23.5 C
ಪುತ್ತೂರು, ಬೆಳ್ತಂಗಡಿ
June 8, 2026
ಪ್ರಮುಖ ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ವೇಣೂರು: ಸುಮಾರು 6ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಿಸುದಾರರಿಗೆ ಹಸ್ತಾಂತರಿಸಿದ ಜಯಂತ್ ಶೆಟ್ಟಿ ಹಕ್ಕೇರಿ

ವೇಣೂರು: ಆರಂಬೋಡಿ ಗ್ರಾಮದ ಕಾಂತರಬೆಟ್ಟು ನಿವಾಸಿ ಹರಿಣಾಕ್ಷಿ ಅವರು ರಸ್ತೆಯಲ್ಲಿ ಕಳೆದುಕೊಂಡಿದ್ದ 6 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗನ್ನು ಜಯಂತ್ ಶೆಟ್ಟಿ ಹಕ್ಕೇರಿ ಅವರು ಹಸ್ತಾoತರ ಮಾಡಿ ಮಾನವೀಯತೆ ಮೆರೆದಿದ್ದಾರೆ.

ಹರಿಣಾಕ್ಷಿ ಅವರು ತಾಯಿ ಮನೆಯಿಂದ ಅಳದಂಗಡಿ ಗಂಡನ ಮನೆಗೆ ಆಟೋ ರಿಕ್ಷಾದಲ್ಲಿ ಹೋಗುವಾಗ 6ಲಕ್ಷ ಚಿನ್ನ ಇದ್ದ ಬ್ಯಾಗ್ ಕಳೆದುಕೊಂಡಿದ್ದರು. ಈ ಬ್ಯಾಗ್ ಅಂಗರಕರಿಯ ರಸ್ತೆಯಲ್ಲಿ ಜಯಂತ್ ಶೆಟ್ಟಿ ಹಕ್ಕೇರಿ ಇವರಿಗೆ ಸಿಕ್ಕಿತ್ತು. ಕೂಡಲೇ ಶ್ರೀಮತಿ ಹರಿಣಾಕ್ಷಿ ಇವರ ಗಂಡನಾದ ವಿಶ್ವನಾಥ್ ಬಂಗೇರ ಅಳದಂಗಡಿ ಇವರನ್ನು ಸಂಪರ್ಕಿಸಿ ಹಸ್ತಾoತರ ಮಾಡಿ ಮಾನವೀಯತೆ ಮೆರೆದರು. ಇವರಿಗೆ ಆರಂಬೋಡಿ ಗ್ರಾಮದ ಪ್ರದೀಪ್ ಪಾಣಿಮೇರು, ಜಯಂತ್ ದೇಲೋಡಿ, ರಾಜೇಶ್ ಹುಲಿಮೇರು, ರಿಕ್ಷಾ ಚಾಲಕ ಯತೀಶ್ ಪಾಡ್ಯರು ಸಾಥ್ ನೀಡಿದರು.

Related posts

ಅರಸಿನಮಕ್ಕಿ ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನಕ್ಕೆ ಶೀರೂರು ವೇದವರ್ಧನ ಸ್ವಾಮೀಜಿಯವರು ಭೇಟಿ,

Suddi Udaya

ಥಿಯರಿಟಿಕಲ್ ಫಿಸಿಕ್ಸ್ ನಲ್ಲಿ ಸಂಶೋಧನೆ ನಡೆಸಿ ಮಂಡಿಸಿದ ಪ್ರಬಂಧಕ್ಕೆ ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ನಿಂದ ರಂಜಿತ್ ಕುಮಾರ್ ಅವರಿಗೆ ಡಾಕ್ಟರೇಟ್ ಪದವಿ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ. ಪ್ರಾ. ಶಾಲಾ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya

ಕೊಕ್ಕಡ ಗ್ರಾ.ಪಂ. ನಲ್ಲಿ ಶಿಕ್ಷಣ ಸಂವಹನ ಕಾರ್ಯಕ್ರಮ

Suddi Udaya

ಪಡಂಗಡಿ: ಕರುವಿನ ಮೇಲೆ ಚಿರತೆ ದಾಳಿ

Suddi Udaya

ಮುಂಡಾಜೆ : ಸತ್ಯನಪಲಿಕೆಯಲ್ಲಿ ತೋಟಕ್ಕೆ ನುಗ್ಗಿದ ಕಾಡಾನೆ: ಅಪಾರ ಕೃಷಿ ಹಾನಿ

Suddi Udaya
error: Content is protected !!