23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜಾಗತಿಕ ಕ್ರೀಡೋತ್ಸವದ ಪದಾಧಿಕಾರಿಗಳ ಪೂರ್ವಭಾವಿ ಸಭೆ

ಅಖಿಲ ಭಾರತ ಬಿಲ್ಲವರ ಯೂನಿಯನ್ ರಿಜಿಸ್ಟರ್ಡ್ ಮಂಗಳೂರು ಇದರ ವತಿಯಿಂದ ಜಾಗತಿಕ ಬಿಲ್ಲವರ ಕ್ರೀಡೋತ್ಸವದ ಪದಾಧಿಕಾರಿಗಳ ಪೂರ್ವಭಾವಿ ಸಭೆಯ ಉದ್ಘಾಟನೆಯನ್ನು ಅ.5 ರಂದು ನಿವೃತ್ತ ಎಸ್ ಪಿ ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ಗೌರವಾಧ್ಯಕ್ಷ ಪೀತಾಂಬರ ಹೆರಾಜೆ ಯವರು ಮಂಗಳೂರಿನ ಓಷನ್ ಪರ್ಲ್ ಸಭಾಭವನದಲ್ಲಿ ಉದ್ಘಾಟಿಸಿ 2026 ಜನವರಿ 18ರಂದು ಮಂಗಳೂರು ನೆಹರು ಮೈದಾನದಲ್ಲಿ ನಡೆಯುವ ಜಾಗತಿಕ ಮಟ್ಟದ ಬಿಲ್ಲವ ಸಮಾಜದ ಮಹಿಳೆಯರು ಮತ್ತು ಮಹನೀಯರಿಗಾಗಿ ನಡೆಯುವ ಕ್ರೀಡಾಕೂಟದಲ್ಲಿ ಪ್ರತಿಯೊಬ್ಬರೂ ಭಾಗವಹಿಸಬೇಕೆಂದು ಕರೆ ನೀಡಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಅಖಿಲ ಭಾರತ ಬಿಲ್ಲವರ ಯೂನಿಯನ್ ಅಧ್ಯಕ್ಷ ನವೀನ್ ಚಂದ್ರ ಡಿ ಸುವರ್ಣ ರವರು ಸ್ವಾಗತಿಸಿ, ಪ್ರಸ್ತಾವಿಸುತ್ತಾ ಇದೊಂದು ಐತಿಹಾಸಿಕ ಸಮಾರಂಭ ಈ ಕ್ರೀಡಾಕೂಟದಲ್ಲಿ ರಾಷ್ಟ್ರ ಮತ್ತು ಅಂತರಾಷ್ಟ್ರ ಮಟ್ಟದ ಕ್ರೀಡಾಸ್ಪರ್ಧಿಗಳು ಭಾಗವಹಿಸಬೇಕೆಂದು ತಿಳಿಸಿದರು.

ಕ್ರೀಡಾ ಪ್ರಧಾನ ಸಂಚಾಲಕರಾದ ಪುರುಷೋತ್ತಮ ಪೂಜಾರಿ ಕ್ರೀಡೆಗಳ ಬಗ್ಗೆ ಮಾಹಿತಿಯನ್ನು ನೀಡಿದರು. ಪ್ರಧಾನ ಕಾರ್ಯದರ್ಶಿ ಜೀವನ್ ವರದಿಯನ್ನು ಯಾಚಿಸಿದರು. ವೇದಿಕೆಯಲ್ಲಿ ಕ್ರೀಡಾ ಸಂಚಾಲಕ ಸದಾನಂದ ಪೂಜಾರಿ, ಮಹಿಳಾ ವಿಭಾಗದ ಅಧ್ಯಕ್ಷೆ ಶ್ರೀಮತಿ ಸುಮಲತಾ ಎನ್ ಸುವರ್ಣ, ಉಪಾಧ್ಯಕ್ಷರುಗಳಾದ ಕೆಟಿ ಸುವರ್ಣ, ಲೋಕನಾಥ್ ಅಮೀನ್, ಕೋಶಾಧಿಕಾರಿ ಜಯಪ್ರಕಾಶ್ ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು. ಸಂಘಟನಾ ಕಾರ್ಯದರ್ಶಿ ಯೋಗೇಶ್ ಕುಮಾರ್ ಗೇರುಕಟ್ಟೆ, ಸಹಕರಿಸಿದರು.

ಸಮಾರಂಭದಲ್ಲಿ ಜಿಲ್ಲೆಯ ಬಿಲ್ಲವ ಸಮಾಜದ ಸಂಘಟನೆಗಳ ಪ್ರಮುಖರು, ದೇವಸ್ಥಾನಗಳ ಮುಖ್ಯಸ್ಥರು ಸಮಾಜದ ಬ್ಯಾಂಕುಗಳ ಅಧ್ಯಕ್ಷರುಗಳು, ಕ್ರೀಡಾಪಟುಗಳು, ರಾಜಕೀಯ, ಸಾಮಾಜಿಕ, ಮತ್ತು ಧಾರ್ಮಿಕ ಪ್ರಮುಖರು ಹಾಜರಿದ್ದರು.

Related posts

ಬಾರ್ಯ ಕ್ಷೇತ್ರದಲ್ಲಿ ಡಾ. ಯೋಗಿಂದ್ರ ಭಟ್ಟರಿಗೆ ಅಭಿನಂದನೆ

Suddi Udaya

ಪಡಂಗಡಿ ಮಹಿಳಾ ಗ್ರಾಮಸಭೆ: ಮಹಿಳಾ ಸ್ವಚ್ಛತಾಗಾರರಿಗೆ ಗೌರವ ಸನ್ಮಾನ ಮತ್ತು ಸಮವಸ್ತ್ರ ವಿತರಣೆ

Suddi Udaya

ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ಪ್ರತಿಭಟನೆ

Suddi Udaya

ಕರಂಬಾರು: ಮಾನಸಿಕ ಖಿನ್ನತೆಗೆ ಒಳಗಾಗಿ ನಾಗೇಶ್ ನೇಣು ಬಿಗಿದು ಆತ್ಮಹತ್ಯೆ

Suddi Udaya

ಗ್ರಾಮೀಣ ಪ್ರತಿಭೆ ಉತ್ತಮ‌ ಸಾಧನೆ, ಅಂಡಿಂಜೆಯ ದ್ವಿಶಾನ್ ಜೈನ್ ಸಿಎ ಪರೀಕ್ಷೆಯಲ್ಲಿ ಉತ್ತೀರ್ಣ

Suddi Udaya

ಉಜಿರೆ : ಶ್ರೀ ಧ.ಮಂ. ಕಾಲೇಜಿನ ಸ್ವಚ್ಛತಾ ಸಿಬ್ಬಂದಿಗೆ ಬೀಳ್ಕೊಡುಗೆ

Suddi Udaya
error: Content is protected !!