July 23, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನೆರಿಯ: ಮನೆಗೆ ಆಕಸ್ಮಿಕ ಬೆಂಕಿ ತಗುಲಿ ಮನೆ ಸಂಪೂರ್ಣ ಹಾನಿ

ಬೆಳ್ತಂಗಡಿ : ನೆರಿಯ ಗ್ರಾಮದ ಕಡ್ಡಿಬಾಗಿಲು ನಿವಾಸಿ ಹರೀಶ್.ವಿ ಎಂಬವರ ಮನೆಯಲ್ಲಿ ಬೆಂಕಿ ಅನಾಹುತ ಉಂಟಾಗಿ ಮನೆ ಸಂಪೂರ್ಣ ಸುಟ್ಟು ಹೋದ ಘಟನೆ ಅ.6 ರಂದು ರಾತ್ರಿ ನಡೆದಿದೆ.

ಘಟನೆಯ ವೇಳೆ ಮನೆಯಲ್ಲಿ ಯಾರು ಇಲ್ಲದ ಕಾರಣ ಯಾವುದೇ ಸಾವು ನೋವು ಉಂಟಾಗಿಲ್ಲ. ಹರೀಶ್ ಅವರು ಭಜನೆ ಗುರುಗಳಾಗಿದ್ದು ಅವರು ತಮ್ಮ ತಂಡದೊಂದಿಗೆ ಬೇರೆಡೆ ತೆರಳಿದ್ದರು. ಪತ್ನಿ ಹಾಗೂ ಒಬ್ಬಳು ಮಗಳು ತವರು ಮನೆಗೆ ಹೋಗಿದ್ದರು. ಇನ್ನಿಬ್ಬರು ಮಕ್ಕಳು ಮನೆಯಲ್ಲಿ ಇದ್ದರು. ಅವರು ಸಂಜೆಯ ವೇಳೆ ಪಕ್ಕದ ಮನೆಗೆ ಹೋಗಿದ್ದರು. ಬಳಿಕ ರಾತ್ರಿ ಬೆಂಕಿ ಅನಾಹುತ ಉಂಟಾಗಿದೆ ಎಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.

ಮನೆಗೆ ಬೆಂಕಿ ಹೇಗೆ ತಗುಲಿದೆ ಎಂಬುದು ಇನ್ನಷ್ಟೆ ತಿಳಿದು ಬರಬೇಕಾಗಿದೆ. ಬೆಂಕಿಯ ಕೆನ್ನಲಿಗೆ ಮನೆಯಲ್ಲಿದ್ದ ವಸ್ತುಗಳೆಲ್ಲ ಸಂಪೂರ್ಣ ಆಹುತಿಯಾಗಿರುವುದಾಗಿ ಸ್ಥಳೀಯರು ಮಾಹಿತಿ ನೀಡಿದ್ದಾರೆ.

Related posts

ಧರ್ಮಸ್ಥಳ ಕ್ಷೇತ್ರ ಹಾಗೂ ಡಾ.ಡಿ. ಹೆಗ್ಗಡೆಯವರ ಜತೆ ನಾವು ನಿಲ್ಲುತ್ತೇವೆ: ಮಾಜಿ ಸಚಿವ ಜನಾರ್ದನ ಪೂಜಾರಿ

Suddi Udaya

ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಚೇಂಬರ್ ನ ವತಿಯಿಂದ ಮಾನವ ಸಂಬಂಧ ತರಬೇತಿ ಕಾರ್ಯಕ್ರಮ

Suddi Udaya

ರಸ್ತೆಯಲ್ಲೇ ಹರಿದ ಮಳೆ ನೀರು: ಶಾಸಕ ಹರೀಶ್ ಪೂಂಜರಿಂದ ತುರ್ತು ಸ್ಪಂದನೆ , ಚರಂಡಿ ದುರಸ್ತಿ

Suddi Udaya

ಬೆಳ್ತಂಗಡಿ: ಶಾಸಕ ಹರೀಶ್ ಪೂಂಜರನ್ನು ಆಶೀರ್ವದಿಸಿದ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಜೀಗಳು

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ

Suddi Udaya

ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ರಾಣಿಜರಿ ಪರಿಸರದಲ್ಲಿ ಬೆಂಕಿ

Suddi Udaya
error: Content is protected !!