25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಂಡಾಜೆ: ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ

ಮುಂಡಾಜೆ: “ವಿದ್ಯಾರ್ಥಿಗಳು ಸಮಾಜಮುಖಿ ಕೆಲಸಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು. ಪರೋಪಕಾರ ಮನೋಭಾವವನ್ನು ಬೆಳೆಸಿಕೊಂಡು ಸತ್ಕಾರ್ಯವನ್ನು ಮಾಡಿದಾಗ ಜೀವನದಲ್ಲಿ ಯಶಸ್ಸನ್ನು ಗಳಿಸಲು ಸಾಧ್ಯ. ಎನ್ಎಸ್ಎಸ್ ವಿದ್ಯಾರ್ಥಿಗಳಿಗೆ ಜೀವನ ಪಾಠವನ್ನು ತಿಳಿಸಿ ಕೊಡುತ್ತದೆ” ಎಂದು ಜೋಸ್ ಇ. ಎಂ. ಕಿಲ್ಲೂರು, ನಿವೃತ್ತ ಪ್ರಾಂಶುಪಾಲರು, ಸರಕಾರಿ ಪಾಲಿಟೆಕ್ನಿಕ್ ಕಾಲೇಜು, ಬಳ್ಳಾರಿ ಇವರು ಅಭಿಪ್ರಾಯ ಪಟ್ಟರು.

ಇವರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಿತ್ತಬಾಗಿಲು ಇಲ್ಲಿ ನಡೆದ ಮುಂಡಾಜೆ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಭಾಷಣ ಮಾಡಿದರು.


ಶಿಬಿರಾಧಿಕಾರಿ ಶ್ರೀಮತಿ ನಮಿತಾ ಕೆ ಆರ್ ಶಿಬಿರದ ವರದಿಯನ್ನು ವಾಚಿಸಿದರು. ಊರವರ ಪರವಾಗಿ ಶಿಬಿರ ನಿರ್ವಹಣಾ ಸಮಿತಿಯ ಅಧ್ಯಕ್ಷ ಹೈದರಾಲಿ ಅನಿಸಿಕೆಯನ್ನು ವ್ಯಕ್ತಪಡಿಸಿದರು. ಶಿಬಿರಾರ್ಥಿಗಳಾದ ಕುಶಾಲಪ್ಪ, ಜನಾರ್ಧನ ಮತ್ತು ಕುಮಾರಿ ಅಮೃತ ತಮ್ಮ ಅನುಭವಗಳನ್ನು ಹಂಚಿಕೊಂಡರು. ವಿಶೇಷ ಶಿಬಿರದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರವನ್ನು ಮತ್ತು ಸ್ಮರಣಕೆ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀಮತಿ ಗೀತಾ, ಪ್ರಾಂಶುಪಾಲರು ಮುಂಡಾಜೆ ಪದವಿ ಪೂರ್ವ ಕಾಲೇಜು ಇವರು ವಹಿಸಿದ್ದರು. ಮಿತ್ತಬಾಗಿಲು ಗ್ರಾಮ ಪಂಚಾಯಿತಿ ಅಧ್ಯಕ್ಷ ವಿನಯಚಂದ್ರ ಸೇನರೆಬೆಟ್ಟು, ಶಿಬಿರಾರ್ಥಿಗಳಿಗೆ ಶುಭ ಹಾರೈಸಿದರು.

ವೇದಿಕೆಯಲ್ಲಿ ಮೋಹನ್ ಬಂಗೇರ, ಪಂಚಾಯತಿ ಅಭಿವೃದ್ಧಿ ಅಧಿಕಾರಿ, ಮಿತ್ತಬಾಗಿಲು, ಶ್ರೀಮತಿ ಇಂದಿರಾ ಕುಮಾರಿ, ಮುಖ್ಯ ಶಿಕ್ಷಕರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮಿತ್ತಬಾಗಿಲು, ಕಬಿರ್, ಅಧ್ಯಕ್ಷರು ಶಾಲಾಭಿವೃದ್ಧಿ ಸಮಿತಿ, ಮಿತ್ತಬಾಗಿಲು, ಹೈದರಾಲಿ, ಅಧ್ಯಕ್ಷರು ಶಿಬಿರ ನಿರ್ವಹಣಾ ಸಮಿತಿ, ಅಬ್ದುಲ್ ಅಜೀಜ್, ಸಂಶುದ್ದೀನ್, ಶಿಬಿರಾಧಿಕಾರಿ ಶ್ರೀಮತಿ ನಮಿತಾ ಕೆ ಆರ್ ಉಪಸ್ಥಿತರಿದ್ದರು.

ಉಪನ್ಯಾಸಕಿ ಶ್ರೀಮತಿ ವಿದ್ಯಾ ರಾವ್ ಕಾರ್ಯಕ್ರಮದ ನಿರೂಪಣೆಯನ್ನು ಮಾಡಿದರು. ಪುರುಷೋತ್ತಮ ಶೆಟ್ಟಿ ಸ್ವಾಗತಿಸಿ, ಪದ್ಮನಾಭ ಬಿ ಕೆ ವಂದಿಸಿದರು. ಏಳು ದಿನಗಳ ಕಾಲ ನಡೆದ ವಾರ್ಷಿಕ ವಿಶೇಷ ಶಿಬಿರದಲ್ಲಿ ಸ್ವಚ್ಛತಾ ಆಂದೋಲನ, ನಶಾ ಮುಕ್ತ ಅಭಿಯಾನ, ತೆಂಗಿನ ಗಿಡಗಳ ನಾಟಿ, ರಸ್ತೆ ರಿಪೇರಿ ಮುಂತಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.

Related posts

ಬಳಂಜ: ಶ್ರೀ ಶಾರದೋತ್ಸವದ ಅಂಗವಾಗಿ ವಾಲಿಬಾಲ್ ಪಂದ್ಯಾಟ, ಯುವ ಉದ್ಯಮಿ ರಾಕೇಶ್ ಹೆಗ್ಡೆಯವರಿಂದ ಕ್ರೀಡಾಂಗಣ ಉದ್ಘಾಟನೆ

Suddi Udaya

ಮನೆಯಲ್ಲಿ ಯಾರೂ ಇಲ್ಲದ ವೇಳೆ ನಗನಗದು ದೋಚಿ ಪರಾರಿ

Suddi Udaya

ಹೊಸಂಗಡಿ: ಅಡಿಕೆ ಬೆಳೆಯಲ್ಲಿ ಎಲೆ ಚುಕ್ಕೆ ರೋಗದ ನಿರ್ವಹಣೆ ಕುರಿತು ತರಬೇತಿ

Suddi Udaya

ಮುಳಿಕ್ಕಾರುನಲ್ಲಿ ದೈವ ವ್ಯಾಘ್ರ ಚಾಮುಂಡಿ, ಪರಿವಾರ ದೈವಗಳ ನೇಮೋತ್ಸವ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿಯ ಶವ ಪತ್ತೆ: ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ನಾರಾವಿ: ಸಂತ ಅಂತೋನಿ ಶಿಕ್ಷಣ ‘ಸಂಸ್ಥೆಗಳ ದಿನಾಚರಣೆ’

Suddi Udaya
error: Content is protected !!