23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕರಂಬಾರು: ರಾಷ್ಟ್ರೀಯ ಸ್ವಯಂಸೇವಕ ಸಂಘದಿಂದ ವಿಜಯದಶಮಿ‌ ಉತ್ಸವ

ಬೆಳ್ತಂಗಡಿ: ಪ್ರಬಲ ಸಂಕಲ್ಪ ಶಕ್ತಿ ಇದ್ದರೆ ಮಹಾನ್ ಕಾರ್ಯಗಳು ನಡೆಯುತ್ತವೆ. ಇದಕ್ಕೆ ರಾಷ್ಟ್ರೀಯ ಸ್ವಯಂಸೇವಕ ಸಂಘವೇ ನಿದರ್ಶನ ಎಂದು ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಆಡಳಿತೆ ಮೊಕ್ತೇಸರ ಕೃಷ್ಣ ಸಂಪಿಗೆತ್ತಾಯ ಹೇಳಿದರು.
ಅವರು ಕರಂಬಾರು ಜ್ಞಾನೇಶ್ವರಿ ಭಜನಾ‌ಮಂದಿರದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ವಿಜಯದಶಮಿ‌ ಉತ್ಸವದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಡಾl ಹೆಡಗೇವಾರರ ಸಂಕಲ್ಪ ಶಕ್ತಿ ಅದ್ಭುತವಾದದ್ದು. ಸಂಘದ ಸ್ಥಾಪನೆಯಿಂದ ಹಿಂದುತ್ವಕ್ಕೆ ಬಲ ಬಂದಿದೆ. ವಿಶ್ವಗುರು ಆಗಲು ನಮ್ಮ ಸಮಾಜಕ್ಕೆ ಸಾಧ್ಯ. ದೇಶ ಉಳಿದರೆ ಮಾತ್ರ ನಾವು ಉಳಿಯಲು ಸಾಧ್ಯ ಎಂದರು.
ಸಂಘದ ಜಿಲ್ಲಾ ಸಹಕಾರ್ಯವಾಹಕ ಸುಜಿತ್ ಕುಂಡಡ್ಕ ಬೌದ್ಧಿಕ್ ಮಾಡಿ ಸಂಘಕ್ಕೆ ನೂರು ವರ್ಷ ತುಂಬಿದ ಸಂದರ್ಭದಲ್ಲಿ ಪರಿಸರ ಸಂರಕ್ಷಣೆ, ಕುಟುಂಬ ನೀತಿಯ ಪಾಲನೆ, ನಾಗರಿಕ ಶಿಷ್ಟಾಚಾರ, ಸ್ವದೇಶಿ ವಸ್ತುಗಳ ಉಪಯೋಗದಂತಹ ಪಂಚಪರಿವರ್ತನೆಗೆ ನಾವೆಲ್ಲ ಮುಂದಡಿಯಿಡಬೇಕು ಎಂದರು.

ಸಂಘ ಶತಾಬ್ದಿಯ ಹಿನ್ನಲೆಯಲ್ಲಿ ಬಳಂಜ ಮಂಡಲದ ತೆಂಕಕಾರಂದೂರು, ಕರಂಬಾರು, ಶಿರ್ಲಾಲು, ನಾಲ್ಕೂರು, ಬಳಂಜ ಗ್ರಾಮದ ನೂರೈವತ್ತಕ್ಕೂ ಹೆಚ್ಚು ಸ್ವಯಂಸೇವಕರು ಗಣವೇಶಧಾರಿಗಳಾಗಿ ಭಾಗವಹಿಸಿದ್ದರು.

Related posts

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ನಲ್ಲಿ ಕಂಠಿ ಉತ್ಸವಕ್ಕೆ ಚಾಲನೆ ಹಾಗೂ ಕೃಷಿ ಸಾಧಕರಿಗೆ ” ಶ್ರೇಷ್ಠ ಕೃಷಿ ಸಾಧಕ ” ಪ್ರಶಸ್ತಿ

Suddi Udaya

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ ನೇತೃತ್ವದಲ್ಲಿ ಕ್ಯಾನ್ಸರ್ ಜನಜಾಗೃತಿ ಹಾಗೂ ಕ್ಯಾನ್ಸರ್ ರೋಗಿಗಳಿಗಾಗಿ ಧನ ಸಹಾಯ ಸಂಗ್ರಹಣಾ ಅಭಿಯಾನ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರ

Suddi Udaya

ಎ.19-26: ಪಾರಸ್‌ ಪೃಥ್ವಿ ಜುವೆಲ್ಸ್‌ನಲ್ಲಿ ಅಕ್ಷಯ ತೃತೀಯದ ಪ್ರಯುಕ್ತ ಚಿನ್ನಾಭರಣಗಳ ಮೇಲೆ ವಿಶೇಷ ಕೊಡುಗೆ

Suddi Udaya

ಸುಲ್ಕೇರಿ: ಎಸ್.ಡಿ.ಎಂ ಸ್ನಾತಕೋತ್ತರ ಪದವಿ ಕೇಂದ್ರ ಮತ್ತು ಗ್ರಾ.ಪಂ ವತಿಯಿಂದ ಗ್ರಾಮ‌ ಸಮೀಕ್ಷೆ ಕಾರ್ಯಕ್ರಮ

Suddi Udaya

ಯುವವಾಹಿನಿ ಅಂತರ್ ಘಟಕ ಸಾಂಸ್ಕೃತಿಕ ಸ್ಪರ್ಧೆ ಬೆಳ್ತಂಗಡಿ ಘಟಕ ತೃತೀಯ ಸ್ಥಾನ

Suddi Udaya
error: Content is protected !!