25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಆರೋಗ್ಯ ಮತ್ತು ನೈರ್ಮಲ್ಯದ ಕುರಿತು ಉಪನ್ಯಾಸ

ಉಜಿರೆ : ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ ಪ್ರಯುಕ್ತ ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಲೈಂಗಿಕ ಕಿರುಕುಳ ತಡೆಗಟ್ಟುವಿಕೆ ಸಮಿತಿ (POSH) ವತಿಯಿಂದ ಆರೋಗ್ಯ ಮತ್ತು ನೈರ್ಮಲ್ಯದ ಕುರಿತು ಒಂದು ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಮುಖ್ಯ ಅತಿಥಿಗಳಾಗಿ ಎಸ್ ಡಿ ಎಮ್ ಹಾಸ್ಪಿಟಲ್ ಉಜಿರೆಯ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞೆ ಶ್ರೀಮತಿ ಪ್ರಿಯಾಂಕಾ ಜಯದೇವ್ ಅವರು ಈ ಉಪನ್ಯಾಸ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಅವರು ಮಹಿಳೆಯರಿಗೆ ಸಾಮಾನ್ಯವಾಗಿ ಕಾಡುವಂತಹ ಆರೋಗ್ಯ ಸಮಸ್ಯೆಗಳು ಮತ್ತು ಅದನ್ನು ತಡೆಗಟ್ಟುವ ಬಗ್ಗೆ ಮಾಹಿತಿಯನ್ನು ನೀಡಿದರು. ಕ್ಯಾನ್ಸರ್ ರೋಗದ ಲಕ್ಷಣಗಳು, ಮುಂಜಾಗ್ರತಾ ಕ್ರಮಗಳು ಮತ್ತು ಲಸಿಕೆಗಳ ಬಗ್ಗೆ ತಿಳಿಸಿದರು . ಉತ್ತಮ ಗುಣಮಟ್ಟದ ಮತ್ತು ಆರೋಗ್ಯಕರ ಆಹಾರ ಪದ್ದತಿಯನ್ನು ಅನುಸರಿಸುವಂತೆ ಕರೆ ನೀಡಿದರು.

ವೇದಿಕೆಯಲ್ಲಿ ಲೈಂಗಿಕ ಕಿರುಕುಳ ತಡೆಗಟ್ಟುವಿಕೆ ಸಮಿತಿ (POSH) ಮುಖ್ಯಸ್ಥೆಯಾದ ಮೇರಿ ಸ್ಮಿತಾ ಉಪಸ್ಥಿತರಿದ್ದರು . ಉಪನ್ಯಾಸಕಿ ರೆನಿಟಾ‌ ಫೆರ್ನಾಂಡೀಸ್ ಕಾರ್ಯಕ್ರಮವನ್ನು ನಿರೂಪಿಸಿ, ವಂದಿಸಿದರು.

ಮಹಿಳಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

Related posts

ಮದ್ದಡ್ಕತಾಯಿ ಶ್ರೀ ರಕ್ತೇಶ್ವರಿ ಮತ್ತು ಪಿಲಿಚಾಮುಂಡಿ ದೈವಸ್ಥಾದ‌ಲ್ಲಿ ದೈವಗಳ ಪ್ರತಿಷ್ಠಾ ಕಾರ್ಯಕ್ರಮ‌ ಹಾಗೂ ನೇಮೋತ್ಸವ

Suddi Udaya

ಕೊಯ್ಯೂರು: ಹಲವಾರು ಬಿಜೆಪಿ ಕಾರ್ಯಕರ್ತರು ಕಾಂಗ್ರೇಸ್ ಸೇರ್ಪಡೆ

Suddi Udaya

ಕೃಷಿ ಕ್ಷೇತ್ರದಲ್ಲಿ ಸಾಧನೆಗೈದ ಕಡಮ್ಮಾಜೆ ಫಾರ್ಮ್ಸ್ ನ ದೇವಿಪ್ರಸಾದ್ ಕೆ. ಗೌಡರಿಗೆ ಕನ್ನಡಿಗ-2026 ಪ್ರಶಸ್ತಿ

Suddi Udaya

ಐತಿಹಾಸಿಕ ಕಾಜೂರು ಮಖಾಂ ಉರೂಸ್ ಉದ್ಘಾಟನೆ: ಅಲ್ಲಾಹನ‌ ನೋಟ ಹೃದಯಕ್ಕೆ ಮಾತ್ರ; ವೈಎಂಕೆ ಡಾ. ಅಬ್ದುಲ್ಲ ಕುಂಞಿ

Suddi Udaya

ಕಳೆಂಜ: ಅಕ್ರಮ ಗೋ ಸಾಗಾಟ: ಇಬ್ಬರ ಬಂಧನ

Suddi Udaya

ಉಜಿರೆಯ ಮುಹಮ್ಮದ್ ನಿಶ್ವಾನ್ ರವರಿಗೆ ಎನ್ ಎಸ್ ಎಸ್ ಅತ್ಯುತ್ತಮ ಸ್ವಯಂಸೇವಕ ರಾಜ್ಯ ಪ್ರಶಸ್ತಿ ಪ್ರದಾನ

Suddi Udaya
error: Content is protected !!