ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಯಿತು.
ವಾಲ್ಮೀಕಿ ಜಯಂತಿಯ ಕುರಿತು ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ವಿದ್ಯಾಲಕ್ಷ್ಮೀ ನಾಯಕ್ ಅವರು ಮಾತನಾಡಿ, ವಾಲ್ಮೀಕಿಯವರ ಆದರ್ಶ, ಮೌಲ್ಯ, ಜೀವನದಲ್ಲಿ ಪಾಲಿಸಿದ ತಾಳ್ಮೆ, ಜ್ಞಾನ ಶಿಕ್ಷಕರಿಗೆ ಪ್ರೇರಣೆ ಎಂದು ಹೇಳಿದರು.
ಮಹರ್ಷಿ ವಾಲ್ಮೀಕಿಯವರ ಭಾವಚಿತ್ರಕ್ಕೆ ಶಿಕ್ಷಕ ವೃಂದದಿಂದ ಪುಷ್ಪಾರ್ಚನೆ ಮಾಡಲಾಯಿತು.











