September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜಾಗತಿಕ ಕ್ರೀಡೋತ್ಸವದ ಪದಾಧಿಕಾರಿಗಳ ಪೂರ್ವಭಾವಿ ಸಭೆ

ಅಖಿಲ ಭಾರತ ಬಿಲ್ಲವರ ಯೂನಿಯನ್ ರಿಜಿಸ್ಟರ್ಡ್ ಮಂಗಳೂರು ಇದರ ವತಿಯಿಂದ ಜಾಗತಿಕ ಬಿಲ್ಲವರ ಕ್ರೀಡೋತ್ಸವದ ಪದಾಧಿಕಾರಿಗಳ ಪೂರ್ವಭಾವಿ ಸಭೆಯ ಉದ್ಘಾಟನೆಯನ್ನು ಅ.5 ರಂದು ನಿವೃತ್ತ ಎಸ್ ಪಿ ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ಗೌರವಾಧ್ಯಕ್ಷ ಪೀತಾಂಬರ ಹೆರಾಜೆ ಯವರು ಮಂಗಳೂರಿನ ಓಷನ್ ಪರ್ಲ್ ಸಭಾಭವನದಲ್ಲಿ ಉದ್ಘಾಟಿಸಿ 2026 ಜನವರಿ 18ರಂದು ಮಂಗಳೂರು ನೆಹರು ಮೈದಾನದಲ್ಲಿ ನಡೆಯುವ ಜಾಗತಿಕ ಮಟ್ಟದ ಬಿಲ್ಲವ ಸಮಾಜದ ಮಹಿಳೆಯರು ಮತ್ತು ಮಹನೀಯರಿಗಾಗಿ ನಡೆಯುವ ಕ್ರೀಡಾಕೂಟದಲ್ಲಿ ಪ್ರತಿಯೊಬ್ಬರೂ ಭಾಗವಹಿಸಬೇಕೆಂದು ಕರೆ ನೀಡಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಅಖಿಲ ಭಾರತ ಬಿಲ್ಲವರ ಯೂನಿಯನ್ ಅಧ್ಯಕ್ಷ ನವೀನ್ ಚಂದ್ರ ಡಿ ಸುವರ್ಣ ರವರು ಸ್ವಾಗತಿಸಿ, ಪ್ರಸ್ತಾವಿಸುತ್ತಾ ಇದೊಂದು ಐತಿಹಾಸಿಕ ಸಮಾರಂಭ ಈ ಕ್ರೀಡಾಕೂಟದಲ್ಲಿ ರಾಷ್ಟ್ರ ಮತ್ತು ಅಂತರಾಷ್ಟ್ರ ಮಟ್ಟದ ಕ್ರೀಡಾಸ್ಪರ್ಧಿಗಳು ಭಾಗವಹಿಸಬೇಕೆಂದು ತಿಳಿಸಿದರು.

ಕ್ರೀಡಾ ಪ್ರಧಾನ ಸಂಚಾಲಕರಾದ ಪುರುಷೋತ್ತಮ ಪೂಜಾರಿ ಕ್ರೀಡೆಗಳ ಬಗ್ಗೆ ಮಾಹಿತಿಯನ್ನು ನೀಡಿದರು. ಪ್ರಧಾನ ಕಾರ್ಯದರ್ಶಿ ಜೀವನ್ ವರದಿಯನ್ನು ಯಾಚಿಸಿದರು. ವೇದಿಕೆಯಲ್ಲಿ ಕ್ರೀಡಾ ಸಂಚಾಲಕ ಸದಾನಂದ ಪೂಜಾರಿ, ಮಹಿಳಾ ವಿಭಾಗದ ಅಧ್ಯಕ್ಷೆ ಶ್ರೀಮತಿ ಸುಮಲತಾ ಎನ್ ಸುವರ್ಣ, ಉಪಾಧ್ಯಕ್ಷರುಗಳಾದ ಕೆಟಿ ಸುವರ್ಣ, ಲೋಕನಾಥ್ ಅಮೀನ್, ಕೋಶಾಧಿಕಾರಿ ಜಯಪ್ರಕಾಶ್ ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು. ಸಂಘಟನಾ ಕಾರ್ಯದರ್ಶಿ ಯೋಗೇಶ್ ಕುಮಾರ್ ಗೇರುಕಟ್ಟೆ, ಸಹಕರಿಸಿದರು.

ಸಮಾರಂಭದಲ್ಲಿ ಜಿಲ್ಲೆಯ ಬಿಲ್ಲವ ಸಮಾಜದ ಸಂಘಟನೆಗಳ ಪ್ರಮುಖರು, ದೇವಸ್ಥಾನಗಳ ಮುಖ್ಯಸ್ಥರು ಸಮಾಜದ ಬ್ಯಾಂಕುಗಳ ಅಧ್ಯಕ್ಷರುಗಳು, ಕ್ರೀಡಾಪಟುಗಳು, ರಾಜಕೀಯ, ಸಾಮಾಜಿಕ, ಮತ್ತು ಧಾರ್ಮಿಕ ಪ್ರಮುಖರು ಹಾಜರಿದ್ದರು.

Related posts

ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ: ಬಿಜೆಪಿ ಶಾಸಕರುಗಳಿಂದ ವಿಧಾನ ಸೌಧದ ಎದುರು ಭಿತ್ತಿಪತ್ರ ಪ್ರದರ್ಶನ: “ದಕ್ಷಿಣ ಕನ್ನಡ ತೆರಿಗೆ ಮುಸ್ಲಿಮರ ಮನೆಗೆ” ಗಮನ ಸೆಳೆದ ಶಾಸಕ ಹರೀಶ್ ಪೂಂಜ ಪ್ರದರ್ಶಿಸಿದ ಬಿತ್ತಿಪತ್ರ

Suddi Udaya

ಇಂದಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಂದ ನಾಟಿ ನೆಡುವ ಪ್ರಾತ್ಯಕ್ಷಿಕೆ

Suddi Udaya

ಬೆಳ್ತಂಗಡಿ: ತಲೆಮಲೆರಿಸಿಕೊಂಡಿದ್ದ ವಾರೆಂಟ್ ಆರೋಪಿ ಸತೀಶ್ ದ್ರಾವಿಡ ಪೊಲೀಸ್ ವಶಕ್ಕೆ

Suddi Udaya

ಮೈರೋಳ್ತಡ್ಕ: ಗುಂಡಿ ಬಿದ್ದ ರಸ್ತೆಗೆ ಪಂಚಾಯತ್ ವತಿಯಿಂದ ಸುಗಮ ಸಂಚಾರಕ್ಕೆ ವ್ಯವಸ್ಥೆ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಬೆಳಾಲು ಶ್ರೀ ಧ.ಮಂ‌. ಅನುದಾನಿತ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕ- ಶಿಕ್ಷಕರ ಸಭೆ

Suddi Udaya
error: Content is protected !!