ಯ ಯು.ಕೆ ಮುಹಮ್ಮದ್ ಹನೀಫ್ ಅವರು ನೂತ‌ನ ಅಧ್ಯಕ್ಷರಿಗೆ ಶಾಲು ಹೊದಿಸಿ ಹೂ ಗುಚ್ಛ ನೀಡಿ ಶುಭ ಕೋರಿದರು.ಕರಾವಳಿ ಅಭಿವೃದ್ಧಿ ಮಂಡಳಿಯ ಕಾರ್ಯದರ್ಶಿ ಪ್ರದೀಪ್ ಡಿಸೋಜಾ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.

ಪದಗ್ರಹಣ ಸಮಾರಂಭದಲ್ಲಿ ಪದಗ್ರಹಣ ಸಮಾರಂಭದಲ್ಲಿ ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ, ರಮಾನಾಥ ರೈ, ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜಾ, ಮಂಜುನಾಥ ಭಂಡಾರಿ, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಮೂಡ ಅಧ್ಯಕ್ಷ ಸದಾಶಿವ ಉಳ್ಳಾಲ್, ಮಾಜಿ ಶಾಸಕ ಜೆ.ಆ‌ರ್. ಲೋಬೋ, ಮುಖಂಡರಾದ ಜಯಪ್ರಕಾಶ್ ಹೆಗ್ಡೆ, ಪದ್ಮರಾಜ್, ಚೇತನ್ ಬೆಂಗ್ರೆ, ಶಾಲೆಟ್ ಪಿಂಟೋ, ಲಾವಣ್ಯ ಬಳ್ಳಾಲ್, ಪ್ರತಿಭಾ ಕುಳಾಯಿ, ಟಿ.ಎಂ. ಶಹೀದ್, ವಿಶ್ವಾಸ್‌ಕುಮಾ‌ರ್ ದಾಸ್, ಅಶೋಕ್ ಕೊಡವೂರು, ಮಂಜುನಾಥ್, ಪ್ರಸಾದ್ ಕಾಂಚನ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Related posts

ಪ್ರತಿಭಾ ಕಾರಂಜಿ ಸ್ಪರ್ಧೆ: ಕುಂಭಶ್ರೀ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಸಾಮೂಹಿಕ ದೀಪಾವಳಿ ಆಚರಣೆ: ಸರ್ವಧರ್ಮೀಯರು ಆಚರಿಸುವ ವಿಶ್ವವಿಖ್ಯಾತ ಹಬ್ಬ ದೀಪಾವಳಿ: ಪ್ರಕಾಶ ಶೆಟ್ಟಿ ನೊಚ್ಚ

Suddi Udaya

ಶ್ರೀ ಗುರುದೇವ ಮಠದ ಟ್ರಸ್ಟಿಗಳಾಗಿ ಕೆ. ಹರೀಶ್ ಕುಮಾರ್, ಸುಜಿತ ವಿ. ಬಂಗೇರ ಹಾಗೂ ನೂತನ ರಿಲಿಜಿಯಸ್ ಟ್ರಸ್ಟ್ ಗೆ 21 ಮಂದಿ ನೇಮಕ

Suddi Udaya

ಪಡುಮಲೆ ಪರವನ್ ಕುಟುಂಬಸ್ಥರ ವಾರ್ಷಿಕ ತಂಬಿಲ ಹಾಗೂ ಸನ್ಮಾನ

Suddi Udaya

ಎಸ್ ಡಿ ಎಮ್ ಬೆಳ್ತಂಗಡಿ ಶಾಲೆಗೆ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಸಂಘಟನಾ ಆಯುಕ್ತರ ಭೇಟಿ

Suddi Udaya

ಶಿಶಿಲ: ಗೌಡರ ಯಾನೆ ಒಕ್ಕಲಿಗ ಸೇವಾ ಸಂಘ ಗ್ರಾಮಸಮಿತಿ – ವಾರ್ಷಿಕ ಮಹಾಸಭೆ ಹಾಗೂ ಸತ್ಯನಾರಾಯಣ ಪೂಜೆ

Suddi Udaya
error: Content is protected !!