25.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಭಿನಂದನೆತಾಲೂಕು ಸುದ್ದಿವರದಿ

ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ ಗಫೂರ್ ಅವರನ್ನು ಅಭಿನಂದಿಸಿದ ಜಿಲ್ಲಾ ಅಲ್ಪ ಸಂಖ್ಯಾತ ಘಟಕದ ಉಪಾಧ್ಯಕ್ಷ ಯು.ಕೆ ಮುಹಮ್ಮದ್ ಹನೀಫ್

ಬೆಳ್ತಂಗಡಿ; ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾಗಿ ಎಂ.ಎ. ಗಫೂರ್ ಅವರು ಸೋಮವಾರ ಕುದ್ಮುಲ್ ರಂಗರಾವ್ ಮಿನಿ ಪುರಭವನದಲ್ಲಿ ಅಧಿಕಾರ ಸ್ವೀಕರಿಸಿದರು.

ಈ ಸಂದರ್ಭ ದ.ಕ ಜಿಲ್ಲಾ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷ, ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಇದರ ಸಂಕ್ರೀಯ ಸಂಘಟಕ ಹಾಗೂ ದ.ಕ ವಕ್ಫ್ ಸಲಹಾ ಸಮಿತಿ ಮಾಜಿ ಸದಸ್ಯ ಯು.ಕೆ ಮುಹಮ್ಮದ್ ಹನೀಫ್ ಅವರು ನೂತ‌ನ ಅಧ್ಯಕ್ಷರಿಗೆ ಶಾಲು ಹೊದಿಸಿ ಹೂ ಗುಚ್ಛ ನೀಡಿ ಶುಭ ಕೋರಿದರು.ಕರಾವಳಿ ಅಭಿವೃದ್ಧಿ ಮಂಡಳಿಯ ಕಾರ್ಯದರ್ಶಿ ಪ್ರದೀಪ್ ಡಿಸೋಜಾ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.

ಪದಗ್ರಹಣ ಸಮಾರಂಭದಲ್ಲಿ ಪದಗ್ರಹಣ ಸಮಾರಂಭದಲ್ಲಿ ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ, ರಮಾನಾಥ ರೈ, ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜಾ, ಮಂಜುನಾಥ ಭಂಡಾರಿ, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಮೂಡ ಅಧ್ಯಕ್ಷ ಸದಾಶಿವ ಉಳ್ಳಾಲ್, ಮಾಜಿ ಶಾಸಕ ಜೆ.ಆ‌ರ್. ಲೋಬೋ, ಮುಖಂಡರಾದ ಜಯಪ್ರಕಾಶ್ ಹೆಗ್ಡೆ, ಪದ್ಮರಾಜ್, ಚೇತನ್ ಬೆಂಗ್ರೆ, ಶಾಲೆಟ್ ಪಿಂಟೋ, ಲಾವಣ್ಯ ಬಳ್ಳಾಲ್, ಪ್ರತಿಭಾ ಕುಳಾಯಿ, ಟಿ.ಎಂ. ಶಹೀದ್, ವಿಶ್ವಾಸ್‌ಕುಮಾ‌ರ್ ದಾಸ್, ಅಶೋಕ್ ಕೊಡವೂರು, ಮಂಜುನಾಥ್, ಪ್ರಸಾದ್ ಕಾಂಚನ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Related posts

ಇಂದಬೆಟ್ಟು ಗ್ರಾ.ಪಂ. ಗ್ರಾಮಸಭೆ

Suddi Udaya

ಡಿ.26 ವಿದ್ಯುತ್ ನಿಲುಗಡೆ

Suddi Udaya

ಲಾಯಿಲ: ಕಂಪ್ಯೂಟರ್ ತರಬೇತಿಯ ಸಮಾರೋಪ ಕಾರ್ಯಕ್ರಮ

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವರ ಸಂಭ್ರಮದ ಬ್ರಹ್ಮಕಲಶೋತ್ಸವ

Suddi Udaya

ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯಲ್ಲಿ ವೈಭವದ ಸಿರಿಹಬ್ಬ-2026 ಉದ್ಘಾಟನೆ

Suddi Udaya

ವಿಶ್ವ ಹಿಂದೂ ಪರಿಷದ್ ಬಜರಂಗದಳ ಬೆಳ್ತಂಗಡಿ ಪ್ರಖಂಡ ಷಷ್ಠಿ ಪೂರ್ತಿಯ ಸಮಾರೋಪ ಸಮಾರಂಭ ಕಾರ್ಯಕ್ರಮದ ಪ್ರಯುಕ್ತ ಪೂರ್ವಭಾವಿ ಪ್ರಮುಖರ ಸಮಾಲೋಚನೆ ಸಭೆ

Suddi Udaya
error: Content is protected !!