March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾರಾವಿ: ಮನೆಯಲ್ಲಿ ಯಾರು ಇಲ್ಲದ ವೇಳೆ ರೂ. 9.5 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ

ನಾರಾವಿ: ಕುತ್ಲೂರು ಗ್ರಾಮದ ಮಂಜುಶ್ರೀನಗರ ಶ್ರೀ ಅನಘ ಎಂಬಲ್ಲಿನ ನಿವಾಸಿ ಅವಿನಾಶ್ ಎಂಬವರ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯ ಬೀಗ ಒಡೆದು ನುಗ್ಗಿದ ಕಳ್ಳರು ರೂ. 9.5 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣಗಳನ್ನು ಕಳ್ಳತನ ಮಾಡಿದ ಘಟನೆ ನಡೆದಿದ್ದು ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮನೆಯವರು ಅ.2ರಂದು ಮನೆಗೆ ಬೀಗ ಹಾಕಿ ಹೋಗಿದ್ದು ಅ.6 ರಂದು ಬಂದು ನೋಡಿದಾಗ ಮನೆಯ ಬೀಗ ಒಡೆದಿದ್ದು ಕಳ್ಳತನವಾಗಿರುವುದು ಕಂಡು ಬಂದಿದೆ. ಮನೆಯೊಳಗೆ ಪ್ರವೇಶಿಸಿದ ಕಳ್ಳರು ಬೆಡ್ ರೂಮಿನ ಕಪಾಟಿನ ಬೀಗ ಒಡೆದು ಅದರೊಳಗೆ ಇಟ್ಟಿದ್ದ ಎರಡೆಳೆಯ ಚಿನ್ನದ ಕರಿಮಣಿ ಸರ ಮುತ್ತಿನ ಸರ, ಚಿನ್ನದ ಬ್ರಾಸ್ ಲೈಟ್, ಮಕ್ಕಳ ಎರಡು ಸರಗಳು, ಒಂದು ಉಂಗುರ, ಒಂದು ಬೆಂಡೋಲೆ, ಚಿನ್ನದ ಉಂಗುರಗಳು ಸೇರಿದಂತೆ ಸುಮಾರು 149 ಗ್ರಾಂ ಚಿನ್ನಾಭರಣಗಳನ್ನು ಕಳ್ಳತನ ಮಾಡಿದ್ದು ಅದರ ಮೌಲ್ಯ ಸುಮಾರು 9,50,000 ಎಂದು ಅಂದಾಜಿಸಲಾಗಿದೆ.

ಘಟನೆಯ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಅ.6 ರಂದು ಪ್ರಕರಣ ದಾಖಲಿಸಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related posts

ತೆಂಕಕಾರಂದೂರು ಗ್ರಾಮದಲ್ಲಿ ರಾಜರೋಷವಾಗಿ ತಿರುಗಾಡುತ್ತಿರುವ ಚಿರತೆ: ಜನತೆ ಕಂಗಾಲು

Suddi Udaya

ವೇಣೂರು ಭಗವಾನ್ ಶ್ರೀ ಬಾಹಬಲಿಯ ಮಹಾ ಮಜ್ಜನ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಹೆಗ್ಗಡೆ ಭೇಟಿ, ಅಟ್ಟಳಿಗೆ ಹಾಗೂ ಇತರ ಕಾಮಗಾರಿ ವೀಕ್ಷಣೆ

Suddi Udaya

ವರ್ಷ ಕಳೆದರೂ ಇನ್ನೂ ಜನರಿಗೆ ಉಪಯೋಗಕಿಲ್ಲದ ಮಚ್ಚಿನ ಶುದ್ಧ ಕುಡಿಯುವ ನೀರಿನ ಘಟಕ: ತುಕ್ಕು ಹಿಡಿಯುತ್ತಿರುವ ಮಿಷನರಿಗಳು

Suddi Udaya

ಮದ್ದಡ್ಕತಾಯಿ ಪಿಲಿ ಚಾಮುಂಡಿ ದೈವದ ವರ್ಷವಾದಿ ನೇವೋತ್ಸವ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ವಿದ್ಯೋದಯ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಗರ್ಡಾಡಿ : ಪ್ರಗತಿಪರ ಕೃಷಿಕ ಹಾಗೂ ಖ್ಯಾತ ಜ್ಯೋತಿಷಿ ಅನಂತ ಗೋವಿಂದ ಪಟವರ್ಧನ್ ನಿಧನ

Suddi Udaya
error: Content is protected !!