September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಕ್ರೈಸ್ಟ್ ಅಕಾಡೆಮಿಯಲ್ಲಿ ಆರೋಗ್ಯ ತಪಾಸಣೆ ಮತ್ತು ಪ್ರಥಮ ಚಿಕಿತ್ಸಾ ತರಬೇತಿ ಶಿಬಿರ

ಬೆಳ್ತಂಗಡಿ: ಮುಂಡಾಜೆಯ ಕ್ರೈಸ್ಟ್ ಅಕಾಡೆಮಿಯಲ್ಲಿ ಆರೋಗ್ಯ ತಪಾಸಣೆ ಮತ್ತು ಪ್ರಥಮ ಚಿಕಿತ್ಸಾ ತರಬೇತಿ ಶಿಬಿರ ಅ.5 ರಂದು ಜರಗಿತು.


ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಪ್ರಕಾಶ್ ಪ್ರಭು ಶಿಬಿರ ಉದ್ಘಾಟಿಸಿದರು.
ಕ್ರೈಸ್ಟ್ ಅಕಾಡೆಮಿಯ ಪ್ರಿನ್ಸಿಪಾಲ್ ಫಾ. ಜಾರ್ಜ್ ಸಿ.ಎಂ.ಐ., ಮುಂಡಾಜೆ ರೋಟರಿ ಸಮುದಾಯ ದಳದ ಅಧ್ಯಕ್ಷ ಪಿ.ಸಿ. ಸೆಬಾಸ್ಟಿಯನ್, ಕಾರ್ಯದರ್ಶಿ ರಾಕೇಶ್, ಬೆನಕ ಆಸ್ಪತ್ರೆಯ ಜನರಲ್ ಮ್ಯಾನೇಜರ್ ದೇವಸ್ಯ, ಪಿಆರ್ ಒ ಎಸ್.ಜಿ.ಭಟ್, ರೋಟರಿ ಕ್ಲಬ್ ಬೆಳ್ತಂಗಡಿ ಮಾಜಿ ಅಧ್ಯಕ್ಷ ಅನಂತ ಭಟ್ ಮಚ್ಚಿಮಲೆ, ಮೇ.ಜ. ಎಂ.ವಿ.ಭಟ್, ವೆಂಕಟೇಶ್ವರ ಭಟ್ ಕಜೆ ಮತ್ತಿತರರು ಉಪಸ್ಥಿತರಿದ್ದರು.

ಉಚಿತ ಮಧುಮೇಹ ತಪಾಸಣೆ, ರಕ್ತದೊತ್ತಡ, ಇಸಿಜಿ, ಸ್ತ್ರೀ ರೋಗ ಮತ್ತು ಪ್ರಸೂತಿ ಪರೀಕ್ಷೆ, ಮಕ್ಕಳ ಆರೋಗ್ಯ ತಪಾಸಣೆ ಸೇರಿದಂತೆ ಸಾಮಾನ್ಯ ಆರೋಗ್ಯ ತಪಾಸಣೆ ನಡೆಯಿತು. ಸುಮಾರು 110 ಮಂದಿ ಶಿಬಿರದಲ್ಲಿ ಪಾಲ್ಗೊಂಡರು.
ರೋಟರಿ ಸಮುದಾಯದ ಮುಂಡಾಜೆ ನೇತೃತ್ವದಲ್ಲಿ ಕ್ರೈಸ್ಟ್ ಅಕಾಡೆಮಿ ಮುಂಡಾಜೆ ಸಹಭಾಗಿತ್ವದಲ್ಲಿ ಉಜಿರೆ ಬೆನಕ ಚಾರಿಟೇಬಲ್ ಟ್ರಸ್ಟ್ ಹಾಗೂ ಬೆನಕ ಹೆಲ್ತ್ ಸೆಂಟರ್ ವತಿಯಿಂದ ಕಾರ್ಯಕ್ರಮ ನಡೆಯಿತು.

Related posts

ಕುವೆಟ್ಟು : ಪಯ್ಯೊಟ್ಟು ನಿವಾಸಿ ಸೀತಾರಾಮ ಪೂಜಾರಿ ನಿಧನ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಮತ್ತು ಡಿ.ಎಡ್. ಕಾಲೇಜಿನಲ್ಲಿ ಸಾಂಕ್ರಮಿಕ ರೋಗಗಳ ಜಾಗೃತಿ ಕಾರ್ಯಕ್ರಮ

Suddi Udaya

ಮುಂಡಾಜೆ :ಯುವ ಸಾಹಿತಿ ಆಪ್ತಿ ಪಟವರ್ಧನ್ ರವರು ಬರೆದ ಜರ್ನಿ ಅಂಡರ್‌ದ ಸ್ಕೈ ಪುಸ್ತಕ ಬಿಡುಗಡೆ

Suddi Udaya

ತಾಲೂಕು ಮಟ್ಟದ ಕ್ರೀಡಾಕೂಟ: ಮಚ್ಚಿನ ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಬೆಳ್ತಂಗಡಿ ಗ್ರಾಹಕರಿಗೆ ಸುವರ್ಣಾವಕಾಶ, ಯಾವುದೇ ಬಟ್ಟೆ ಖರೀದಿಸಿದರೂ ರೂ. 200 ಮಾತ್ರ

Suddi Udaya

ಕಳೆಂಜ ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
error: Content is protected !!