22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಕ್ರೈಸ್ಟ್ ಅಕಾಡೆಮಿಯಲ್ಲಿ ಆರೋಗ್ಯ ತಪಾಸಣೆ ಮತ್ತು ಪ್ರಥಮ ಚಿಕಿತ್ಸಾ ತರಬೇತಿ ಶಿಬಿರ

ಬೆಳ್ತಂಗಡಿ: ಮುಂಡಾಜೆಯ ಕ್ರೈಸ್ಟ್ ಅಕಾಡೆಮಿಯಲ್ಲಿ ಆರೋಗ್ಯ ತಪಾಸಣೆ ಮತ್ತು ಪ್ರಥಮ ಚಿಕಿತ್ಸಾ ತರಬೇತಿ ಶಿಬಿರ ಅ.5 ರಂದು ಜರಗಿತು.


ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಪ್ರಕಾಶ್ ಪ್ರಭು ಶಿಬಿರ ಉದ್ಘಾಟಿಸಿದರು.
ಕ್ರೈಸ್ಟ್ ಅಕಾಡೆಮಿಯ ಪ್ರಿನ್ಸಿಪಾಲ್ ಫಾ. ಜಾರ್ಜ್ ಸಿ.ಎಂ.ಐ., ಮುಂಡಾಜೆ ರೋಟರಿ ಸಮುದಾಯ ದಳದ ಅಧ್ಯಕ್ಷ ಪಿ.ಸಿ. ಸೆಬಾಸ್ಟಿಯನ್, ಕಾರ್ಯದರ್ಶಿ ರಾಕೇಶ್, ಬೆನಕ ಆಸ್ಪತ್ರೆಯ ಜನರಲ್ ಮ್ಯಾನೇಜರ್ ದೇವಸ್ಯ, ಪಿಆರ್ ಒ ಎಸ್.ಜಿ.ಭಟ್, ರೋಟರಿ ಕ್ಲಬ್ ಬೆಳ್ತಂಗಡಿ ಮಾಜಿ ಅಧ್ಯಕ್ಷ ಅನಂತ ಭಟ್ ಮಚ್ಚಿಮಲೆ, ಮೇ.ಜ. ಎಂ.ವಿ.ಭಟ್, ವೆಂಕಟೇಶ್ವರ ಭಟ್ ಕಜೆ ಮತ್ತಿತರರು ಉಪಸ್ಥಿತರಿದ್ದರು.

ಉಚಿತ ಮಧುಮೇಹ ತಪಾಸಣೆ, ರಕ್ತದೊತ್ತಡ, ಇಸಿಜಿ, ಸ್ತ್ರೀ ರೋಗ ಮತ್ತು ಪ್ರಸೂತಿ ಪರೀಕ್ಷೆ, ಮಕ್ಕಳ ಆರೋಗ್ಯ ತಪಾಸಣೆ ಸೇರಿದಂತೆ ಸಾಮಾನ್ಯ ಆರೋಗ್ಯ ತಪಾಸಣೆ ನಡೆಯಿತು. ಸುಮಾರು 110 ಮಂದಿ ಶಿಬಿರದಲ್ಲಿ ಪಾಲ್ಗೊಂಡರು.
ರೋಟರಿ ಸಮುದಾಯದ ಮುಂಡಾಜೆ ನೇತೃತ್ವದಲ್ಲಿ ಕ್ರೈಸ್ಟ್ ಅಕಾಡೆಮಿ ಮುಂಡಾಜೆ ಸಹಭಾಗಿತ್ವದಲ್ಲಿ ಉಜಿರೆ ಬೆನಕ ಚಾರಿಟೇಬಲ್ ಟ್ರಸ್ಟ್ ಹಾಗೂ ಬೆನಕ ಹೆಲ್ತ್ ಸೆಂಟರ್ ವತಿಯಿಂದ ಕಾರ್ಯಕ್ರಮ ನಡೆಯಿತು.

Related posts

ಮುಂಡಾಜೆ : ನಿಡಿಗಲ್ ನಿವಾಸಿ, ಗಣೇಶ ಪ್ರಭು ಹೃದಯಾಘಾತದಿಂದ ನಿಧನ

Suddi Udaya

ಸಾಮಾಜಿಕ ಜಾಲತಾಣಗಳ ಮುಖಾಂತರ ಸುಳ್ಳು ಸುದ್ದಿಗಳನ್ನು ಹರಡುತ್ತಿರುವವರ ವಿರುದ್ಧ ಕಾನೂನು ಕ್ರಮಕ್ಕೆ ಕಾಂಗ್ರೆಸ್ ಜಿಲ್ಲಾ ಸಾಮಾಜಿಕ ಜಾಲಾತಾಣ ವಿಭಾಗದ ಪ್ರಧಾನ ಕಾರ್ಯದರ್ಶಿ ಗಣೇಶ್ ರಿಂದ ಬೆಳ್ತಂಗಡಿ ಠಾಣೆಗೆ ದೂರು

Suddi Udaya

ಉಜಿರೆಯಲ್ಲಿ ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ಮತದಾನ

Suddi Udaya

ಬೈಕ್ ಸ್ಕಿಡ್ ಆಗಿ ಡಿವೈಡರ್ ಗೆ ಡಿಕ್ಕಿ; ಸಹಸವಾರ ವಿದ್ಯಾರ್ಥಿ ಸಾವು: ಸವಾರ ಗಂಭೀರ ಗಾಯ

Suddi Udaya

ಉಜಿರೆ :ಝೆoಕಾರ ರಾಷ್ಟ್ರೀಯ ಶಿಕ್ಷಣ ಮತ್ತು ಸಾಂಸ್ಕೃತಿಕ ಫೆಸ್ಟ್ : ನಾರಾವಿ ಸಂತ ಅಂತೋನಿ ಪದವಿ ಕಾಲೇಜಿನ ವಿದ್ಯಾರ್ಥಿ ವನಿಶ್ ಗೆ ಫೋಟೋಗ್ರಫಿ ಸ್ಪರ್ಧೆಯಲ್ಲಿ ಪ್ರಥಮ

Suddi Udaya

ಕಳೆಂಜ ಅರಣ್ಯ ಇಲಾಖೆ ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ಮನೆ ನಿರ್ಮಾಣ: ಅಕ್ರಮ ಪ್ರವೇಶ ಮತ್ತು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಕರ್ತವ್ಯಕ್ಕೆ ಅಡ್ಡಿ: 11 ಜನರ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!