July 23, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನೆರಿಯ: ಮನೆಗೆ ಆಕಸ್ಮಿಕ ಬೆಂಕಿ ತಗುಲಿ ಮನೆ ಸಂಪೂರ್ಣ ಹಾನಿ

ಬೆಳ್ತಂಗಡಿ : ನೆರಿಯ ಗ್ರಾಮದ ಕಡ್ಡಿಬಾಗಿಲು ನಿವಾಸಿ ಹರೀಶ್.ವಿ ಎಂಬವರ ಮನೆಯಲ್ಲಿ ಬೆಂಕಿ ಅನಾಹುತ ಉಂಟಾಗಿ ಮನೆ ಸಂಪೂರ್ಣ ಸುಟ್ಟು ಹೋದ ಘಟನೆ ಅ.6 ರಂದು ರಾತ್ರಿ ನಡೆದಿದೆ.

ಘಟನೆಯ ವೇಳೆ ಮನೆಯಲ್ಲಿ ಯಾರು ಇಲ್ಲದ ಕಾರಣ ಯಾವುದೇ ಸಾವು ನೋವು ಉಂಟಾಗಿಲ್ಲ. ಹರೀಶ್ ಅವರು ಭಜನೆ ಗುರುಗಳಾಗಿದ್ದು ಅವರು ತಮ್ಮ ತಂಡದೊಂದಿಗೆ ಬೇರೆಡೆ ತೆರಳಿದ್ದರು. ಪತ್ನಿ ಹಾಗೂ ಒಬ್ಬಳು ಮಗಳು ತವರು ಮನೆಗೆ ಹೋಗಿದ್ದರು. ಇನ್ನಿಬ್ಬರು ಮಕ್ಕಳು ಮನೆಯಲ್ಲಿ ಇದ್ದರು. ಅವರು ಸಂಜೆಯ ವೇಳೆ ಪಕ್ಕದ ಮನೆಗೆ ಹೋಗಿದ್ದರು. ಬಳಿಕ ರಾತ್ರಿ ಬೆಂಕಿ ಅನಾಹುತ ಉಂಟಾಗಿದೆ ಎಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.

ಮನೆಗೆ ಬೆಂಕಿ ಹೇಗೆ ತಗುಲಿದೆ ಎಂಬುದು ಇನ್ನಷ್ಟೆ ತಿಳಿದು ಬರಬೇಕಾಗಿದೆ. ಬೆಂಕಿಯ ಕೆನ್ನಲಿಗೆ ಮನೆಯಲ್ಲಿದ್ದ ವಸ್ತುಗಳೆಲ್ಲ ಸಂಪೂರ್ಣ ಆಹುತಿಯಾಗಿರುವುದಾಗಿ ಸ್ಥಳೀಯರು ಮಾಹಿತಿ ನೀಡಿದ್ದಾರೆ.

Related posts

ಸೇವಾ ನಿವೃತಿ ಹೊಂದಿದ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಎನ್. ಸತೀಶ್ ಹೊಳ್ಳರವರಿಗೆ ಧರ್ಮಸ್ಥಳ ಸಿಎ ಬ್ಯಾಂಕಿನಿಂದ ಬಿಳ್ಕೋಡುಗೆ

Suddi Udaya

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನಿಂದ ಕುಕ್ಕಾವು ಸೇತುವೆ ಬಳಿ ಧ್ಯಾನಸಕ್ತ ಸದಾಶಿವನ 12 ಅಡಿ ಎತ್ತರದ ಪ್ರತಿಮೆ ಲೋಕಾರ್ಪಣೆ

Suddi Udaya

ನ್ಯಾಯತರ್ಪು : ರಕ್ತೇಶ್ವರಿ ಪದವು ಬಳಿ ಗುಡ್ಡ ಕುಸಿತ: ಸ್ಥಳಕ್ಕೆ ಗ್ರಾ.ಪಂ. ಅಧ್ಯಕ್ಷರು , ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ

Suddi Udaya

ಬೆಳ್ತಂಗಡಿ ತಾ. ಪಂ ಲೆಕ್ಕ ಸಹಾಯಕ ಹುದ್ದೆಯಿಂದ ಬಿ.ವೃಂದದ ಲೆಕ್ಕಾಧಿಕಾರಿ ಹುದ್ದೆಗೆ ಭಡ್ತಿ ಗೊಂಡ ಜಯರಾಮ್ ರಿಗೆ ಅಭಿನಂದನೆ

Suddi Udaya

ಆದಿದ್ರಾವಿಡ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ಗಣರಾಜ್ಯೋತ್ಸವ ಸಂಭ್ರಮಾಚರಣೆ

Suddi Udaya

ಮುಂಡೂರು ಮಂಗಳಗಿರಿ ದೇವಸ್ಥಾನದ ವತಿಯಿಂದ ಶಾಲಾ ಮಕ್ಕಳಿಗೆ ಕೊಡೆ ವಿತರಣೆ

Suddi Udaya
error: Content is protected !!