July 23, 2026
ಪ್ರಮುಖ ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ವೇಣೂರು: ಸುಮಾರು 6ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಿಸುದಾರರಿಗೆ ಹಸ್ತಾಂತರಿಸಿದ ಜಯಂತ್ ಶೆಟ್ಟಿ ಹಕ್ಕೇರಿ

ವೇಣೂರು: ಆರಂಬೋಡಿ ಗ್ರಾಮದ ಕಾಂತರಬೆಟ್ಟು ನಿವಾಸಿ ಹರಿಣಾಕ್ಷಿ ಅವರು ರಸ್ತೆಯಲ್ಲಿ ಕಳೆದುಕೊಂಡಿದ್ದ 6 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗನ್ನು ಜಯಂತ್ ಶೆಟ್ಟಿ ಹಕ್ಕೇರಿ ಅವರು ಹಸ್ತಾoತರ ಮಾಡಿ ಮಾನವೀಯತೆ ಮೆರೆದಿದ್ದಾರೆ.

ಹರಿಣಾಕ್ಷಿ ಅವರು ತಾಯಿ ಮನೆಯಿಂದ ಅಳದಂಗಡಿ ಗಂಡನ ಮನೆಗೆ ಆಟೋ ರಿಕ್ಷಾದಲ್ಲಿ ಹೋಗುವಾಗ 6ಲಕ್ಷ ಚಿನ್ನ ಇದ್ದ ಬ್ಯಾಗ್ ಕಳೆದುಕೊಂಡಿದ್ದರು. ಈ ಬ್ಯಾಗ್ ಅಂಗರಕರಿಯ ರಸ್ತೆಯಲ್ಲಿ ಜಯಂತ್ ಶೆಟ್ಟಿ ಹಕ್ಕೇರಿ ಇವರಿಗೆ ಸಿಕ್ಕಿತ್ತು. ಕೂಡಲೇ ಶ್ರೀಮತಿ ಹರಿಣಾಕ್ಷಿ ಇವರ ಗಂಡನಾದ ವಿಶ್ವನಾಥ್ ಬಂಗೇರ ಅಳದಂಗಡಿ ಇವರನ್ನು ಸಂಪರ್ಕಿಸಿ ಹಸ್ತಾoತರ ಮಾಡಿ ಮಾನವೀಯತೆ ಮೆರೆದರು. ಇವರಿಗೆ ಆರಂಬೋಡಿ ಗ್ರಾಮದ ಪ್ರದೀಪ್ ಪಾಣಿಮೇರು, ಜಯಂತ್ ದೇಲೋಡಿ, ರಾಜೇಶ್ ಹುಲಿಮೇರು, ರಿಕ್ಷಾ ಚಾಲಕ ಯತೀಶ್ ಪಾಡ್ಯರು ಸಾಥ್ ನೀಡಿದರು.

Related posts

ಬಳಂಜ: ಬದಿನಡೆ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

Suddi Udaya

ಕುಕ್ಕಾಜೆ ದಿ. ಕುಶಾಲಪ್ಪ ನಾಯ್ಕರ ಮನೆಯವರಿಗೆ ಧನಸಹಾಯ ಹಸ್ತಾಂತರ

Suddi Udaya

ಕುಂಟಾಲಪಳಿಕೆ ಸಮನ್ವಿ ಕಿಶೋರಿ ಸಂಘದ ಉದ್ಘಾಟನೆ

Suddi Udaya

ಫ್ಯಾಷನ್ ಡಿಸೈನ್ ನಲ್ಲಿ ಮಂಗಳೂರು ವಿ.ವಿ. ಗೆ 3ನೇ ರ‍್ಯಾಂಕ್ ಪಡೆದ ಉಜಿರೆಯ ಹವನ ಪಿ. ಪೂಜಾರಿ

Suddi Udaya

ಉರುವಾಲು ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿ ಮಂತ್ರಿ ಮಂಡಲ ರಚನೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಯೋಗ ತರಬೇತಿ ಉದ್ಘಾಟನೆ

Suddi Udaya
error: Content is protected !!