July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಕ್ರೈಸ್ಟ್ ಅಕಾಡೆಮಿಯಲ್ಲಿ ಆರೋಗ್ಯ ತಪಾಸಣೆ ಮತ್ತು ಪ್ರಥಮ ಚಿಕಿತ್ಸಾ ತರಬೇತಿ ಶಿಬಿರ

ಬೆಳ್ತಂಗಡಿ: ಮುಂಡಾಜೆಯ ಕ್ರೈಸ್ಟ್ ಅಕಾಡೆಮಿಯಲ್ಲಿ ಆರೋಗ್ಯ ತಪಾಸಣೆ ಮತ್ತು ಪ್ರಥಮ ಚಿಕಿತ್ಸಾ ತರಬೇತಿ ಶಿಬಿರ ಅ.5 ರಂದು ಜರಗಿತು.


ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಪ್ರಕಾಶ್ ಪ್ರಭು ಶಿಬಿರ ಉದ್ಘಾಟಿಸಿದರು.
ಕ್ರೈಸ್ಟ್ ಅಕಾಡೆಮಿಯ ಪ್ರಿನ್ಸಿಪಾಲ್ ಫಾ. ಜಾರ್ಜ್ ಸಿ.ಎಂ.ಐ., ಮುಂಡಾಜೆ ರೋಟರಿ ಸಮುದಾಯ ದಳದ ಅಧ್ಯಕ್ಷ ಪಿ.ಸಿ. ಸೆಬಾಸ್ಟಿಯನ್, ಕಾರ್ಯದರ್ಶಿ ರಾಕೇಶ್, ಬೆನಕ ಆಸ್ಪತ್ರೆಯ ಜನರಲ್ ಮ್ಯಾನೇಜರ್ ದೇವಸ್ಯ, ಪಿಆರ್ ಒ ಎಸ್.ಜಿ.ಭಟ್, ರೋಟರಿ ಕ್ಲಬ್ ಬೆಳ್ತಂಗಡಿ ಮಾಜಿ ಅಧ್ಯಕ್ಷ ಅನಂತ ಭಟ್ ಮಚ್ಚಿಮಲೆ, ಮೇ.ಜ. ಎಂ.ವಿ.ಭಟ್, ವೆಂಕಟೇಶ್ವರ ಭಟ್ ಕಜೆ ಮತ್ತಿತರರು ಉಪಸ್ಥಿತರಿದ್ದರು.

ಉಚಿತ ಮಧುಮೇಹ ತಪಾಸಣೆ, ರಕ್ತದೊತ್ತಡ, ಇಸಿಜಿ, ಸ್ತ್ರೀ ರೋಗ ಮತ್ತು ಪ್ರಸೂತಿ ಪರೀಕ್ಷೆ, ಮಕ್ಕಳ ಆರೋಗ್ಯ ತಪಾಸಣೆ ಸೇರಿದಂತೆ ಸಾಮಾನ್ಯ ಆರೋಗ್ಯ ತಪಾಸಣೆ ನಡೆಯಿತು. ಸುಮಾರು 110 ಮಂದಿ ಶಿಬಿರದಲ್ಲಿ ಪಾಲ್ಗೊಂಡರು.
ರೋಟರಿ ಸಮುದಾಯದ ಮುಂಡಾಜೆ ನೇತೃತ್ವದಲ್ಲಿ ಕ್ರೈಸ್ಟ್ ಅಕಾಡೆಮಿ ಮುಂಡಾಜೆ ಸಹಭಾಗಿತ್ವದಲ್ಲಿ ಉಜಿರೆ ಬೆನಕ ಚಾರಿಟೇಬಲ್ ಟ್ರಸ್ಟ್ ಹಾಗೂ ಬೆನಕ ಹೆಲ್ತ್ ಸೆಂಟರ್ ವತಿಯಿಂದ ಕಾರ್ಯಕ್ರಮ ನಡೆಯಿತು.

Related posts

ಉಜಿರೆ: ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ‘ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ’ ಮಾಹಿತಿ ಕಾರ್ಯಕ್ರಮ

Suddi Udaya

ಅಯೋಧ್ಯೆ ಪ್ರಭು ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ: ಕನ್ಯಾಡಿ ಶ್ರೀರಾಮ ಕ್ಷೇತ್ರದಲ್ಲಿ ವಿಶೇಷ ಪೂಜೆ

Suddi Udaya

ಗರ್ಡಾಡಿ ಜನಮಂಗಳ ಕಾರ್ಯಕ್ರಮದಡಿಯಲ್ಲಿ ವೀಲ್ ಚೇರ್ ವಿತರಣೆ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕರಾಗಿ ಕಮಲ್ ತೇಜು ರಾಜಪೂತ್ ನೇಮಕ

Suddi Udaya

ಬಿಜೆಪಿ‌ ಅಲ್ಪಸಂಖ್ಯಾತ ಮೋರ್ಚಾದಿಂದ ಶಾಸಕರ ಹುಟ್ಟುಹಬ್ಬ ಆಚರಣೆ

Suddi Udaya

ಎಸ್‌ಡಿಎಂ ಕಾಲೇಜಿನ ಕಲಾ ವಿಭಾಗದ ನೂತನ ಡೀನ್ ಆಗಿ ಡಾ. ಬೋಜಮ್ಮ ಕೆ. ಎನ್. ನೇಮಕ

Suddi Udaya
error: Content is protected !!