22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾರಾವಿ: ಮನೆಯಲ್ಲಿ ಯಾರು ಇಲ್ಲದ ವೇಳೆ ರೂ. 9.5 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ

ನಾರಾವಿ: ಕುತ್ಲೂರು ಗ್ರಾಮದ ಮಂಜುಶ್ರೀನಗರ ಶ್ರೀ ಅನಘ ಎಂಬಲ್ಲಿನ ನಿವಾಸಿ ಅವಿನಾಶ್ ಎಂಬವರ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯ ಬೀಗ ಒಡೆದು ನುಗ್ಗಿದ ಕಳ್ಳರು ರೂ. 9.5 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣಗಳನ್ನು ಕಳ್ಳತನ ಮಾಡಿದ ಘಟನೆ ನಡೆದಿದ್ದು ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮನೆಯವರು ಅ.2ರಂದು ಮನೆಗೆ ಬೀಗ ಹಾಕಿ ಹೋಗಿದ್ದು ಅ.6 ರಂದು ಬಂದು ನೋಡಿದಾಗ ಮನೆಯ ಬೀಗ ಒಡೆದಿದ್ದು ಕಳ್ಳತನವಾಗಿರುವುದು ಕಂಡು ಬಂದಿದೆ. ಮನೆಯೊಳಗೆ ಪ್ರವೇಶಿಸಿದ ಕಳ್ಳರು ಬೆಡ್ ರೂಮಿನ ಕಪಾಟಿನ ಬೀಗ ಒಡೆದು ಅದರೊಳಗೆ ಇಟ್ಟಿದ್ದ ಎರಡೆಳೆಯ ಚಿನ್ನದ ಕರಿಮಣಿ ಸರ ಮುತ್ತಿನ ಸರ, ಚಿನ್ನದ ಬ್ರಾಸ್ ಲೈಟ್, ಮಕ್ಕಳ ಎರಡು ಸರಗಳು, ಒಂದು ಉಂಗುರ, ಒಂದು ಬೆಂಡೋಲೆ, ಚಿನ್ನದ ಉಂಗುರಗಳು ಸೇರಿದಂತೆ ಸುಮಾರು 149 ಗ್ರಾಂ ಚಿನ್ನಾಭರಣಗಳನ್ನು ಕಳ್ಳತನ ಮಾಡಿದ್ದು ಅದರ ಮೌಲ್ಯ ಸುಮಾರು 9,50,000 ಎಂದು ಅಂದಾಜಿಸಲಾಗಿದೆ.

ಘಟನೆಯ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಅ.6 ರಂದು ಪ್ರಕರಣ ದಾಖಲಿಸಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related posts

ಕಾಶಿಪಟ್ಣ ಗ್ರಾ.ಪಂ. ಗೆ ಗಾಂಧೀ ಗ್ರಾಮ ಪುರಸ್ಕಾರ ಪ್ರಶಸ್ತಿ ಪ್ರದಾನ: ಸತೀಶ್. ಕೆ ಕಾಶಿಪಟ್ಣ ಮತ್ತು ಪಂ.ಅ.ಅ. ರಾಘವೇಂದ್ರ ಪಟೇಲ್ ರಿಂದ ಪ್ರಶಸ್ತಿ ಸ್ವೀಕಾರ

Suddi Udaya

ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಮಡಂತ್ಯಾರು ವಲಯದ ಅಧ್ಯಕ್ಷರಾಗಿ ವಸಂತಿ ಲಕ್ಷ್ಮಣ್, ಕಾರ್ಯದರ್ಶಿಯಾಗಿ ಸುಮಲತಾ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಪ್ರಯುಕ್ತ ಸಮರ ಸನ್ನಾಹ ತಾಳಮದ್ದಳೆ

Suddi Udaya

ನಡ: ಮಂಚದಪಲ್ಕೆ ಚಂದ್ಕೂರು ನಿವಾಸಿ ಸುಮಂಗಳ ನಿಧನ

Suddi Udaya

ಬೆಳ್ತಂಗಡಿಯಲ್ಲಿ ಅನುಗ್ರಹ ಟ್ರೈನಿಂಗ್ ಕಾಲೇಜು ಕ್ಯಾಂಪಸ್ ಉದ್ಘಾಟನೆ

Suddi Udaya

ಕುಂಭಶ್ರೀ ವಿದ್ಯಾಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
error: Content is protected !!