23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕರಂಬಾರು: ರಾಷ್ಟ್ರೀಯ ಸ್ವಯಂಸೇವಕ ಸಂಘದಿಂದ ವಿಜಯದಶಮಿ‌ ಉತ್ಸವ

ಬೆಳ್ತಂಗಡಿ: ಪ್ರಬಲ ಸಂಕಲ್ಪ ಶಕ್ತಿ ಇದ್ದರೆ ಮಹಾನ್ ಕಾರ್ಯಗಳು ನಡೆಯುತ್ತವೆ. ಇದಕ್ಕೆ ರಾಷ್ಟ್ರೀಯ ಸ್ವಯಂಸೇವಕ ಸಂಘವೇ ನಿದರ್ಶನ ಎಂದು ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಆಡಳಿತೆ ಮೊಕ್ತೇಸರ ಕೃಷ್ಣ ಸಂಪಿಗೆತ್ತಾಯ ಹೇಳಿದರು.
ಅವರು ಕರಂಬಾರು ಜ್ಞಾನೇಶ್ವರಿ ಭಜನಾ‌ಮಂದಿರದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ವಿಜಯದಶಮಿ‌ ಉತ್ಸವದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಡಾl ಹೆಡಗೇವಾರರ ಸಂಕಲ್ಪ ಶಕ್ತಿ ಅದ್ಭುತವಾದದ್ದು. ಸಂಘದ ಸ್ಥಾಪನೆಯಿಂದ ಹಿಂದುತ್ವಕ್ಕೆ ಬಲ ಬಂದಿದೆ. ವಿಶ್ವಗುರು ಆಗಲು ನಮ್ಮ ಸಮಾಜಕ್ಕೆ ಸಾಧ್ಯ. ದೇಶ ಉಳಿದರೆ ಮಾತ್ರ ನಾವು ಉಳಿಯಲು ಸಾಧ್ಯ ಎಂದರು.
ಸಂಘದ ಜಿಲ್ಲಾ ಸಹಕಾರ್ಯವಾಹಕ ಸುಜಿತ್ ಕುಂಡಡ್ಕ ಬೌದ್ಧಿಕ್ ಮಾಡಿ ಸಂಘಕ್ಕೆ ನೂರು ವರ್ಷ ತುಂಬಿದ ಸಂದರ್ಭದಲ್ಲಿ ಪರಿಸರ ಸಂರಕ್ಷಣೆ, ಕುಟುಂಬ ನೀತಿಯ ಪಾಲನೆ, ನಾಗರಿಕ ಶಿಷ್ಟಾಚಾರ, ಸ್ವದೇಶಿ ವಸ್ತುಗಳ ಉಪಯೋಗದಂತಹ ಪಂಚಪರಿವರ್ತನೆಗೆ ನಾವೆಲ್ಲ ಮುಂದಡಿಯಿಡಬೇಕು ಎಂದರು.

ಸಂಘ ಶತಾಬ್ದಿಯ ಹಿನ್ನಲೆಯಲ್ಲಿ ಬಳಂಜ ಮಂಡಲದ ತೆಂಕಕಾರಂದೂರು, ಕರಂಬಾರು, ಶಿರ್ಲಾಲು, ನಾಲ್ಕೂರು, ಬಳಂಜ ಗ್ರಾಮದ ನೂರೈವತ್ತಕ್ಕೂ ಹೆಚ್ಚು ಸ್ವಯಂಸೇವಕರು ಗಣವೇಶಧಾರಿಗಳಾಗಿ ಭಾಗವಹಿಸಿದ್ದರು.

Related posts

ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿ ವಿದ್ಯಾರ್ಥಿಗಳಿಂದ ಶೇ. 100 ಫಲಿತಾಂಶ ದಾಖಲೆ

Suddi Udaya

ಕರ್ನಾಟಕ ದೇವಸ್ಥಾನ- ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ಜಿಲ್ಲಾ ಮಟ್ಟದ ಪರಿಷತ್ತು

Suddi Udaya

ಅಳದಂಗಡಿ ಅರಮನೆಯ ಅರಸರಿಂದ ಮತದಾನ: ಪತ್ನಿ ಜೊತೆ ಆಗಮಿಸಿ ಮತ ಚಲಾಯಿಸಿದ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ ಅಜಿಲರು

Suddi Udaya

ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘ ಬೆಳ್ತಂಗಡಿ, ಶ್ರೀ ಪೂರ್ಣಾನಂದ ಸೇವಾ ಪ್ರತಿಷ್ಠಾನ, ಹಾಗೂ ಮಹಿಳಾ ಸಂಘ ಬೆಳ್ತಂಗಡಿ ಇವುಗಳ ಆಶ್ರಯದಲ್ಲಿ : ಪರಮ ಪೂಜ್ಯ ಶ್ರೀ ಪೂರ್ಣಾನಂದ ಸ್ವಾಮಿಗಳ ಆರಾಧನಾ ಮಹೋತ್ಸವ

Suddi Udaya

ಕೊಡಗು ವಿಶ್ವವಿದ್ಯಾಲಯದ ವಿದ್ಯಾವಿಷಯಕ ಪರಿಷತ್ತಿಗೆ ವಿಧಾನ ಪರಿಷತ್ತಿನ ಶಾಸಕ ಪ್ರತಾಪ್ ಸಿಂಹ ನಾಯಕ್ ನೇಮಕ

Suddi Udaya

ಬೆಳ್ತಂಗಡಿ ಮಹಿಳಾ ವೃಂದದಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya
error: Content is protected !!