September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕರಂಬಾರು: ರಾಷ್ಟ್ರೀಯ ಸ್ವಯಂಸೇವಕ ಸಂಘದಿಂದ ವಿಜಯದಶಮಿ‌ ಉತ್ಸವ

ಬೆಳ್ತಂಗಡಿ: ಪ್ರಬಲ ಸಂಕಲ್ಪ ಶಕ್ತಿ ಇದ್ದರೆ ಮಹಾನ್ ಕಾರ್ಯಗಳು ನಡೆಯುತ್ತವೆ. ಇದಕ್ಕೆ ರಾಷ್ಟ್ರೀಯ ಸ್ವಯಂಸೇವಕ ಸಂಘವೇ ನಿದರ್ಶನ ಎಂದು ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಆಡಳಿತೆ ಮೊಕ್ತೇಸರ ಕೃಷ್ಣ ಸಂಪಿಗೆತ್ತಾಯ ಹೇಳಿದರು.
ಅವರು ಕರಂಬಾರು ಜ್ಞಾನೇಶ್ವರಿ ಭಜನಾ‌ಮಂದಿರದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ವಿಜಯದಶಮಿ‌ ಉತ್ಸವದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಡಾl ಹೆಡಗೇವಾರರ ಸಂಕಲ್ಪ ಶಕ್ತಿ ಅದ್ಭುತವಾದದ್ದು. ಸಂಘದ ಸ್ಥಾಪನೆಯಿಂದ ಹಿಂದುತ್ವಕ್ಕೆ ಬಲ ಬಂದಿದೆ. ವಿಶ್ವಗುರು ಆಗಲು ನಮ್ಮ ಸಮಾಜಕ್ಕೆ ಸಾಧ್ಯ. ದೇಶ ಉಳಿದರೆ ಮಾತ್ರ ನಾವು ಉಳಿಯಲು ಸಾಧ್ಯ ಎಂದರು.
ಸಂಘದ ಜಿಲ್ಲಾ ಸಹಕಾರ್ಯವಾಹಕ ಸುಜಿತ್ ಕುಂಡಡ್ಕ ಬೌದ್ಧಿಕ್ ಮಾಡಿ ಸಂಘಕ್ಕೆ ನೂರು ವರ್ಷ ತುಂಬಿದ ಸಂದರ್ಭದಲ್ಲಿ ಪರಿಸರ ಸಂರಕ್ಷಣೆ, ಕುಟುಂಬ ನೀತಿಯ ಪಾಲನೆ, ನಾಗರಿಕ ಶಿಷ್ಟಾಚಾರ, ಸ್ವದೇಶಿ ವಸ್ತುಗಳ ಉಪಯೋಗದಂತಹ ಪಂಚಪರಿವರ್ತನೆಗೆ ನಾವೆಲ್ಲ ಮುಂದಡಿಯಿಡಬೇಕು ಎಂದರು.

ಸಂಘ ಶತಾಬ್ದಿಯ ಹಿನ್ನಲೆಯಲ್ಲಿ ಬಳಂಜ ಮಂಡಲದ ತೆಂಕಕಾರಂದೂರು, ಕರಂಬಾರು, ಶಿರ್ಲಾಲು, ನಾಲ್ಕೂರು, ಬಳಂಜ ಗ್ರಾಮದ ನೂರೈವತ್ತಕ್ಕೂ ಹೆಚ್ಚು ಸ್ವಯಂಸೇವಕರು ಗಣವೇಶಧಾರಿಗಳಾಗಿ ಭಾಗವಹಿಸಿದ್ದರು.

Related posts

ಮುಂಬೈನ ಡೊಂಬಿವಿಲಿನಲ್ಲಿ ನಡೆದ ಶಾರದೋತ್ಸವ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಭಕ್ತಿಹೆಜ್ಜೆ ಬಳಗದ ಭಜನಾ ಮಂಡಳಿಯ ಭಜಕರಿಂದ ಭಜನಾ ಸೇವೆ

Suddi Udaya

ಡಿ.16: ಮರೋಡಿ ಶಾರದಾಂಬ ಪ್ಲೇಯರ್ಸ್ ಆಶ್ರಯದಲ್ಲಿ ಪುರುಷರ ಹೊನಲು ಬೆಳಕಿನ ಮುಕ್ತ ವಾಲಿಬಾಲ್ ಪಂದ್ಯಾಟ ಹಾಗೂ ಮಹಿಳೆಯರ ಮುಕ್ತ ತ್ರೋಬಾಲ್ ಪಂದ್ಯಾಟ, “ಸ್ಪಂದನಾ ಟ್ರೋಫಿ-2023”

Suddi Udaya

ನಾಳೆ (ಫೆ.8) : ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಬೆಳ್ತಂಗಡಿಗೆ

Suddi Udaya

5, 8, 9 ಮತ್ತು 11ನೇ ತರಗತಿಗೆ ರಾಜ್ಯಮಟ್ಟದ ಬೋರ್ಡ್ ಪರೀಕ್ಷೆ ನಡೆಸುವುದಕ್ಕೆ ಹೈಕೋರ್ಟ್ ಆದೇಶ

Suddi Udaya

ಬ್ಲಾಕ್ ಕಾಂಗ್ರೆಸ್ ನಗರ ಸಮಿತಿ ಉಪಾಧ್ಯಕ್ಷರಾಗಿ ಲೋಕೇಶ್ ಗೌಡ

Suddi Udaya

ಲಾಯಿಲ ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಹಕ್ಕುಗಳ ಗ್ರಾಮ ಸಭೆ

Suddi Udaya
error: Content is protected !!